ಶಿವಮೊಗ್ಗ | ನಿರ್ಮಿತಿ ಕೇಂದ್ರದ ನಿರ್ಲಕ್ಷ್ಯ; ಕ್ರಮ ಕೈಗೊಳ್ಳಲು ಮನವಿ

Date:

ಶಿವಮೊಗ್ಗದ ನಿರ್ಮಿತಿ ಕೇಂದ್ರಗಳು ಸಾರ್ವಜನಿಕ ಅನುದಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ, ಮಾಹಿತಿ ನೀಡುವಲ್ಲಿ ನಿರ್ಲಕ್ಷ್ಯ ತೋರುತ್ತಿರುವುದನ್ನು ಈದಿನ ನಿನ್ನೆ (ಜು.31) “ಶಿವಮೊಗ್ಗ | ನಿರ್ಮಿತಿ ಕೇಂದ್ರವನ್ನು ಸ್ವಂತ ಉದ್ದಿಮೆ ಮಾಡಿಕೊಂಡರೇ ಅಧಿಕಾರಿಗಳು?” ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ಈ ವರದಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರತಿಕ್ರಿಯಿಸಿದ್ದಾರೆ.

“ಆರ್‌ಟಿಐ ಕಾಯ್ದೆಯಡಿಯಲ್ಲಿ ಮಾಹಿತಿಯನ್ನು ಯಾವಾಗಲೂ ಒದಗಿಸಲಾಗುತ್ತದೆ. ಇದರ ಬಗ್ಗೆ ಯಾವುದೇ ದೂರುಗಳಿದ್ದರೆ, ಮೇಲ್ಮನವಿ ಪ್ರಾಧಿಕಾರವು ಮೊದಲ ಪ್ರತಿವಾದಿಯು ಮಾಹಿತಿಯನ್ನು ನೀಡುವಂತೆ ಆದೇಶಿಸಬಹುದು. ಅರ್ಜಿದಾರರೂ ಕೂಡ ಆರ್‌ಟಿಐ ಕಾಯ್ದೆಯಡಿಯಲ್ಲಿ ಅಪ್ರಸ್ತುತ/ಅಸ್ಪಷ್ಟ ಮಾಹಿತಿ ಅಥವಾ ಯಾವುದೇ ವೈಯಕ್ತಿಕ ಮಾಹಿತಿಯನ್ನು ಕೇಳದಿರುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಈ ಲೇಖನದ ಶೀರ್ಷಿಕೆ ಮತ್ತು ವಿಷಯವು ದಾರಿತಪ್ಪಿಸುವಂತಿದೆ ಮತ್ತು ಯಾವುದೇ ವಿಷಯ ಅಥವಾ ಪುರಾವೆಗಳಿಲ್ಲದೆ ಅಧಿಕಾರಿಗಳನ್ನು ಆರೋಪಿಸುತ್ತದೆ” ಎಂದು ಆರೋಪಿಸಿದ್ದರು.

ಆದರೆ ಅರ್ಜಿದಾರರು ಆರ್‌ಟಿಐ ಕಾಯ್ದೆಯಡಿಯಲ್ಲಿ ಕೇಳಿರುವ ಮಾಹಿತಿಯ ದಾಖಲೆಗಳನ್ನು ಒದಗಿಸಿರುತ್ತದೆ. ಕಾಯ್ದೆಯಡಿಯಲ್ಲಿ ಕೇಳಬಹುದಾದ ಮಾಹಿತಿಗಳನ್ನೇ ಕೇಳಿದ್ದರೂ ನಿರ್ಮಿತಿ ಕೇಂದ್ರವು ಕುಂಟು ನೆಪ ಹೇಳಿಕೊಂಡು ಮಾಹಿತಿ ಒದಗಿಸಲು ನಿರ್ಲಕ್ಷ್ಯ ತೋರುತ್ತಿದೆ ಎಂದು ಅವರು ಆರೋಪಿಸಿದೆ. ಅದರ ದಾಖಲೆಗಳನ್ನೂ ಒದಗಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇತ್ತೀಚೆಗೆ ಮಾಹಿತಿ ಆಯೋಗ ರುದ್ರಣ್ಣ ಹರ್ತಿಕೋಟಿ ಪೀಠವು ನಿರ್ಮಿತಿ ಕೇಂದ್ರದ ಶಿವಮೊಗ್ಗ ಇದರ ಪ್ರಕರಣವೊಂದರ ತೀರ್ಪಿನಲ್ಲಿ ಕಲಂ ೪ ರಡಿ ಎಲ್ಲ ದಸ್ತಾವೇಜುಗಳನ್ನು ಅಂದರೆ ಸೆಕ್ಷನ್ 4(1)(a) 4(1)(b) ರಡಿ ಅರವತ್ತು ದಿವಸಗಳೊಳಗೆ ಪ್ರಕಟಿಸಬೇಕೆಂದು ಆದೇಶಿಸಿತು. ಇದೀಗ ಅರವತ್ತು ದಿವಸಗಳು ಕಳೆದಿದ್ದು ನಿರ್ಮಿತಿ ಕೇಂದ್ರ ಪ್ರಕಟಣೆಯ ನಿರೀಕ್ಷೆಯಲ್ಲಿ ಅರ್ಜಿದಾರರಿದ್ದು. ಒಂದು ವೇಳೆ ಪ್ರಕಟಿಸದಿದ್ದರೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಾರೆ. ಮುಂದುವರೆದು ಕಲಂ ೪ ಅನ್ನು ಅನುಸರಿಸದೆ ಇದ್ದರೆ ಕಾನೂನು ಹೋರಾಟ ಮಾಡುವುದಾಗಿ ಅರ್ಜಿದಾರರು ತಿಳಿಸಿರುತ್ತಾರೆ”

ಈ ದಾಖಲೆಗಳನ್ನು ಪರಿಶೀಲಿಸಿ ಕಾನೂನು ಉಲ್ಲಂಘನೆ ಮಾಡುತ್ತಿರುವ ನಿರ್ಮಿತಿ ಕೇಂದ್ರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅರ್ಜಿದಾರರು ಒತ್ತಾಯಿಸಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...