ಶಿವಮೊಗ್ಗ | ಭಿಕ್ಷುಕರಿಂದ ಸಮಸ್ಯೆ, ಕ್ರಮಕ್ಕೆ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯಿಂದ ಮನವಿ

Date:

ಶಿವಮೊಗ್ಗ ನಗರದ ಸರ್ಕಾರಿ ಹಾಗೂ ಖಾಸಗಿ ಬಸ್ಸು ನಿಲ್ದಾಣದಲ್ಲಿ ಸಾಕಷ್ಟು ಭಿಕ್ಷುಕರು, ನಿರಾಶಿತರು ಮಾನಸಿಕ ಅಸ್ವಸ್ಥರು ಹಾಗೂ ಮದ್ಯಪಾನಿಗಳಿಗೆ ವಾಸ ಸ್ಥಳವಾಗಿದೆ ಎಂದು ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಗೆ ದೂರವಾಣಿ ಕರೆಗಳ ಮೂಲಕ ಹಾಗೂ ಮೌಖಿಕವಾಗಿ ದೂರಿನ ಅನ್ವಯ ದಿನಾಂಕ 27 -9 -2025 ರಂದು ಸಮಯ ಸುಮಾರು ರಾತ್ರಿ 9:30 ರಿಂದ 11 ಗಂಟೆವರೆಗೆ ಸ್ಥಳ ಪರಿಶೀಲನೆ ಮಾಡಿದರು.

ಈ ಸಂದರ್ಭದಲ್ಲಿ ಸ್ಥಳೀಯರು ಹಾಗೂ ಅಲ್ಲಿನ ಸಿಬ್ಬಂದಿಗಳಿಂದ ಆಘಾತಕಾರಿ ವಿಷಯಗಳು ಕೂಡ ಹೊರ ಬಿದ್ದಿದೆ ಸುಮಾರು ನೂರಕ್ಕೂ ಅಧಿಕ ಜನ ದಿನ ರಾತ್ರಿ ಇಲ್ಲೇ ವಾಸವಾಗಿರುತ್ತಾರೆ ಕೆಲ ಖಾಸಗಿ ವ್ಯಕ್ತಿಗಳು ಬಿಕ್ಷುಕರಿಂದ ಬಡ್ಡಿ ವ್ಯವಹಾರವನ್ನು ನಡೆಸಿರುತ್ತಾರೆ ಎಂಬ ವಿಷಯ ತಿಳಿದು ಬಂದಿದೆ ಎಂಬ ಆರೋಪ ತಿಳಿಸಿದ್ದಾರೆ.

1002341806

ಮಹಿಳಾ ವಿಶ್ರಾಂತಿ ಕೊಠಡಿಗಳಲ್ಲಿ ಕೆಲ ಮಹಿಳಾ ಭಿಕ್ಷಕರು ಅಲ್ಲಿಯೇ ನಿರಂತರವಾಗಿ ರಾತ್ರಿಯ ವೇಳೆ ವಾಸವಾಗಿರುವುದು ಕಂಡುಬರುತ್ತದೇ, ಇಲ್ಲಿ ಅಕ್ಕಪಕ್ಕದ ಊರಿನವರಲ್ಲದೆ ಹೊರರಾಜ್ಯಗಳಿಂದ ಕೂಡ ಬಂದು ಚಿಕ್ಕ ಮಕ್ಕಳ ಜೊತೆಗೆ ಆರೋಗ್ಯ ಸಮಸ್ಯೆ ಹೇಳಿ ಬಿಕ್ಷಾಟನೆ ಮಾಡುವುದು ಕಂಡುಬಂದಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002341840

ಇಲ್ಲಿ ನೂರು ಜನ ಭಿಕ್ಷುಕರು ತಂಗುವುದರಿಂದ ಅಲ್ಲಿಯೇ ಊಟ ತಿಂಡಿ ಮಧ್ಯಪಾನ ತಂಬಾಕು ಸೇವನೆ ಹಾಗೂ ಅಲ್ಲಿಯೇ ಮಲಮೂತ್ರ ವಿಸರ್ಜನೆ ಮಾಡುವುದರಿಂದ ಇಲ್ಲಿಯ ಸ್ವಚ್ಛತೆ ಸಿಬ್ಬಂದಿಗಳಿಗೆ ತಲೆನೋವಿನ ಸಂಗತಿಯಾಗಿದೆ ಮತ್ತು ಶೌಚಾಲಯದ ಮುಂಭಾಗದಲ್ಲಿಯೇ ನೂರು ಜನ ಭಿಕ್ಷುಕರು ಮಧ್ಯಪಾನ ಮಾಡಿ ಮಲಗುವುದರಿಂದ ಮಹಿಳಾ ಪ್ರಯಾಣಿಕರಿಗೆ ಶೌಚಾಲಯಕ್ಕೆ ಹೋಗುವುದಕ್ಕೆ ಸಾಕಷ್ಟು ತೊಂದರೆಯಾಗುತ್ತದೆ ಎಂಬ ಆರೋಪ ಕೇಳಿ ಬಂದಿದೆ ಎಂದು ತಿಳಿಸಿದ್ದಾರೆ.

ಈ ಲೋಪ ದೋಷಗಳಿಗೆ ಮುಖ್ಯವಾಗಿ ಪೋಲಿಸ್ ಇಲಾಖೆ ಹಾಗೂ ನಗರಸಭೆಯ ಕಾರ್ಯ ವೈಫಲ್ಯವೇ ಎದ್ದು ಕಾಣಿಸುತ್ತದೇ ಎಂದು ಆರೋಪಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ (ರಿ.) ಕರ್ನಾಟಕದ ಮೀನಾ ಎಂ ಎಸ್ ಜಿಲ್ಲಾಧ್ಯಕ್ಷರು ಮಹಾನಗರ ಪಾಲಿಕೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ನೀಡುವ ಮೂಲಕ ಸಮಸ್ಯೆ ಬಗೆಹರಿಸಲು ವಿನಂತಿ ಮಾಡಿರುತ್ತಾರೆ.

1002340781

ಈ ಸಂದರ್ಭದಲ್ಲಿ ಸಂಘಟನೆ ಜಿಲ್ಲಾಧ್ಯಕ್ಷರಾದ ಶ್ರೀಮತಿ ಮೀನಾ ಎಂಎಸ್, ಉಪಾಧ್ಯಕ್ಷರಾದ ಧರ್ಮ ನಾಯಕ್, ನಗರ ಘಟಕದ ಅಧ್ಯಕ್ಷರಾದ ಬಲರಾಮ, ಜಿಲ್ಲಾ ಕಾರ್ಯದರ್ಶಿಯಾದ ಭಾಗ್ಯ ಪಿ ಗೌಡ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದ ಸತೀಶ್ ಅಂಗಡಿ, ಸೊರಬ ತಾಲೂಕು ಘಟಕದ ಅಧ್ಯಕ್ಷರಾದ ರಾಜೇಶ್ ಕಾನಡೆ ಹಾಗೂ ಸಹಾಯಕರಾಗಿ ಭುವನ್ ಕಾನಡೆ ಜೊತೆಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...