ಶಿವಮೊಗ್ಗ | ಆ.1 ರಿಂದ ಬಹುಮಹಡಿ ಕಟ್ಟಡದಲ್ಲಿ ಪಾರ್ಕಿಂಗ್ ವ್ಯವಸ್ಥೆ ಆರಂಭ

Date:

ಶಿವಮೊಗ್ಗ, ಎರಡು ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮತ್ತು ಸಾರ್ವಜನಿಕರ ವಲಯದಲ್ಲಿ ಬಹಳ ಚರ್ಚೆಗೆ ಒಳಪಟ್ಟಿದ್ದ ಬಹುಮಹಡಿ ಕಟ್ಟಡದಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಮುಹೂರ್ತ ಫಿಕ್ಸ್ ಆಗಿದೆ.

ಶಿವಮೊಗ್ಗದ ಹಳೆ ಹೂವಿನ‌ಮಾರುಕಟ್ಟೆಯಲ್ಲಿ ಬಹುಮಹಡಿ ಕಟ್ಟಡ ನೆನೆಗುದಿಗೆ ಬಿದ್ದಿತ್ತು. ಕಳೆದ ಎರಡು ವರೆ ವರ್ಷದಿಂದ ಬಹುಮಹಡಿ ಕಟ್ಟಡ ನಿರ್ಮಾಣಗೊಂಡಿದ್ದರು ಅಲ್ಲಿನ‌ ಮಳಿಗೆಗಳಾಗಲಿ ಅಥವಾ ಪಾರ್ಕಿಂಗ್ ವ್ಯವಸ್ಥೆ ಆಗಲಿ ಆಗಿರಲಿಲ್ಲ. ಈಗ ಅದಕ್ಕೆ ಕಾಲ ಕೂಡಿ ಬಂದಿದೆ.

ಮಳಿಗೆ ಆರಂಭಕ್ಕೆ ಇನ್ನೂ ಮುಹೂರ್ತ ಫಿಕ್ಸ್ ಆಗಿಲ್ಲ. ಆದರೆ ಬಹುಮಹಡಿ ಕಟ್ಟಡದಲ್ಲಿ ದ್ವಿಚಕ್ರ, ಕಾರು ಮತ್ತು ತ್ರಿಚಕ್ರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಆರಂಭಗೊಂಡಿದೆ. ಆ.1 ರಿಂದ ಬಹುಮಹಡಿ ಕಟ್ಟಡದಲ್ಲಿ ಪಾರ್ಕಿಂಗ್ ವ್ಯವಸ್ಥೆ ಆರಂಭಗೊಳ್ಳಲಿದೆ. 6 ತಿಂಗಳ ಹಿಂದಷ್ಟೆ ಬಹುಮಹಡಿ ಕಟ್ಟಡ ಸ್ಮಾರ್ಟ್ ಸಿಟಿ ಯಿಂದ ನಗರ ಪಾಲಿಕೆಗೆ ಹಸ್ತಾಂತರಗೊಂಡಿದೆ. ಅದಾದ ನಂತರ ಇ ಟೆಂಡರ್ ನಡೆದಿದ್ದು ಶಿವಮೊಗ್ಗದವರಿಗೆ ಈ ಪಾರ್ಕಿಂಗ್ ಟೆಂಡರ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗ ಆಗಸ್ಟ್ 1 ರಿಂದ ಪಾರ್ಕಿಂಗ್ ವ್ಯವಸ್ಥೆ ಶುಭಾರಂಭಗೊಳ್ಳಲಿದೆ. ದ್ವಿಚಕ್ರ ವಾಹನಗಳಿಗೆ ಮೊದಲ ಎರಡು ಗಂಟೆಗೆ 10 ರೂ. ನಿಗದಿಯಾದರೆ, ಕಾರುಗಳಿಗೆ 20 ರೂ. ನಿಗದಿಯಾಗಿದೆ. ಎರಡು ಗಂಟೆಯ ನಂತರ ಕಾರುಗಳಿಗೆ ಪ್ರತಿ ಒಂದು ಗಂಟೆಗೆ 10 ರೂ. ನಿಗದಿಯಾದರೆ ದ್ವಿಚಕ್ರ ವಾಹನಗಳಿಗೆ 5 ರೂ. ನಿಗದಿ ಪಡಿಸಲಾಗಿದೆ. ಬೇಸ್ ಮೆಂಟ್ ನಲ್ಲಿ 80 ದ್ವಿಚಕ್ರವಾಹನಗಳನ್ನ ಪಾರ್ಕ್ ಮಾಡಬಹುದಾಗಿದೆ. ಕಟ್ಟಡದ ಎರಡು ಫ್ಲೋರ್ ಗಳಲ್ಲಿ 172 ಕಾರುಗಳನ್ನ ಪಾರ್ಕ್ ಮಾಡುವ ವ್ಯವಸ್ಥೆ ಮಾಡಲಾಗಿದೆ.

ಈಗಾಗಲೇ ದ್ವಿಚಕ್ರ ವಾಹನಗಳಿಗೆ ಅಮೀರ್ ಅಹಮದ್ ವೃತ್ತದಿಂದ ಹೂವಿನ ಮಾರುಕಟ್ಟೆಯ ವರೆಗೆ ರಸ್ತೆ ಬದಿಯ ಪಾರ್ಕಿಂಗ್ ಇಲ್ಲ. ಹಾಗಾಗಿ ವಾಹನ ಸವಾರರು ಈ ಬಹುಮಹಡಿಯಲ್ಲಿನ ಪಾರ್ಕಿಂಗ್ ವ್ಯವಸ್ಥೆ ಬಳಸಿಕೊಳ್ಳಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...