ಶಿವಮೊಗ್ಗ | ಲಾರಿ ಟರ್ಮಿನಲ್ ಸ್ಥಾಪನೆಗೆ ಲಾರಿ ಮಾಲಿಕರ ಆಗ್ರಹ

Date:

ಶಿವಮೊಗ್ಗ ನಗರಕ್ಕೆ ಒಂದು ಸಂಯುಕ್ತ ಟ್ರಕ್ ಟರ್ಮಿನಲ್ ನಿರ್ಮಿಸಲು ಹಲವಾರು ಸಾರಿ ಪ್ರಾದೇಶಿಕ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರೂ ಕೂಡ ಸ್ಥಳವನ್ನು ಗುರುತಿಸದೇ ನಮ್ಮ ವಾಹನಗಳನ್ನು ನಿಲ್ಲಿಸಲು ಟ್ರಕ್ ಟರ್ಮಿನಲ್ ನ ವ್ಯವಸ್ಥೆ ಮಾಡಿರುವುದಿಲ್ಲ.

ಇದರಿಂದ ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸುವ ಪರಿಸ್ಥಿತಿ ಎದುರಾಗಿದೆ ಎಂದು ಜಿಲ್ಲಾ ಲಾರಿ ಮಾಲೀಕರ ಸಂಘ ಮತ್ತು ಶಿವಮೊಗ್ಗ ಜಿಲ್ಲಾ ಲಾರಿ ಫೆಡರೇಷನ್ ಏಜೆಂಟ್ ಹೇಳಿದೆ.ಪತ್ರಿಕಾಗೋಷ್ಠಿಯಲ್ಲಿ‌ ಮಾತನಾಡಿದ ಸಂಘದ ಅಧ್ಯಕ್ಷ ತಲ್ಕೀನ್ ಅಹಮದ್, ರಸ್ತೆ ಅಂಚಿನಲ್ಲಿ ಲಾರಿ ನಿಲ್ಲಿದುವುದರಿಂದ ಲಾರಿಗಳಲ್ಲಿ ಕಳ್ಳತನ ಹಾಗೂ ಪೋಲಿಸರ ಕಾಟಗಳನ್ನು ಎದುರಿಸುತ್ತಿದ್ದೇವೆ.

ಆದುದರಿಂದ ನಮ್ಮ ವಾಹನಗಳ ಸುರಕ್ಷತೆಗಾಗಿ ಹಾಗೂ ಪಾರ್ಕಿಂಗ್ ಗಾಗಿ ಆದಷ್ಟು ಬೇಗ ಟ್ರಕ್ ಟರ್ಮಿನಲ್ ಅನ್ನು ನಿರ್ಮಿಸಿಕೊಡಬೇಕಾಗಿ ಜಿಲ್ಲಾಧಿಕಾರಿಗಳಿಗೆ ಹಾಗೂ ಪ್ರಾದೇಶಿಕ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡರು. ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 5 ಸಾವಿರ ಸರಕು ಸಾಗಾಣಿಕೆ ವಾಹನಗಳು ಇವೆ. ಆದುದರಿಂದ ಆದಷ್ಟು ಬೇಗ ಟ್ರಕ್ ಟರ್ಮಿನಲ್ ಅನ್ನು ನಿರ್ಮಿಸಿಕೊಡಬೇಕಾಗಿ ಮನವಿ ಮಾಡಿದರು.ಹೊಸದಾಗಿ ನಮ್ಮ ಸಂಘಕ್ಕೆ ಸದಸ್ಯರನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದು, 26-26 ನೇ ಸಾಲಿಗೆ ಹೊಸದಾಗಿ ಸದಸ್ಯರನ್ನು ತೆಗೆದುಕೊಳ್ಳುತ್ತಿದ್ದೇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘದಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಇರುವವರು ತಮ್ಮ ವಾಹನಗಳ ಆರ್.ಸಿ ಮಾಲೀಕರು ಆಧಾರ್ ಕಾರ್ಡ್ ಜೊತೆಗೆ ಒಂದು ಫೋಟೋ ತೆಗೆದುಕೊಂಡು ಶಿವಮೊಗ್ಗ ಶಂಕರ ಮಠದ ಹತ್ತಿರ ಇರುವ ನಮ್ಮ ಸಂಘದ ಕಚೇರಿಗೆ ಬಂದು 25-26 ನೇ ಸಾಲಿನ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಬಹುದು ಎಂದರು.

ಪ್ರತಿ ತಾಲ್ಲೂಕಿನ ಅಧ್ಯಕ್ಷರು ಆಯಾ ತಾಲ್ಲೂಕಿನ ಸರಕು ಸಾಗಾಣಿಕೆ ವಾಹನಗಳ ಮಾಲೀಕರ ಸದಸ್ಯತ್ವವನ್ನು ನೊಂದಾಯಿಸಲು ಕೋರಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಶಿವಮೊಗ್ಗದ ಬಿ.ಎ. ತಲಕೀನ್ ಅಹಮದ್- 94481 27798 ಭದ್ರಾವತಿಯ ನಾಗೇಶ್ 91088 43670, ಶಿಕಾರಿಪುರದ ಬಾಬು-88727 54475, ಸಾಗರದ ಜಾವೀದ್:88727 54475 ತೀರ್ಥಹಳ್ಳಿಯ ರಂಜಿತ್ ಶೆಟ್ಟಿ-88727 54475 ಇವರನ್ನು ಸಂಪರ್ಕಿಸಬಹುದೆಂದರು.j

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...