ಶಿವಮೊಗ್ಗ | ಐದನೇ ಬಾರಿ ಭರ್ತಿಯಾದ ಮಾಣಿ ಡ್ಯಾಂ

Date:

ಶಿವಮೊಗ್ಗ, ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾದ, ‘ಪರ್ವತಗಳ ಬಟ್ಟಲು’ ಎಂದು ಖ್ಯಾತಿ ಪಡೆದಿರುವ ಮಾಣಿ ಜಲಾಶಯ ಏಳು ವರ್ಷಗಳ ನಂತರ ಸಂಪೂರ್ಣವಾಗಿ ಭರ್ತಿಯಾಗಿದೆ.

ಈ ಹಿನ್ನೆಲೆಯಲ್ಲಿ ಜಲಾಶಯದ ಮೂರು ಕ್ರೆಸ್ಟ್‌ ಗೇಟ್‌ಗಳಿಂದ 2063 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗಿದ್ದು, ತೀರ ಪ್ರದೇಶದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ವಿದ್ಯುತ್ ಸಮಸ್ಯೆಯನ್ನು ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಈ ಡ್ಯಾಂ ಭರ್ತಿಯಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.ಕುಂದಾಪುರ ತಾಲೂಕಿನ ಹಾಲಾಡಿ ಬಳಿ ಅರಬ್ಬಿ ಸಮುದ್ರ ಸೇರುತ್ತಿದ್ದ ವರಾಹಿ ನದಿಗೆ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಸಮೀಪದಲ್ಲಿ, ಬೆಟ್ಟಗಳ ನಡುವೆ ಈ ಜಲಾಶಯವನ್ನು ಕಟ್ಟಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನ ಪಶ್ಚಿಮಘಟ್ಟ ಪ್ರದೇಶದ ಕಣಿವೆಗಳಲ್ಲಿರುವ ಒಟ್ಟು 11 ಗುಡ್ಡಗಳಿಗೆ ತಡೆಗೋಡೆಗಳನ್ನು ನಿರ್ಮಿಸಲಾಗಿದೆ.

ಇವುಗಳನ್ನು ಸ್ಥಳೀಯವಾಗಿ ‘ಪಲ್ಲಣಕಟ್ಟೆ’ಗಳು ಎಂದು ಕರೆಯುತ್ತಾರೆ.

ಎತ್ತರದ ಪ್ರದೇಶದಲ್ಲಿನ ಬೆಟ್ಟಗಳನ್ನು ಕೂಡಿಸಿ ನಿರ್ಮಿಸಿರುವುದರಿಂದ, ಮಾಣಿ ಡ್ಯಾಂಗೆ ‘ಪರ್ವತಗಳ ಮೇಲಿನ ಬಟ್ಟಲು’ ಎಂದು ಕರೆಯಲಾಗುತ್ತದೆ.

ಜಲಾಶಯದೊಳಗೆ ವರಾಹಿ ನದಿ ಮುಳುಗಿ ಹೋಗಿದ್ದು, ಕಣಿವೆ ಸುತ್ತಮುತ್ತಲ ಮಳೆ ನೀರೇ ಇದರ ಮುಖ್ಯ ಆಧಾರವಾಗಿದೆ. ಹೀಗಾಗಿ, ಧಾರಾಕಾರ ಮಳೆ ಸುರಿದರೂ ಒಳಹರಿವು ಅಪರೂಪವಾಗಿ 10 ಸಾವಿರ ಕ್ಯೂಸೆಕ್ ದಾಟುತ್ತದೆ.31.13 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 29 ಟಿಎಂಸಿ ನೀರು ಸಂಗ್ರಹಗೊಂಡಿದೆ. ಗರಿಷ್ಠ 954.36 ಮೀಟರ್ ನೀರಿನ ಮಟ್ಟ ಹೊಂದಿರುವ ಮಾಣಿ ಡ್ಯಾಂನಲ್ಲಿ ಈ ಬಾರಿ 594.19 ಅಡಿ ನೀರು ಸಂಗ್ರಹಗೊಂಡಿದ್ದು, ಬಹುತೇಕ ಭರ್ತಿಯಾಗಿದೆ.

ಡ್ಯಾಂನಲ್ಲಿ ಸಂಗ್ರಹಗೊಂಡ ನೀರನ್ನು ಬಳಸಿ ಅಣೆಕಟ್ಟೆ ವಿದ್ಯುದಾಗಾರದ ಬಳಿ 9 ಮೆಗಾವ್ಯಾಟ್ ಮತ್ತು ಉಡುಪಿ ತಾಲೂಕಿನ ಹೊಸಂಗಡಿ ಭೂಗರ್ಭ ವಿದ್ಯುದಾಗಾರದಲ್ಲಿ 460 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ.

ಐದನೇ ಬಾರಿಗೆ ಭರ್ತಿಯಾದ ಡ್ಯಾಂ 1978 ರಲ್ಲಿ ನಿರ್ಮಿಸಿದಾಗಿನಿಂದ, ಇದುವರೆಗೆ ಮಾಣಿ ಡ್ಯಾಂ ಕೇವಲ ಐದು ಬಾರಿ ಮಾತ್ರ ಸಂಪೂರ್ಣ ಭರ್ತಿಯಾಗಿದೆ.

ಈ ಹಿಂದೆ 1994, 2006, 2007, 2013 ಮತ್ತು 2018ರಲ್ಲಿ ಜಲಾಶಯ ಭರ್ತಿಯಾಗಿತ್ತು. ಈ ಬಾರಿ ಜಲಾನಯನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮಾಣಿ ಜಲಾಶಯ ಭರ್ತಿಯಾಗಿದೆ. ಈ ಮೂಲಕ ರಾಜ್ಯದ ವಿದ್ಯುತ್ ಸಮಸ್ಯೆಯನ್ನು ನೀಗಿಸಲು ಸಹಕಾರಿಯಾಗಿದೆ. ಜಲಾಶಯದ ವ್ಯಾಪ್ತಿಯಲ್ಲಿ ಇನ್ನಷ್ಟು ಮಳೆಯಾದರೆ, ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಬಿಡಲು ಅಧಿಕಾರಿಗಳು ನಿರ್ಧರಿಸಿದ್ದು, ಈಗಾಗಲೇ ಮುನ್ನೆಚ್ಚರಿಕೆ ನೀಡಲಾಗಿದೆ.

ಸೆಪ್ಟೆಂಬರ್ 3 ರಂದು ಮುಖ್ಯ ಅಭಿಯಂತರರಾದ ಮಾದೇಶ್ ಅವರು ಪೂಜೆಯಲ್ಲಿ ಪಾಲ್ಗೊಂಡು ಬಾಗಿನ ಅರ್ಪಿಸಿದರು.

ಈ ಸಂದರ್ಭದಲ್ಲಿ ಮಹೇಶ್, ಪ್ರಕಾಶ್, ಶಿವಕುಮಾರ್, ಪ್ರದೀಪ್, ಬಾಲಕೃಷ್ಣ ಶಾಸ್ತ್ರಿ, ಲೋಹಿತ್ ಸೇರಿದಂತೆ ಅನೇಕ ಅಧಿಕಾರಿಗಳು, ನೌಕರರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು. ನಂತರ ಡ್ಯಾಂ ಗೇಟ್‌ಗಳನ್ನು ತೆರೆದು ನೀರನ್ನು ಪಿಕಪ್ ಅಣೆಕಟ್ಟೆಗೆ ಹರಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...