ಶಿವಮೊಗ್ಗ | ಮನರೇಗಾ ಹಣ ದುರುಪಯೋಗ ಸಾಬೀತಾದರೂ ಕ್ರಮವಿಲ್ಲ; ಭ್ರಷ್ಟರ ರಕ್ಷಣೆಗೆ ಜಿಪಂ ಸಿಇಒ?

Date:

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹುರಳಿ ಗ್ರಾಮ ಪಂಚಾಯತ್‌ನ ಕಂಪ್ಯೂಟರ್ ಆಪರೇಟರ್ ಒಬ್ಬರು ಮನರೇಗಾ (ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ನಿಧಿಯ ಹಣದ ದುರುಪಯೋಗದಲ್ಲಿ ಪಾಲ್ಗೊಂಡಿದ್ದು, ಅವರ ವಿರುದ್ಧ ಎರಡು ವರ್ಷಗಳ ಹಿಂದೆಯೇ ನಡೆದ ತಪಾಸಣೆಯಲ್ಲಿ ಆರೋಪ ಸಾಬೀತಾದರೂ, ಈವರೆಗೆ ಯಾವುದೇ ಶಿಸ್ತಿನ ಕ್ರಮ ಜಾರಿಯಾಗಿಲ್ಲ ಎಂಬ ಆರೋಪಗಳು ಮತ್ತೊಮ್ಮೆ ಬೆಳಕಿಗೆ ಬಂದಿವೆ.

2024ರ ಆಗಸ್ಟ್‌ನಲ್ಲಿ, ಈದಿನ.ಕಾಂ ಈ ಅಕ್ರಮವನ್ನು ಬಹಿರಂಗಪಡಿಸಿತ್ತು. “ಶಿವಮೊಗ್ಗ ಮನರೇಗಾ ಹಣ ದುರುಪಯೋಗ ಸಾಬೀತು: ಗ್ರಾಪಂ ಸಿಬ್ಬಂದಿ ವಿರುದ್ಧ ಇನ್ನೂ ಕ್ರಮ ಕೈಗೊಳ್ಳದ ಜಿಪಂ!” ಶೀರ್ಷಿಕೆಯಡಿ ವರದಿಯನ್ನೂ ಪ್ರಕಟಿಸಿತ್ತು. ಅಂದಿನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಓಂಬುಡ್ಸ್ಮನ್ ಆದೇಶದಂತೆ ಆರೋಪಿಯ ಅಮಾನತು ಹಾಗೂ ಹಣ ವಸೂಲಿ ಮಾಡಲು ಆದೇಶಿಸಿದ್ದರು.

ಆದೇಶ ಹೊರಡಿಸಿದ ಮೇಲೂ ಮನರೇಗಾ ನಿಧಿಗೆ ಹಣ ಜಮೆ ಮಾಡಲಾಗಿಲ್ಲ ಮತ್ತು ಪ್ರಕರಣದ ತನಿಖಾ ವರದಿ ಉಳಿದ ಸದಸ್ಯರಿಗೆ ಬಹಿರಂಗಪಡಿಸಲ್ಪಟ್ಟಿಲ್ಲ. ಇದೀಗ ಲಭ್ಯವಾದ ದಾಖಲೆಗಳ ಪ್ರಕಾರ, ಪ್ರಸ್ತುತ ಸಿಇಒ ಹೇಮಂತ್ ಎನ್ ಅವರು ಆರೋಪಿಯ ಕೋರಿಕೆಯ ಮೇರೆಗೆ ಅವನನ್ನು ಪ್ರಭಾವ ಉಳ್ಳ ಸೊರಬ ತಾಲೂಕಿನ ಮೂಡಿದೊಡ್ಡಿಕೊಪ್ಪ ಪಂಚಾಯತ್‌ಗೆ ವರ್ಗಾವಣೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾನ್ಯವಾಗಿ ಓಂಬುಡ್ಸ್ಮನ್ ಮೇಲ್ಮನವಿ ಪ್ರಾಧಿಕಾರವು ಎರಡು ತಿಂಗಳೊಳಗೆ ತೀರ್ಪು ನೀಡಬೇಕಾಗಿದ್ದರೆ, ಈಗ 20 ತಿಂಗಳುಗಳ ಕಾಲ ಯಾವುದೇ ತೀರ್ಪು ಪ್ರಕಟವಾಗಿಲ್ಲ. ಈ ನಿರ್ಲಕ್ಷ್ಯ ಕೂಡ ಆಡಳಿತದ ಶಿಥಿಲತೆಗೆ ಸಾಕ್ಷಿಯಾಗಿದೆ ಎನ್ನುವುದು ಸ್ಥಳೀಯರ ಆಕ್ಷೇಪ.

ಇತ್ತೀಚೆಗೆ ಕೆ.ಆರ್.ಎಸ್ ಪಕ್ಷದ ಜಿಲ್ಲಾ ಮುಖಂಡ ಮಂಜುನಾಥ್ ಅವರು ಈ ಕುರಿತಂತೆ ಸಿಇಒ ಹೇಮಂತ್ ಅವರನ್ನು ಭೇಟಿ ಮಾಡಿ, ಘಟನೆ ಮತ್ತು ಕ್ರಮವನ್ನು ಪ್ರಶ್ನಿಸಿದಾಗ, “ಈ ವಿಷಯವನ್ನು ಲೋಕಾಯುಕ್ತಕ್ಕೆ ಕೊಡಿ” ಎಂದು ಸಿಇಒ ಪ್ರತಿಕ್ರಿಯಿಸಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಶಿವಮೊಗ್ಗ | ಮನರೇಗಾ ಹಣ ದುರುಪಯೋಗ ಸಾಬೀತು: ಗ್ರಾಪಂ ಸಿಬ್ಬಂದಿ ವಿರುದ್ಧ ಇನ್ನೂ ಕ್ರಮ ಕೈಗೊಳ್ಳದ ಜಿಪಂ!

ಇದರಿಂದಾಗಿ ಮಂಜುನಾಥ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು, ಪ್ರಕರಣದ ಕುರಿತು ತನಿಖೆ ನಡೆಸಿ, ಪ್ರಸ್ತುತ ಸಿಇಒ ಮೇಲೂ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಈ ಸಂಪೂರ್ಣ ಪ್ರಕರಣವು, ಅಕ್ರಮ ಸಾಬೀತಾದರೂ ತಕ್ಷಣ ಕ್ರಮವಿಲ್ಲದೆ, ಬದಲಿಗೆ ವರ್ಗಾವಣೆ ಮುಖಾಂತರ ರಕ್ಷಣೆ ಸಿಗುವ, ಹಳೆ ಶೈಲಿಯ ನಿರ್ಲಕ್ಷ್ಯ ಮತ್ತು ಪ್ರಭಾವಶಾಲಿಗಳ ದಬ್ಬಾಳಿಕೆಗೆ ಮತ್ತೊಂದು ಸ್ಪಷ್ಟ ನಿದರ್ಶನವಾಗಿದೆ ಎಂದು ಹಲವು ಜನಪರ ಕ್ಯಾಂಪೇನ್‌ಗಳು ಆರೋಪಿಸುತ್ತಿವೆ.

WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...