ಶಿವಮೊಗ್ಗ | ಕಾನೂನು ಸಮರದಲ್ಲಿ ಶೀಘ್ರ ನ್ಯಾಯ ಸಿಗಲಿ, RMM ಅಭಿಮಾನಿಯಿಂದ ದೇವರ ಮೊರೆ

Date:

ಶಿವಮೊಗ್ಗ DCC ಬ್ಯಾಂಕ್ ಅವ್ಯವಹಾರದ ಕೇಸಿನಲ್ಲಿ ನ್ಯಾಯಾಂಗ ಬಂದನದಲ್ಲಿರುವ DCC ಬ್ಯಾಂಕ್ ಮಾಜಿ ಅಧ್ಯಕ್ಷರು ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ RM ಮಂಜುನಾಥ ಗೌಡರಿಗೆ ಈ ಕಾನೂನು ಸಮರದಲ್ಲಿ ಶೀಘ್ರ ನ್ಯಾಯಸಿಗಲಿ .ಈ ಆರೋಪದಿಂದ ಶೀಘ್ರವಾಗಿ ನಮ್ಮ ನಾಯಕರು ಬಿಡುಗಡೆಯಾಗಲಿ ಎಂದು ಮಂಜುನಾಥ್ ಗೌಡರ ಅಭಿಮಾನಿಯಾದ ಕುರುವಳ್ಳಿ ನಾಗರಾಜ್ ಪ್ರಾರ್ಥಿಸಿಕೊಂಡು ನಾಗಮಂಗಲ ತಾಲೂಕಿನ ಶ್ರೀ ಆದಿಚುಂಚನಗಿರಿ ಕ್ಷೇತ್ರದ ಕಾಲಭೈರವೇಶ್ವರ ಸ್ವಾಮಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಅನ್ನದಾನ ಸೇವೆ ನಡೆಸಲಾಗಿದೆ.

ಮಂಜುನಾಥ ಗೌಡರು ಶೀಘ್ರವಾಗಿ ಸಾರ್ವಜನಿಕರ ಸೇವೆಯಲ್ಲಿ ಪಾಲ್ಗೊಳ್ಳಲಿ ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮಿ ಅವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎಂ ಶ್ರೀಕಾಂತ್ ಅವರು ಸಂಪೂರ್ಣ ಸಹಕಾರ ನೀಡಿದರು, ಹಾಗೂ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಪುರುಷೋತ್ತಮ್ ಹಾಗೂ ಲೋಕೇಶ್ ರವರ ನೇತೃತ್ವದಲ್ಲಿ ಕಾಲಭೈರೇಶ್ಪರನ ದರ್ಶನ ಪಡೆದು ಪ್ರಾರ್ಥಿಸಲಾಯಿತು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...