ಶಿವಮೊಗ್ಗ | ಮಾದಕ ದ್ರವ್ಯ ಮುಕ್ತ ಕರ್ನಾಟಕ ಧ್ಯೇಯ ವಾಕ್ಯದೊಂದಿಗೆ ಮ್ಯಾರಥಾನ್ ಓಟ

Date:

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಭಾನುವಾರ ಬೆಳಿಗ್ಗೆ ನಗರದಲ್ಲಿ ಮಹಿಳೆಯರು ಮತ್ತು ಪುರುಷರಿಗಾಗಿ 5ಕೆ ಮತ್ತು ಪುರುಷರಿಗಾಗಿ 10ಕೆ ಕರ್ನಾಟಕ ಸ್ಟೇಟ್‌ ಪೊಲೀಸ್‌ ರನ್‌-2025 ಮ್ಯಾರಥಾನ್ ಓಟವನ್ನು ಹಮ್ಮಿಕೊಳ್ಳಲಾಗಿತ್ತು.

ಕರ್ನಾಟಕ ರಾಜ್ಯ ಪೊಲೀಸ್ ಓಟ–2024ರ ಯಶಸ್ಸಿನ ಹಿನ್ನೆಲೆಯಲ್ಲಿ, 2ನೇ ಆವೃತ್ತಿಯ ಕರ್ನಾಟಕ ರಾಜ್ಯ ಪೊಲೀಸ್ ಓಟವನ್ನು ನಮ್ಮ ಪೊಲೀಸ್ ನಮ್ಮ ಹೆಮ್ಮೆ, ಎಲ್ಲರಿಗಾಗಿ ಫಿಟ್‌ನೆಸ್ ಮತ್ತು ಮಾದಕ ದ್ರವ್ಯ ಮುಕ್ತ ಕರ್ನಾಟಕ ಧ್ಯೇಯ ವಾಕ್ಯದೊಂದಿಗೆ ನಡೆದ ಕರ್ನಾಟಕ ಸ್ಟೇಟ್‌ ಪೊಲೀಸ್‌ ರನ್‌-2025 ಮ್ಯಾರಥಾನ್ ಓಟಕ್ಕೆ ಶಾಸಕ ಚನ್ನಬಸಪ್ಪ, ಡಾ. ಧನಂಜಯ್ ಸರ್ಜಿ ಸೇರಿದಂತೆ ಇತರರು ಚಾಲನೆ ನೀಡಿದರು.

ಮ್ಯಾರಥಾನ್ ಓಟವನ್ನು ಡಿಎಆರ್ ಪೊಲೀಸ್ ಕವಾಯತು ಮೈದಾನದಿಂದ ಪ್ರಾರಂಭಿಸಿ, ಅಶೋಕ ವೃತ್ತ, ಅಮೀರ್ ಅಹಮ್ಮದ್ ವೃತ್ತ, ಶಿವಪ್ಪ ನಾಯಕ ವೃತ್ತ, ಕರ್ನಾಟಕ ಸಂಘ ವೃತ್ತ, ಡಿವಿಎಸ್ ವೃತ್ತ, ಮಹಾವೀರ ವೃತ್ತ, ಶಿವಮೂರ್ತಿ ವೃತ್ತ, ಜೈಲ್ ವೃತ್ತ, ಐಬಿ ವೃತ್ತದ ಮುಖಾಂತರ ಡಿಎಆರ್ ಪೊಲೀಸ್ ಕವಾಯತು ಮೈದಾನಕ್ಕೆ ಬಂದು ಮುಕ್ತಾಯವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

10ಕೆ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಕಿರಣ್, ದ್ವಿತೀಯ ಸ್ಥಾನವನ್ನು ನಂದನ್ ತೃತೀಯ ಸ್ಥಾನವನ್ನು ಭರತ್ ಅವರು ಹಾಗೂ 5ಕೆ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಬಾಲು ದ್ವಿತೀಯ ಸ್ಥಾನವನ್ನು ಧನರಾಜ್ ತೃತೀಯ ಸ್ಥಾನವನ್ನು ಧನುಷ್ ಹಾಗೂ 5ಕೆ ಮಹಿಳೆಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ದೀಕ್ಷಾ ದ್ವಿತೀಯ ಸ್ಥಾನವನ್ನು ಸಾನಿಕ ತೃತೀಯ ಸ್ಥಾನವನ್ನು ಸೋನಿಯಾ ಪಡೆದರು.

ಪ್ರಥಮ ಸ್ಥಾನ ಪಡೆದ ವಿಜೇತರಿಗೆ ₹10,000 ನಗದು ಬಹುಮಾನ, ಪದಕ ಮತ್ತು ಪ್ರಶಸ್ತಿ ಪತ್ರ, ದ್ವಿತೀಯ ಸ್ಥಾನ ಪಡೆದ ವಿಜೇತರಿಗೆ ₹8,000 ನಗದು ಬಹುಮಾನ, ಪದಕ ಮತ್ತು ಪ್ರಶಸ್ತಿ ಪತ್ರವನ್ನು ಹಾಗೂ ತೃತೀಯ ಸ್ಥಾನ ಪಡೆದ ವಿಜೇತರಿಗೆ ₹5,000 ನಗದು ಬಹುಮಾನ, ಪದಕ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಅಭಿನಂದಿಸಲಾಯಿತು. ಜತೆಗೆ ಮ್ಯಾರಥಾನ್‌ನಲ್ಲಿ ಭಾಗವಹಿಸಿ, ಪೂರ್ಣಗೊಳಿಸಿದ ಎಲ್ಲರಿಗೂ ಪ್ರಶಂಸನಾ ಪತ್ರ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಲಾರಿ-ಕಾರು ನಡುವೆ ಭೀಕರ ಅಪಘಾತ; ಬಿಎಂಟಿಸಿ ನಿವೃತ್ತ ನೌಕರ ಸೇರಿ ಐವರ ಸಾವು

ಈ ಸಂದರ್ಭದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣ, ಸೈಬರ್ ಸುರಕ್ಷತಾ ಕ್ರಮಗಳು ಮತ್ತು ಸಂಚಾರ ನಿಯಮಗಳ ಕಡ್ಡಾಯ ಪಾಲನೆಯ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.

ಯುವಜನ ಮತ್ತು ಕ್ರೀಡಾ ಇಲಾಖೆಯ ವಿಧ್ಯಾರ್ಥಿಗಳು, ವಿವಿಧ ಶಾಲಾ ಕಾಲೇಜುಗಳ ವಿಧ್ಯಾರ್ಥಿಗಳು, ಶಿವಮೊಗ್ಗದ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂಧಿಗಳು ಮತ್ತು ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...