ಶಿವಮೊಗ್ಗ, ನ್ಯಾಯಾಲಯಕ್ಕೆ ಹಾಜರಾಗಿ ಜೈಲಿಗೆ ಹಿಂತಿರುಗಿದ ಖೈದಿಯ ಪರಿಶೀಲನೆ ನಡೆಸಿದಾಗಿ ಕೀ ಪ್ಯಾಡ್ ಮೊಬೈಲ್ ಆತನಲ್ಲಿ ಪತ್ತೆಯಾಗಿದೆ.
ಶಿವಮೊಗ್ಗ ಕೇಂದ್ರ ಕಾರಾಗೃಹದ ಶಿಕ್ಷಾ ಬಂಧಿ ಮುಜೀಬ್ನನ್ನು ಪ್ರಕರಣವೊಂದರ ವಿಚಾರಣೆಗೆ ಭದ್ರಾವತಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಜೈಲಿಗೆ ಬಂದ ಮುಜೀಬ್ನನ್ನು ಜೈಲಿನ ಪ್ರವೇಶದ್ವಾರದಲ್ಲಿ ಕೆಎಸ್ಐಎಸ್ಎಫ್ ಸಿಬ್ಬಂದಿ ಪರಿಶೀಲಿಸಿದರು.
ಆತನ ಬಲಗಾಲಿನ ಮೊಣಕಾಲಿನ ಬಳಿ ಕಾರ್ಬನ್ ಪೇಪರ್ನಿಂದ ಸುತ್ತಿರುವ ವಸ್ತು ಪತ್ತೆಯಾಗಿತ್ತು.ಕಾರ್ಬನ್ ಪೇಪರ್ ತೆಗೆದು ಪರಿಶೀಲಿಸಿದಾಗ ಕೆಂಪು ಬಣ್ಣದ ಕೀ ಪ್ಯಾಡ್ ಮೊಬೈಲ್ ಸಿಕ್ಕಿದೆ.
ಘಟನೆ ಸಂಬಂಧ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ. ರಂಗನಾಥ್.ಪಿ ಅವರು ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ





