ಶಿವಮೊಗ್ಗ | ಮಲವಗೋಪ್ಪ ಬ್ಲಾಕ್ ಸ್ಪಾಟ್ ಎಂದು ಗುರಿತಿಸಿದಮೇಲೂ ಸಮಸ್ಯೆ ಬಗೆಹರಿಸದ NHAI

Date:

ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪ, ಶುಗರ್ ಫ್ಯಾಕ್ಟರಿಯಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಅಪಘಾತಗಳು ಸಂಭವಿಸುತ್ತದೆ. ಈ ಸಂಬಂಧ ಟ್ರಾಫಿಕ್ ಪೊಲೀಸ್ ಇಲಾಖೆ ವತಿಯಿಂದ ಈ ಸ್ಥಳವನ್ನ ಬ್ಲಾಕ್ ಸ್ಪಾಟ್ ಎಂದು ಪರಿಗಣಿಸಿದ್ದಾರೆ.

ಬ್ಲಾಕ್ ಸ್ಪಾಟ್ ಅಂದರೆ ಬಳಹಷ್ಟು ಅಪಘಾತ ಆಗುವ ಸ್ಥಳವೆಂದು ಗುರುತಿಸಿದ್ದಾರೆ.ಇದಕ್ಕೆ ಮುಖ್ಯ ಕಾರಣವೇನೆಂದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬಹಳಷ್ಟು ವರ್ಷಗಳಿಂದ ಇಲ್ಲಿ ರಸ್ತೆಯನ್ನು ಸಂಪೂರ್ಣವಾಗಿ ಮಾಡಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ.ಅದಷ್ಟೇ ಅಲ್ಲದೆ ಈ ರಸ್ತೆಯು ಬಹಳಷ್ಟು ಗುಂಡಿಗಳಿಂದ ಕೂಡಿದ್ದು ಪ್ರತಿನಿತ್ಯ ಈ ಗುಂಡಿಗಳಿಂದ ಅಪಘಾತ ಪ್ರಾಣಪಾಯ ಆಗುತ್ತಿದ್ದೂ ಜೊತೆಗೆ ವಾಹನ ಸವಾರರು ವಾಹನ ಚಾಲನೆ ಮಾಡಲು ಹೈರಾಣಗುತ್ತಿದ್ದಾರೆ.

ಅಷ್ಟು ಮಾತ್ರವಲ್ಲದೇ ಈ ರಸ್ತೆಯಲ್ಲಿ ಬಹಳಷ್ಟು ವಾಹನ ಸವಾರರು ಅಪಘಾತದಲ್ಲಿ ಕೈಕಾಲು ಮುರಿದುಕೊಂಡು ಹಾಗೂ ಕೆಲವರು ಜೀವವನ್ನು ಕಳೆದುಕೊಂಡಿದ್ದಾರೆ.ಈ ವಿಷಯವು ಬಹಳಷ್ಟು ಸುದ್ದಿ ಮಾಧ್ಯಮ ಹಾಗೂ ಪತ್ರಿಕೆಗಳಲ್ಲಿ ಸುದ್ದಿಗಳು ಆಗಿರುತ್ತದೆ.ಈ ರಸ್ತೆಯು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಭಾಗಕ್ಕೆ ಒಳಗೊಂಡಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಿಷ್ಟು ಅಲ್ಲದೆ ಮತ್ತೊಂದು ಮುಖ್ಯವಾದ ವಿಚಾರವೇನೆಂದರೆ ಈ ರಸ್ತೆಯಲ್ಲಿ ರಸ್ತೆಯ ಪಕ್ಕಕ್ಕೇನೆ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುತ್ತಿದ್ದಾರೆ. ಈ ಸಂಬಂಧ ಸಾರ್ವಜನಿಕರು, ಪಾದಚಾರಿಗಳು ರಸ್ತೆಯಲ್ಲಿ ಓಡಾಡುವಂತಗಿದ್ದು.

ರಸ್ತೆಯ ಮಧ್ಯದಲ್ಲಿ ವಾಹನವನ್ನು ದಾಟಿಕೊಂಡು ನಡೆದುಕೊಂಡು ಬರುವಂತಹ ಪರಿಸ್ಥಿತಿ ಎದುರಾಗಿದೆ.ಈ ಸಂದರ್ಭದಲ್ಲಿ ಹಿಂಬದಿಯಿಂದ ಬರುವಂತಹ ವಾಹನಗಳಿಗೆ ಈ ರೀತಿ ಪಾದಚಾರಿಗಳು ಬರುತ್ತಾರೆ ಎಂಬುದು ಅರಿವಿರುವುದಿಲ್ಲ. ಇದರಿಂದ ಅಪಘಾತಗಳು ಮತ್ತಷ್ಟು ಹೆಚ್ಚಾಗುವ ಸಂಭವವಿದೆ.

ಮತ್ತೆ ರಸ್ತೆಯ ಬದಿಯಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ರಸ್ತೆಯ ಮತ್ತೊಂದು ಬದಿಯಲ್ಲಿ ಅಥವಾ ಪಕ್ಕದಲ್ಲಿ ಚರಂಡಿ ಇರುತ್ತದೆ.ಹೀಗಾಗಿ ಪಾದಚಾರಿಗಳು ಚರಂಡಿಲಿ ಇಳಿದು ನಡೆದುಕೊಂಡು ಹೋಗುವುದು ಅಸಾಧ್ಯವಾಗಿರುತ್ತದೆ.

