ಶಿವಮೊಗ್ಗ | ಆನೆ ಹಾವಳಿ ತಡೆಗಟ್ಟಿ ; ಬೆಳೆ ರಕ್ಷಿಸಿ ; ವನ್ಯಜೀವಿ ಅರಣ್ಯ ಕಚೇರಿ ಎದುರು ಅಗಸವಳ್ಳಿ ಗ್ರಾಪಂ ರೈತರ ಪ್ರತಿಭಟನೆ

Date:

ಶಿವಮೊಗ್ಗ : ತಾಲೂಕಿನ ಅಗಸವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾಯ್‌ಹೊಳೆ, ಲೇಬರ್ ಕಾಲೋನಿ, ಭೋವಿ ಕಾಲೋನಿ, ಭಾರತೀನಗರ ಮತ್ತು ಗೋವಿಂದಾಪುರಗಳಲ್ಲಿ ಕಾಡಾನೆಗಳ ಹಾವಳಿ ವಿಪರೀತ ಹೆಚ್ಚಾಗಿದ್ದು, ರೈತರು ಬೆಳೆ ಕೈಗೆ ಸಿಗದೆ ಕಂಗಾಲಾಗಿದ್ದಾರೆ. ಆನೆಗಳ ಕಾಟದಿಂದ ಬೆಳೆ ಕೈಗೆ ಸಿಗದೆ ರೈತರು ಆತ್ಮಹತ್ಯೆಗೆ ಮುಂದಾಗಿದ್ದಾರೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಇಲ್ಲಿನ ಆರ್ ಟಿ ಓ ರಸ್ತೆಯಲ್ಲಿರುವ ವನ್ಯಜೀವಿ ವಿಭಾಗದ ಅರಣ್ಯ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಆನೆಗಳನ್ನು ಬೆದರಿಸಿ ಓಡಿಸುವ ಕೆಲಸವನ್ನು ಮಾಡಬೇಕು. ಇಲ್ಲವಾದಲ್ಲಿ ರೈತರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಎದುರಾಗಲಿದೆ.

ಮೊನ್ನೆಯಷ್ಟೇ ರೈತನೊಬ್ಬ ವಿಷ ಸೆವಿಸಲು ಮುಂದಾದಾಗ ಗ್ರಾಮಸ್ಥರು ವಿಷಯ ಅರಿತು ಆತನ ಮನವೊಲಿಸಿದ್ದಾರೆ. ಒಂದು ವೇಳೆ ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಶವವನ್ನು ಅರಣ್ಯ ಇಲಾಖೆಯ ಎದುರು ತಂದಿಟ್ಟು ಧರಣಿ ಕುಳಿತುಕೊಳ್ಳುವುದಾಗಿ ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆನೆ ಹಾವಳಿಯಿಂದ ಪ್ರತಿ ರೈತರ ಬೆಳೆ ಸಂಪೂರ್ಣ ಹಾಳಾಗಿದೆ. ಅಡಿಕೆ ತೋಟಗಳ ಮರಗಳು ನೆಲಕಚ್ಚಿವೆ.

ಎರಡು ತಿಂಗಳಿಂದ ಸತತವಾಗಿ ಆನೆ ಕಾಟ ಜಾಸ್ತಿಯಾಗಿದೆ. ಎಷ್ಟೇ ಬೆದರಿಸಿ ಕಳುಹಿಸಿದರೂ ಆನೆ ಮತ್ತೆ ವಾಪಸ್ ಬರುತ್ತಿವೆ. ಆದ್ದರಿಂದ ಆನೆ ಕಾಟದಿಂದ ಮುಕ್ತಿ ಕೊಡಬೇಕೆಂದು ಕೋರಿದರು

ಗ್ರಾಮಸ್ಥರು ಅರಣ್ಯ ಅಧಿಕಾರಿಗಳ ಜೊತೆಗೆ ಹಲವಾರು ಬಾರಿ ಆನೆ ಹೊಡೆದೋಡಿಸಿದ್ದಾರೆ. ಇಲಾಖೆ ರೈತರಿಗೆ ಮೈಕನ್ನು ನೀಡಿದೆ. ಪಟಾಕಿಯನ್ನೂ ಸಿಡಿಸಲಾಗುತ್ತಿದೆ. ಒಮ್ಮೆ ಓಡಿಹೋದ ಆನೆ ಮರಳಿ ಮತ್ತೆ ಬರುತ್ತಿದೆ ಎಂದ ಅವರು, ರೈತರು ಜಮೀನಿನಲ್ಲಿ ಮನೆ ಕಟ್ಟಿಕೊಂಡು ವಾಸವಾಗಿದ್ದು ಅವರಿಗೆ ಮನೆಯಿಂದ ಹೊರಬರದಂತಹ ಸ್ಥಿತಿ ಎದುರಾಗಿದೆ. ಸಂಜೆಯಾದಂತೆ ರಸ್ತೆಯಲ್ಲಿ ಸಂಚರಿಸುವುದೇ ಕಷ್ಟಕರವಾಗಿ ಪರಿಣಮಿಸಿದೆ . ಆನೆ ಬರದಂತೆ ಟ್ರಂಚ್ ತೆಗೆಸಬೇಕೆಂದು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ವನ್ಯಜೀವಿ ವಿಭಾಗದ ವಲಯ ಅರಣ್ಯ ಅಧಿಕಾರಿ ವಾಣಿ ಹೆಗಡೆ, ಅರಣ್ಯ ಅಧಿಕಾರಿಗಳು ಈ ಬಗ್ಗೆ ಸತತವಾಗಿ ಕ್ರಮ ಕೈಗೊಂಡಿದ್ದಾರೆ. ಆದರೆ ಬೆದರಿಸಿ ಓಡಿಸಿದ ಆನೆಗಳು ಮತ್ತೆ ವಾಪಸ್ ಬರುತ್ತಿವೆ. ಇದನ್ನು ತಡೆಗಟ್ಟಲು ಸಾಧ್ಯವಾಗುತ್ತಿಲ್ಲ. ರೈತರಿಗೆ ಪಟಾಕಿ, ಮೈಕ್‌ಗಳನ್ನು ನೀಡಲಾಗಿದೆ. ಆನೆಗಳ ಹಾವಳಿಯನ್ನು ನಿಯಂತ್ರಿಸಲು ಇಲಾಖೆ ಸಹ ಯತ್ನಿಸುತ್ತಿದೆ. ಅರಣ್ಯ ಸಿಬ್ಬಂದಿಗಳು ಸಹ ಹಗಲು ರಾತ್ರಿ ಎನ್ನದೆ ಕಾಡಂಚಿನ ಭಾಗದಲ್ಲಿ ಸುತ್ತಾಡುತ್ತಿದ್ದಾರೆ ಇವರಿಗೆ ರೈತರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ರೈತರಾದ ಪೆರುಮಾಳ್, ಗೋವಿಂದ, ನಾಗರಾಜ, ಮಣಿಕಂಠ, ತಮ್ಮಣ್ಣ, ಎಸ್ ಟಿ ಮಂಜುನಾಥ ಸೇರಿದಂತೆ ನೂರಾರು ರೈತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...