ಶಿವಮೊಗ್ಗ | ಲಾಡ್ಜ್-ಹೋಂ ಸ್ಟೇಗಳಿಗೆ ಪೊಲೀಸರ ಭೇಟಿ , ಪರಿಶೀಲನೆ

Date:

ಶಿವಮೊಗ್ಗ, ಜಿಲ್ಲಾ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿಕಾರಿಯಪ್ಪ ಎಸ್. ರಮೇಶ್ ಕುಮಾರ್, ರವರ ಮಾರ್ಗದರ್ಶನದಲ್ಲಿ, ಜಿಲ್ಲೆಯ ವಿವಿಧ ಪೊಲೀಸ್ ಉಪ ವಿಭಾಗಗಳ ಪೊಲೀಸ್ ಉಪಾಧೀಕ್ಷಕರವರ ಮೇಲ್ವಿಚಾರಣೆಯಲ್ಲಿ, ಶಿವಮೊಗ್ಗ ಜಿಲ್ಲೆಯದ್ಯಂತ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರವರ ನೇತೃತ್ವದಲ್ಲಿ ಸಿಬ್ಬಂಧಿಗಳ ತಂಡವು ಆಯಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿರುವ ಲಾಡ್ಜ್, ಪೇಯಿಂಗ್ ಗೆಸ್ಟ್ ಮತ್ತು ಹೋಂ ಸ್ಟೇಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.

1002087231

ತಪಾಸಣೆಯ ಸಂದರ್ಭದಲ್ಲಿ ಲಾಡ್ಜ್, ಪಿ.ಜಿ. ಮತ್ತು ಹೋಂ ಸ್ಟೇಗಳಿಗೆ ಬಂದು ತಂಗಿರುವ ಗ್ರಾಹಕರ ಮಾಹಿತಿಯನ್ನು ರಿಜಿಸ್ಟರ್‌ನಲ್ಲಿ ನಮೂದು ಮಾಡಿರುವುದನ್ನು ಮತ್ತು ಲಾಡ್ಜ್ ಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿರುವ ಬಗ್ಗೆ ಹಾಗೂ ಅವುಗಳು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಸುತ್ತಿರುವ ಬಗ್ಗೆ ಹಾಗೂ ವಿಶೇಷವಾಗಿ ಕಳೆದ 15 ದಿನಗಳಲ್ಲಿ ಬಂದು ತಂಗಿದ್ದ ಗ್ರಾಹಕರ ಮಾಹಿತಿಯನ್ನು ಪರಿಶೀಲನೆ ಮಾಡಿದ್ದಾರೆ.

ಆನಂತರ ಲಾಡ್ಜ್, ಪಿಜಿ ಮತ್ತು ಹೋಂ ಸ್ಟೇಗಳ ವ್ಯವಸ್ಥಾಪಕರಿಗೆ ತಂಗಲು ಬರುವ ಗ್ರಾಹಕರುಗಳ ಹೆಸರು, ವಿಳಾಸ ಹಾಗೂ ಮೊಬೈಲ್ ನಂಬರ್ ಸೇರಿದತೆ ಸಂಪೂರ್ಣ ಮಾಹಿತಿಯನ್ನು ಪಡೆದು ರಿಜಿಸ್ಟರ್ ನಲ್ಲಿ ನಮೂದು ಮಾಡಲು, ಗ್ರಾಹಕರು ನೀಡುವ ಮೊಬೈಲ್ ಸಂಖ್ಯೆಯನ್ನು ಪರಿಶೀಲಿಸಿ ಅವರದ್ದೇ ಮೊಬೈಲ್ ನಂಬರ್ ಎಂದು ಖಚಿತ ಪಡಿಸಿಕೊಳ್ಳಲು, ಗ್ರಾಹಕರ ಐಡಿ ಕಾರ್ಡ್ ನ ಜೆರಾಕ್ಸ್ ಪ್ರತಿಯನ್ನು ಪಡೆಯಲು, ಲಾಡ್ಜ್ ಗೆ ಬರುವ ಗ್ರಾಹಕರ ತಂಗುವ ಉದ್ದೇಶವನ್ನು ಕೇಳಿ ಪಡೆದು ರಿಜಿಸ್ಟರ್ ನಲ್ಲಿ ನೋಂದಾಯಿಸಲು ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002082464

ಒಂದುವೇಳೆ ಗ್ರಾಹಕರ ಬಗ್ಗೆ ಯಾವುದೇ ಅನುಮಾನ ಕಂಡು ಬಂದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...