ಶಿವಮೊಗ್ಗ | ಅಡಿಷನಲ್ ಎಸ್ಪಿ ಎ.ಜಿ.ಕಾರ್ಯಪ್ಪ ನೇತೃತ್ವದಲ್ಲಿ ಲಾಡ್ಜ್, ಕಲ್ಯಾಣ ಮಂಟಪ ಮಾಲೀಕರುಗಳ ಸಭೆ

Date:

ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಮುಂಬರುವ ಗೌರಿ ಹಾಗೂ ಗಣೇಶ ಹಬ್ಬ ಮತ್ತು ಈದ್ ಮಿಲಾದ್, ಹಬ್ಬಗಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ಲಾಡ್ಜ್, ಕಲ್ಯಾಣ ಮಂಟಪಗಳ ಮಾಲೀಕರುಗಳ ಸಭೆ ನಡೆದಿದೆ.

ಅಡಿಷನಲ್ ಎಸ್ಪಿ ಎ.ಜಿ. ಕಾರ್ಯಪ್ಪರವರು ಸಭೆಯ ನೇತೃತ್ವವನ್ನು ವಹಿಸಿದ್ದು, ಸಭೆಯಲ್ಲಿ ಕೆಲವು ತೀರ್ಮಾನ ತೆಗೆದುಕೊಳ್ಳಲಾಗಿದೆ.‌

ಲಾಡ್ಜ್ ಹಾಗೂ ಕಲ್ಯಾಣ ಮಂಟಪಗಳಲ್ಲಿ ಕಡ್ಡಾಯವಾಗಿ ಸಿ. ಸಿ. ಕ್ಯಾಮೆರಾಗಳನ್ನ ಅಳವಡಿಸ ಬೇಕು.ಎಂಟ್ರಿ ಮತ್ತು ಎಕ್ಸಿಟ್ ಗೇಟ್ ಬೇರೆ ಬೇರೆ ಇರದೇ ಒಂದೇ ಗೇಟ್ ಇರಬೇಕು.ತಂಗುವ ಗ್ರಾಹಕರ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಪಡೆದಿರಬೇಕು. ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ತಿಳಿಸಬೇಕು. ಯಾವುದೇ ತುರ್ತು ಸಂದರ್ಭಗಳಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಿ ಸಹಾಯ ಪಡೆಯಬಹುದಾಗಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002016815

ಕಡ್ಡಾಯವಾಗಿ ಎಲ್ಲಾ ಅಗತ್ಯವಾದ ದಾಖಲೆಗಳನ್ನು ನಿರ್ವಹಣೆ ಮಾಡಬೇಕು.ಸಿಸಿಟಿವಿ ಕ್ಯಾಮೆರಾ ಗಳ ಸಂಗ್ರಹಣೆಯು ಕನಿಷ್ಠಪಕ್ಷ ಒಂದು ತಿಂಗಳ ಅವಧಿಗೆ ಇರುವ ಹಾಗೆ ನಿರ್ವಹಿಸಬೇಕು. ಉತ್ತಮ ರೀತಿಯ ಸ್ವಚ್ಛತೆಯನ್ನು ಕಾಪಾಡುವ ವ್ಯವಸ್ಥೆಯನ್ನು ಹೊಂದಿರಬೇಕು. ಗ್ರಾಹಕರುಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪ್ರತಿವಾರ ವ್ಯಾಪ್ತಿಯ ಪೊಲೀಸ್ ಠಾಣೆಗೆ ಒದಗಿಸಬೇಕು.ನೀರಿನ ಟ್ಯಾಂಕ್ ಅನ್ನು ಪ್ರತಿದಿನ ಪರಿಶೀಲಿಸಬೇಕು ಹಾಗೂ ಶುಚಿತ್ವವನ್ನು ಕಾಪಾಡಿಕೊಳ್ಳಬೇಕು.

ಹೊರ ರಾಜ್ಯದ ಗ್ರಾಹಕರಗಳು ತಂಗಲು ಬಂದಲ್ಲಿ ಕಡ್ಡಾಯವಾಗಿ ಅವರುಗಳ ಸಮರ್ಪಕ ದಾಖಲೆಗಳನ್ನು ಪಡೆದು ಜೆರಾಕ್ಸ್ ಕಾಪಿಯನ್ನು ನಿರ್ವಹಿಸಬೇಕು. ಹಬ್ಬದ ಸಮಯದಲ್ಲಿ ಪೊಲೀಸ್ ಇಲಾಖೆಯೊಂದಿಗೆ ಎಲ್ಲ ರೀತಿಯ ಸಹಕಾರದಿಂದ ಇರಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿ ಬಾಬು ಆಂಜನಪ್ಪ ಹಾಗೂ ಸಂಜೀವ್ ಕುಮಾರ್, ಶಿವಮೊಗ್ಗ ನಗರದ ಎಲ್ಲಾ ಪೊಲೀಸ್ ನಿರೀಕ್ಷಕರು ಪೊಲೀಸ್ ಉಪನಿರೀಕ್ಷಕರು ಹಾಗೂ ಶಿವಮೊಗ್ಗ ನಗರದ ಲಾಡ್ಜ್ ಹಾಗೂ ಕಲ್ಯಾಣ ಮಂಟಪಗಳ ಮಾಲೀಕರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...