1002482958

ಹೀಗಾಗಿ ವಾಹನದ ಪಕ್ಕದಲ್ಲಿ ರಸ್ತೆ ಮಧ್ಯದಲ್ಲಿ ನಡೆದುಕೊಂಡು ಬರುತ್ತಾರೆ ಇದರಿಂದ ಬೆಳಗ್ಗೆ ಅಥವಾ ಸಂಜೆ, ರಾತ್ರಿ ವೇಳೆಯಲ್ಲಿ ಕತ್ತಲು ಇದ್ದ ಅಂತ, ಅಥವಾ ಯಾವದೇ ಸಮಯದಲ್ಲಿ ಯಾವುದೇ ಇಂಡಿಕೇಟರ್ ಮತ್ತೊಂದು ಸೂಚನೆ ಯಾವುದೇ ಇಲ್ಲದೆ ವಾಹನಗಳು ನಿಲ್ಲಿಸುತ್ತಿದ್ದಾರೆ.

ಹಿಂಬದಿಯಿಂದ ಬರುವಂತಹ ವಾಹನಗಳಿಗೆ ಇಲ್ಲಿ ವಾಹನ ನಿಂತಿರುತ್ತೆ ಎಂಬುದು ಅರಿವು ಇರುವುದಿಲ್ಲ ಜೊತೆಗೆ ಪಾದಚಾರಿಗಳು ಬರುತ್ತಿದ್ದಾರೆ ಎಂಬ ಕಲ್ಪನೆಗಳು ಇರುವುದಿಲ್ಲ.

ಈ ಸಂದರ್ಭದಲ್ಲಿ ಅಪಘಾತ ಉಂಟಾದಾಗ ಜೀವ ಹಾನಿ ನೋವು ಉಂಟಾದರೆ ಯಾರಾದಾದರೂ ಜೀವಕ್ಕೆ ಅಪಾಯ ಉಂಟಾದಾಗ ಯಾರು ಹೊಣೆ ಆಗುತ್ತಾರೆ ಎಂಬ ಪ್ರಶ್ನೆಯಾಗಿದೆ? ಆ ಕುಟುಂಬದವರಿಗೆ ಯಾರು ಆಸರೆ ಆಗುತ್ತಾರೆ ಪರಿಹಾರ ಘೋಷಣೆ ಮಾಡುವುದಾಗಲಿ ಅಥವಾ ಪ್ರಕರಣ ದಾಖಲು ಮಾಡುವುದರಿಂದ ಸಮಸ್ಯೆ ಬಗ್ಗೆ ಹರಿಯುತ್ತಾ ಎಂಬುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇಷ್ಟೆಲ್ಲಾ ಸ್ಥಿತಿಗತಿಗಳು ದಿನನಿತ್ಯ ನಡೆಯುತ್ತಾನೆ ಇದ್ದರೂ ಕೂಡ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಈ ಸಂಬಂಧ ತುರ್ತಾಗಿ ಯಾವುದೇ ಕ್ರಮ ಕೈಗೊಳ್ಳುವ ಮನಸ್ಥಿತಿಯಲ್ಲಿ ಆಗಲಿ ಇಚ್ಚಾ ಶಕ್ತಿಯನ್ನು ತೋರಿಸುತ್ತಿಲ್ಲ,ಇನ್ನೆಷ್ಟು ಬಲಿಗಾಗಿ ಕಾಯುತ್ತಿದ್ದಾರೆ ಎಂಬುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಿಭಾಗವು ಹಾಗೂ ಶಿವಮೊಗ್ಗದ ಸಂಸದರಾಗಿರುವಂತಹ ಮಾನ್ಯ ರಾಘವೇಂದ್ರರವರು ಈ ಕೂಡಲೇ ಸಮಸ್ಯೆಗೆ ಸ್ಪಂದಿಸಿ ಸೂಕ್ತ ಪರಿಹಾರ ಒದಗಿಸಬೇಕೆಂಬುದು ಸಾರ್ವಜನಿಕರ ಕಳಕಳಿಯ ಮನವಿಯಾಗಿದೆ.

ಜಿಲ್ಲೆಯಲ್ಲಿ ಸಮಗ್ರ ಅಭಿವೃದ್ಧಿ ಮಾಡಿರುವಂತಹ,ಅಭಿವೃದ್ಧಿ ಹರಿಕಾರವೆಂದೇ ಖ್ಯಾತಿ ಪಡೆದಿರುವ ಜನಸಾಮಾನ್ಯರ ಸಮಸ್ಯೆಗೆ ಕಾಳಜಿ ಹೊಂದಿರುವಂತಹ ಸಂಸದರಾಗಿರುವ ರಾಘವೇಂದ್ರ ಅವರು ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡುವ ಮೂಲಕ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಿ ಕೊಡಬೇಕು ಎಂಬುದು ಪ್ರಜ್ಞಾವಂತರ ಆಶಯವಾಗಿದೆ.

ಇನ್ನಾದರೂ ಶಿವಮೊಗ್ಗ ಜಿಲ್ಲಾಡಳಿತವು ಸಂಬಂಧಪಟ್ಟ ಅಧಿಕಾರಿಗಳಿಗೆ ತ್ವರಿತಗತಿಯಾಗಿ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಸ್ತೆ ಡಾಂಬರೀಕರಣ ಮಾಡುವುದು ಹಾಗು ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಅಧಿಕಾರಿಗಳಿಗೆ ತಕ್ಕ ನಿರ್ದೇಶನ ನೀಡುವ ಮುಖಾಂತರ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಿ ಮತ್ತಷ್ಟು ಜೀವ ಹಾನಿಯಾಗದಂತೆ ತಡಗಟ್ಟಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...