ಶಿವಮೊಗ್ಗ | ರಾಜ್ಯದಲ್ಲಿ ಹೊಸ ಪಕ್ಷ ಶೀಘ್ರದಲ್ಲಿ ಆರಂಭ: ನಟ ಚೇತನ್ ಅಹಿಂಸ

Date:

ಶಿವಮೊಗ್ಗ: , ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೊಸ ರಾಜಕೀಯ ಪಕ್ಷದ ಉದಯಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದ ನಟ ಚೇತನ್ ಅಹಿಂಸಾ ತಿಳಿಸಿದ್ದಾರೆ.

ಶಿವಮೊಗ್ಗದ ಪತ್ರಿಕಾಭವನದಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ ಈ ಸಂಬಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ಪ್ರವಾಸ ಮಾಡಿದ್ದು, ಶಿವಮೊಗ್ಗದಲ್ಲಿ 166ನೇ ‘ಸಮಾನತೆಯ ಸಭೆ’ಯನ್ನು ನಡೆಸಲಾಗಿದೆ ಎಂದಿದ್ದಾರೆ.

ಶಿವಮೊಗ್ಗ ಹೋರಾಟ ಮತ್ತು ಚಳುವಳಿಗಳ ತವರೂರಾಗಿದ್ದು, ಇಲ್ಲಿನ ವಿಚಾರವಂತರೊಂದಿಗೆ ಕರ್ನಾಟಕದ ಭವಿಷ್ಯ ಮತ್ತು ಅಭಿವೃದ್ಧಿಯ ಕುರಿತು ಚರ್ಚಿಸಲಾಗಿದೆ. ಸಂವಿಧಾನಾತ್ಮಕ ತತ್ವಗಳ ಆಧಾರದಲ್ಲಿ ಸಮ ಸಮಾಜವನ್ನು ಹೇಗೆ ನಿರ್ಮಿಸಬಹುದು ಎಂಬುದರ ಬಗ್ಗೆ ಗಂಭೀರವಾಗಿ ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ ರಾಜಕೀಯ ಪಕ್ಷ ರಚನೆ ಮಾಡುವ ಚಿಂತನೆಯಿದ್ದರೂ ಸಹ ಖುದ್ದು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ತಮಗೆ ಶಾಸಕ, ಸಂಸದರಾಗುವ ಉದ್ದೇಶವಿಲ್ಲ ಅಂತಾನೂ ಸ್ಪಷ್ಟಪಡಿಸಿದ್ದಾರೆ. ಪರಿವರ್ತನೆಯ ಅಗತ್ಯಕ್ಕಾಗಿ ಸಮ ಸಮಾಜವನ್ನು ರೂಪಿಸುವುದಕ್ಕಾಗಿ ಈ ಪ್ರಯತ್ನಕ್ಕೆ ಮುಂದಾಗುತ್ತಿರುವುದಾಗಿ ತಿಳಿಸಿದ್ದಾರೆ.

ರಾಜಕೀಯ ಪಕ್ಷಗಳ ಸಿದ್ಧಾಂತಗಳ ಕೊರತೆ ಮತ್ತು ವೈಫಲ್ಯಗಳು ತಮ್ಮ ಹೊಸ ಪಕ್ಷದ ಅಸ್ತಿತ್ವಕ್ಕೆ ಕಾರಣವಾಗಿದೆ ಎಂದ ಚೇತನ್​ ಹಿಂದುತ್ವದಂತಹ ಸಿದ್ಧಾಂತವನ್ನು ಸಿದ್ಧಾಂತದಿಂದಲೇ ವಿರೋಧಿಸಬೇಕು.

ಅದೇ ರೀತಿ, ಡಾ. ಬಿ.ಆರ್. ಅಂಬೇಡ್ಕರ್, ಪೆರಿಯಾರ್ ಮತ್ತು ಕುವೆಂಪು ಅವರ ಆದರ್ಶಗಳನ್ನು ಇಟ್ಟುಕೊಂಡು ಉತ್ತಮ ಸಿದ್ಧಾಂತವನ್ನು ಜನರ ಮುಂದಿಡುವುದಾಗಿ ಚೇತನ್ ಹೇಳಿದರು.

ಕೇವಲ ಮಾತುಗಳಲ್ಲದೇ, ಕೆಲಸದ ಮೂಲಕವೂ ಗುರುತಿಸಿಕೊಳ್ಳುವುದಾಗಿ ತಿಳಿಸಿದರು.ಮೇಲಾಗಿ ಈ ಕುರಿತು ಬೆಂಗಳೂರು, ಮಂಡ್ಯ ಮತ್ತು ಕೋಲಾರದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...