ಶಿವಮೊಗ್ಗ | ಸೆಪ್ಟೆಂಬರ್ 1ರಿಂದ ರೈಲ್ವೇ ನಿಲ್ದಾಣದಲ್ಲಿ ಪ್ರೀಪೇಯ್ಡ್ ಆಟೋ ಕೌಂಟರ್ : ಜಿಲ್ಲಾಧಿಕಾರಿ ಮಾಹಿತಿ

Date:

ಶಿವಮೊಗ್ಗ, ಸಾರ್ವಜನಿಕ ಆಟೋ ಪ್ರಯಾಣಿಕರಿಗೆ ಆಗುತ್ತಿರುವ ಕಿರಿಕಿರಿಯಿಂದ ಮುಕ್ತಿಗೊಳಿಸಿ, ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ ನಿರ್ಣಯ ಕೈಗೊಂಡಿದ್ದು, ಸೆಪ್ಟೆಂಬರ್ 1ರಿಂದಲೇ ಅನ್ವಯವಾಗುವಂತೆ ಆರಂಭದ ಹಂತವಾಗಿ ನಗರದ ರೈಲ್ವೇ ನಿಲ್ದಾಣದಿಂದ ಪ್ರೀಪೇಯ್ಡ್‌ಆಟೋ ಕೌಂಟರ್ಗಳನ್ನು ಪ್ರಾಯೋಗಿಕವಾಗಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.

ಪ್ರೀಪೇಯ್ಡ್‌ಆಟೋ ಕೌಂಟರ್ಗಳನ್ನು ಆರಂಭಿಸುವ ಕುರಿತಂತೆ ಶುಕ್ರವಾರ ಏರ್ಪಡಿಸಲಾಗಿದ್ದ ಸಂಬಂಧಿತ ಇಲಾಖಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪೊಲೀಸ್, ಸಾರಿಗೆ, ಮಹಾನಗರಪಾಲಿಕೆ ಇವರುಗಳ ಸಹಯೋಗದೊಂದಿಗೆ ಪ್ರೀಪೇಯ್ಡ್ ವ್ಯವಸ್ಥೆಯನ್ನು ಅನುಷ್ಟಾನಕ್ಕೆ ತರಲಾಗುವುದು ಎಂದರು.

ಅದಕ್ಕೂ ಮುನ್ನ ಆಟೋ ಚಾಲಕರು ಮತ್ತು ಮಾಲೀಕರ ಅಭಿಪ್ರಾಯವನ್ನೂ ಪಡೆದು, ಸಾರ್ವಜನಿಕರು ಹಾಗೂ ಆಟೋ ಚಾಲಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರಂಭಿಕ ಹಂತದಲ್ಲಿ ರೈಲ್ವೇ ನಿಲ್ದಾಣದಲ್ಲಿ ಆಯ್ದ ಮೂರು ಸ್ಥಳಗಳಲ್ಲಿ ಪ್ರೀಪೇಯ್ಡ್ ಆಟೋ ಕೌಂಟರ್ಗಳನ್ನು ತೆರೆಯಲು ಉದ್ದೇಶಿಸಲಾಗಿದೆ. ಅದಕ್ಕಾಗಿ ನಗರ ಸ್ಥಳೀಯ ಸ್ವಯಂಸೇವಾ ಸಂಸ್ಥೆ ಚೈತನ್ಯ ರೂರಲ್ ಡೆವಲಪ್ಮೆಂಟ್ ಸೊಸೈಟಿಯ ವ್ಯವಸ್ಥಾಪಕರು ಆಸಕ್ತಿ ವಹಿಸಿದ್ದು, ಈಗಾಗಲೇ ಅದರ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದ ಅವರು, ಸ್ಥಳೀಯ ಜನಪ್ರತಿನಿಧಿಗಳ ಅಭಿಪ್ರಾಯ ಹಾಗೂ ಸಹಕಾರವನ್ನು ಪಡೆದು ಕ್ರಮ ವಹಿಸಲಾಗುವುದು ಎಂದವರು ನುಡಿದರು.

ಈ ಪ್ರೀಪೇಯ್ಡ್‌ಆಟೋ ಕೌಂಟರ್‌ಗಳ ಆರಂಭದಿಂದ ನಗರದಲ್ಲಿನ ಸಾರ್ವಜನಿಕರು ಹಾಗೂ ನೆರೆಯ ಜಿಲ್ಲೆ, ತಾಲೂಕುಗಳಿಂದ ನಗರಕ್ಕೆ ವಿವಿಧ ಉದ್ದೇಶಗಳಿಗಾಗಿ ಆಗಮಿಸುವವರಿಗೆ ಅನುಕೂಲವಾಗಲಿದೆ ಎಂದ ಅವರು ಸುಗಮ ಸಂಚಾರ ವ್ಯವಸ್ಥೆಯಿಂದಾಗಿ ಶಿಸ್ತು ಮೂಡಲಿದೆ.

ಪ್ರಾಯೋಗಿಕವಾಗಿ ಆರಂಭಿಸಲಾಗುತ್ತಿರುವ ಈ ವ್ಯವಸ್ಥೆ ಯಶಸ್ವಿಯಾದಲ್ಲಿ ನಗರದ ಎಲ್ಲಾ ಪ್ರಮುಖ ವರ್ತುಲಗಳು, ಜನನಿಬಿಡ ಸ್ಥಳಗಳಿಗೆ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...