ಶಿವಮೊಗ್ಗ | ಸಕ್ರೆಬೈಲ್​ ಸುತ್ತಮುತ್ತ ಒಂಟಿ ಸಲಗ ಪ್ರತ್ಯಕ್ಷ

Date:

ಶಿವಮೊಗ್ಗ, ಭದ್ರಾ ಅಭಯಾರಣ್ಯದಿಂದ ತುಂಗಾ ನದಿ ದಾಟಿ ಸಕ್ರೆಬೈಲ್​ ಸುತ್ತ ಮುತ್ತ ಒಂಟಿ ಸಲಗ ಪ್ರತ್ಯಕ್ಷವಾಗಿದೆ.ಅಷ್ಟೇ ಅಲ್ಲದೆ ಸಕ್ರೆಬೈಲ್​ ಸುತ್ತಾಮುತ್ತಾ ಈ ಒಂಟಿ ಸಲಗ ದಾಂಧಲೆ ನಡೆಸುತ್ತಿದ್ದು, ರೈತರು ಬೆಳೆದ ತೆಂಗು ಹಾಗೂ ಬಾಳೆಗಿಡಗಳನ್ನು ನಾಶ ಮಾಡಿದೆ. ಆನೆಯ ಓಡಾಟವನ್ನು ವಿಡಿಯೋದಲ್ಲಿ ಸೆರೆ ಹಿಡಿದಿರುವ ಸಾರ್ವಜನಿಕರು ಅದನ್ನು ಓಡಿಸಲು ಹರಸಾಹಸ ಪಡುತ್ತಿದ್ದಾರೆ.

ಆದರೆ ಅದ್ಯಾವುದಕ್ಕೂ ಕ್ಯಾರೇ ಮಾಡದ ಒಂಟಿ ಸಲಗ ತೋಟದಲ್ಲಿ ಸಿಕ್ಕ ವಸ್ತುಗಳನ್ನು ತಿನ್ನುತ್ತಾ ನದಿಯಲ್ಲಿ ಈಜುತ್ತಾ ಆನೆ ನಡೆದಿದ್ದೇ ದಾರಿ ಎಂಬಂತೆ ಓಡಾಡುತ್ತಿದೆ. ಈ ಹಿಂದೆಯೂ ಸಹ ಅನೇಕ ಕಾಡಾನೆಗಳು ಭದ್ರಾ ಅಭಯಾರಣ್ಯದಿಂದ ನದಿ ದಾಟಿ ಈಚೆಗೆ ಬಂದಿದ್ದವು.

ಕಳೆದ ತಿಂಗಳು ಸಹ ಸಕಲೇಶ್​ಪುರದಿಂದ ರೇಡಿಯೋ ಕಾಲರ್​ ಆನೆಯೊಂದು ಬಂದಿತ್ತು, ನಂತರ ಸಕ್ರೆಬೈಲ್​ನ ಕುಮ್ಕಿ ಆನೆಗಳ ಸಹಾಯದಿಂದ ಅದನ್ನು ಸೆರೆಹಿಡಿಯಲಾಗಿತ್ತು. ಇದೀಗ ಮತ್ತೊಂದು ಆನೆ ಪ್ರತ್ಯಕ್ಷವಾಗಿದ್ದು, ರೈತರಿಗೆ ಸಂಕಟವಾಗಿ ಪರಿಣಮಿಸಿದೆ. ಆನೆಯನ್ನು ಕೂಡಲೇ ಸೆರೆಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...