ಶಿವಮೊಗ್ಗ | ಸ್ಮಾರ್ಟ್ ಫೋನಿನ ದುರ್ಬಳಕೆ ಅನಾಹುತಕ್ಕೆ ದಾರಿ;ಅನಿಲ್ ಭೂಮರೆಡ್ಡಿ

Date:

ಪ್ರತಿ ದಿನ ಸ್ಮಾರ್ಟ್ ಫೋನಿನ ದುರ್ಗ್ಬಳಕೆ ಹೆಚ್ಚುತ್ತಿದೆ. ತಂತ್ರಜ್ಞಾನ ಮುಂದುವರೆದ ಹಾಗೆ ಆಕರ್ಷಣೆಗೆ ಒಳಗಾಗಿ ಬೇಡವಾದ ವೆಬ್ ಸೈಟ್ಗಳನ್ನು ಓಪನ್ ಮಾಡಿ ನಾವಾಗಿಯೇ ಸಿಕ್ಕಿಹಾಕಿಕೊಳ್ಳುತ್ತೇವೆ,ಇತ್ತೀಚಿಗೆ ತುಂಬಾ ಹೆಚ್ಚಾಗುತ್ತಿದೆ ಪ್ರತಿದಿನ ಶಿವಮೊಗ್ಗ ಜಿಲ್ಲೆಯಲ್ಲಿ ನಾಲಕ್ಕರಿಂದ ಐದು ಕೇಸುಗಳು ದಾಖಲಾಗುತ್ತಿವೆ ಎಂದು ಆಡಿಷನಲ್ ಎಸ್ಪಿ ಭೂಮ್ ರೆಡ್ಡಿ ಹೇಳಿದರು.

ಕಾಯ್ದೆ ದಾಖಲಾಗುವಲ್ಲಿ ಶಿವಮೊಗ್ಗ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿಗಳಾದ ಅನಿಲ್ ಬೊಮರೆಡ್ಡಿ ಅವರು ನುಡಿದರು ರಾಷ್ಟ್ರೀಯ ಶಿಕ್ಷಣ ಸಮಿತಿಯ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಹೆನ್ರಿ ಡುನಂಟ್ ಹುಟ್ಟುಹಬ್ಬ ಹಾಗು ವಿಶ್ವ ರೆಡ್ ಕ್ರಾಸ್ ದಿನಾಚರಣೆ ಅಂಗವಾಗಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ನಾವು ಮೊಬೈಲ್ ಮುಖಾಂತರ ಒಟಿಪಿ ಗಳನ್ನು ಹಾಗೂ ಫೇಸ್ಬುಕ್ ಇನ್ಸ್ಟಾಗ್ರಾಮ್ ನಲ್ಲಿ ನಮ್ಮ ಖಾಸಗಿ ಮಾಹಿತಿಗಳನ್ನು ಹಂಚಿಕೊಳ್ಳುವುದರಿಂದ ಸಾಕಷ್ಟು ಅನಾಹುತಗಳು ಇಂದಿಗೂ ನಡೆಯುತ್ತಾ ಇವೆ ಆದ್ದರಿಂದ ಆದಷ್ಟು ವಾಟ್ಸಪ್ ಸಂದೇಶಗಳನ್ನು ಮೊಬೈಲ್ ಮಾಹಿತಿಗಳನ್ನು ಪರಾಮರ್ಶಿಸಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಎಫ್ ಪಿ ದಿನೇಶ್ ಮಾತನಾಡುತ್ತ ಮನು ಕುಲದ ಸೇವೆಯಲ್ಲಿ ರೆಡ್ ಕ್ರಾಸಿನ ಕೊಡುಗೆ ತುಂಬಾ ಅಪಾರವಾಗಿದೆ ಹೆನ್ರಿ ಡುನಂಟ್ ರವರು ಸ್ಥಾಪಿಸಿದ ರೆಡ್ ಕ್ರಾಸ್ ಪ್ರಪಂಚಾದ್ಯಂತ ಮಾನವೀಯ ಸೇವೆಗಳ ಮುಖಾಂತರ ತನ್ನದೇ ಆದ ಛಾಪು ಮೂಡಿಸಿದ ಯುದ್ಧ ಹಾಗೂ ಪ್ರಕೃತಿ ವಿಕೋಪ. ಕರೋನದಂತ ಸಂದರ್ಭದಲ್ಲಿ ಸಹಾಯ ಹಸ್ತ ನೀಡುವುದರ ಜೊತೆಗೆ ಯುವ ಜನರಿಗೆ ಜೀವನ ಕೌಶಲ್ಯ ತರಬೇತಿ ನೀಡುವುದರ ಮುಖಾಂತರ ಅವರಿಗೆ ಬದುಕನ್ನು ಕಟ್ಟಿಕೊಡುತ್ತದೆ ಎಂದು ನುಡಿದರು.

ಇದೇ ಸಂದರ್ಭದಲ್ಲಿ ಎರಡು ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ!ದಿನೇಶ್ ರೆಡ್ ಕ್ರಾಸ್ ಸಂಸ್ಥೆ ನಡೆದು ಬಂದ ದಾರಿ ಹಾಗೂ ಸಮುದಾಯದಲ್ಲಿ ಈಗಾಗಲೇ ಸಲ್ಲಿಸಿರುವ ಸೇವೆಗಳ ಬಗ್ಗೆ ವಿವರ ನೀಡಿದರು, ಮುಖ್ಯ ಅತಿಥಿಗಳನ್ನು ಸನ್ಮಾನಿಸಿ ಗೌರವಿಸಿದರು. ವೇದಿಕೆಯಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ನಿರ್ದೇಶಕರಾದ ಅಶ್ವತ್ ನಾರಾಯಣ್ ಶೆಟ್ಟಿ ಅವರು ಮಾತನಾಡಿ ಶುಭಾಶಯ ತಿಳಿಸಿದರು.

ರೆಡ್ ಕ್ರಾಸ್ ನಿರ್ದೇಶಕ ವಸಂತ್ ಹೋಬಳಿದಾರ್ ಮಾತನಾಡುತ್ತಾ ರೆಡ್ ಕ್ರಾಸ್ ಸಂಸ್ಥೆಯ ಈ ವರ್ಷದ ಧ್ಯೇಯ ಮಾನವೀಯತೆಯ ನೆಲೆಯಲ್ಲಿ ಸೇವೆ ಮಾಡುವ ಏಕೈಕ ಸಂಸ್ಥೆ ರೆಡ್ ಕ್ರಾಸ್ ಎಂದು ನುಡಿದರು ವೇದಿಕೆಯಲ್ಲಿ ರೆಡ್ ಕ್ರಾಸ್ ಅಜೀವ ಸದಸ್ಯರಾದ ಶ್ರೀ ಜಿ ವಿಜಯಕುಮರ್, ಎನ್ ಗೋಪಿನಾಥ, ಪ್ರೊಫೆಸರ್ ಕೆ ಎಂ ನಾಗರಾಜ್, ರೆಡ್ ಕ್ರಾಸ್ ನಿರ್ದೇಶಕ ನವೀನ್. ಸೌಪರ್ಣಿಕಾ, ಉಮೇಶ್, ಶೃತಿ ಕೆ. ಹಾಗೂ ವಿವಿಧ ಕಾಲೇಜುಗಳಿಂದ ರೆಡ್ ಕ್ರಾಸ್ . ಎನ್ಎಸ್ಎಸ್. ವಿದ್ಯಾರ್ಥಿಗಳು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...