ಶಿವಮೊಗ್ಗ | ನನ್ನ ಮಾತನ್ನು ಪೂರ್ಣವಾಗಿ ತಿರುಚಲಾಗಿದೆ : ಶಾಸಕ ಸಂಗಮೇಶ್

Date:

ಶಿವಮೊಗ್ಗ, “ನಾನು ಮುಸಲ್ಮಾನರ ಹಬ್ಬವನ್ನು ನೋಡಿ ಖುಷಿಯಾಗಿ ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟಬೇಕು ಎಂದು ಹೇಳಿದ್ದೇನೆಯೇ ಹೊರತು ಬೇರೆ ಅರ್ಥದಲ್ಲಿ ಅಲ್ಲ. ನಾನು ಆಡಿರುವ ಮಾತನ್ನು ತಿರುಚಲಾಗಿದೆ” ಎಂದು ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್​​​ ಸ್ಪಷ್ಟನೆ ನೀಡಿದರು.

ಭದ್ರಾವತಿಯಲ್ಲಿ ಬುಧವಾರ ಮಾಧ್ಯಮದರೊಂದಿಗೆ ಮಾತನಾಡಿದ ಅವರು, “ನಿಜವಾದ ಹಿಂದೂಗಳು ಅಂದರೆ ಕಾಂಗ್ರೆಸ್ಸಿಗರು. ಬಿಜೆಪಿ-ಜೆಡಿಎಸ್‌ನವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಮುಸಲ್ಮಾನರು ಮಾಡಿದ ಹಬ್ಬವನ್ನು ನೋಡಿ ಸಂತೋಷದಿಂದ ನಾನು ಮುಸಲ್ಮಾನಾಗಬೇಕೆಂದಿದ್ದೇನೆ. ನನ್ನ ಮಾತನ್ನು ಪೂರ್ಣವಾಗಿ ತಿರುಚಲಾಗಿದೆ. ನನ್ನ ಮಾತಿನಿಂದ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ” ಎಂದರು.

ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಪ್ರತಿಕ್ರಿಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಕ್​​ ಪರ ಘೋಷಣೆ ಕೂಗಿದವರನ್ನು ಹಿಡಿದು ಒಳಗೆ ಹಾಕಲಿ

“ಪಾಕಿಸ್ತಾನ​​​​ ಪರ ಘೋಷಣೆ ಕೂಗಿದವರನ್ನು ಹಿಡಿದು ಬೂಟ್​ನಲ್ಲಿ ಹೊಡೆದು ಒಳಗೆ ಹಾಕಿ ಎಂದು ನಾನು ಎಸ್​ಪಿ ಅವರಿಗೆ ತಿಳಿಸಿದ್ದೇನೆ. ದೇಶದ್ರೋಹಿ ಕೆಲಸವನ್ನು ಯಾರೂ ಮಾಡಬಾರದು” ಎಂದು ಹೇಳಿದರು.ನಾನು 4 ಬಾರಿ ಶಾಸಕನಾಗಲು ಮುಸಲ್ಮಾನರ ಆಶೀರ್ವಾದ ಕಾರಣ.

“ನನಗೆ ನಾಲ್ಕು ಬಾರಿ ಶಾಸಕರಾಗಲು ಎಲ್ಲಾ ಧರ್ಮದವರೂ ಸಹಕಾರ ನೀಡಿದ್ದಾರೆ. ಆದರೆ, ನನ್ನ ಗೆಲುವಿಗೆ ಪ್ರಮುಖವಾಗಿ ಮುಸಲ್ಮಾನರು ಕಾರಣ ಎಂದರು.ನನ್ನ ಮಗನನ್ನು ರಾಜಕೀಯಕ್ಕೆ ತರಲು ಪಕ್ಷದ ಮುಖಂಡರು ಒಪ್ಪಿದ್ದಾರೆ: “ನನ್ನ ಮಗ ಗಣೇಶನನ್ನು ರಾಜಕೀಯಕ್ಕೆ ತರಬೇಕು ಎಂದು ನಾನು ಕೇಳಿಕೊಂಡಿದ್ದೇನೆ. ಜನರ ಆಶೀರ್ವಾದ ಇದ್ದರೆ ಅವನು ಶಾಸಕ ಅಥವಾ ಸಂಸದ ಆಗಬಹುದು. ಇದಕ್ಕೆ ನಮ್ಮ ಪಕ್ಷದ ಮುಖಂಡರು ಒಪ್ಪಿಗೆ ಸೂಚಿಸಿದ್ದಾರೆ” ಎಂದು ತಿಳಿಸಿದರು.

“ನಾನು ಮಂತ್ರಿಸ್ಥಾನ ಕೇಳಿಲ್ಲ. ಅವರು ನನ್ನ ಹಿರಿತನ ನೋಡಿ ಅವಕಾಶ ಕೊಟ್ಟರೆ ಪಡೆಯುವೆ. ನನಗೆ ಅವಕಾಶ ಕೊಟ್ಟರೂ ಕೊಡದೇ ಇದ್ದರೂ ನಾನು ಯಾವಾಗಲೂ ಕಾಂಗ್ರೆಸ್ಸಿಗ” ಎಂದು ಹೇಳಿದರು.ಪಕ್ಷದ ತಾಲೂಕು ಅಧ್ಯಕ್ಷರು, ಪ್ರಚಾರ ಸಮಿತಿ ಅಧ್ಯಕ್ಷರು, ಭದ್ರವತಿ ನಗರಸಭೆ ಸದಸ್ಯರು ಈ ವೇಳೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...