ಶಿವಮೊಗ್ಗ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಕೆ ಸಂಶೋಧನಾ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ನಾಗರಾಜಪ್ಪ ಅಡಿವಪ್ಪರ್ ಅವರಿಗೆ ,ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯ ಬೆಂಗಳೂರಿನ 2024ನೇ ಸಾಲಿನ ಪ್ರತಿಷ್ಠಿತ ನಾಗಮ್ಮ ದತ್ತಾತ್ರೇಯರಾವ್ ದೇಸಾಯಿ ರಾಜ್ಯ ಮಟ್ಟದ ಅತ್ಯುತ್ತಮ ಸಂಶೋಧನಾ ಪ್ರಶಸ್ತಿ ಲಭಿಸಿದೆ.
ತೋಟಗಾರಿಕಾ ವಿಜ್ಞಾನಿಯಾಗಿರುವ ಇವರಿಗೆ ಬೆಂಗಳೂರಿನಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಪ್ರಶ್ತಸಿ ಪ್ರದಾನ ಮಾಡಲಾಯಿತು.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ತೋಟಗಾರಿಕಾ ನರ್ಸರಿ ಮಾನ್ಯತಾ ತಂಡದ ಸದಸ್ಯರಾಗಿ, ಅಡಿಕೆಯ ರಾಷ್ಟ್ರೀಯ ವೈಜ್ಞಾನಿಕ ಉಪಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಇವರು, 16 ಸ್ನಾತ್ತಕೋತ್ತರ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಹಾಗೂ 25,000ಕ್ಕೂ ಹೆಚ್ಚು ರೈತರನ್ನು ವಿಸ್ತರಣಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಿದ್ದಾರೆ.
ಇವರ ಅನುಪಮ ಸೇವೆಯನ್ನು ಗುರುತಿಸಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತುತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು 2016ರಲ್ಲಿ ‘ಅತ್ಯುತ್ತಮ ವಿಸ್ತರಣಾ ವಿಜ್ಞಾನಿ’ಯೆಂದು ಹಾಗೂ 2021ರಲ್ಲಿ ‘ಅತ್ಯುತ್ತಮ ಸಂಶೋಧನಾ ವಿಜ್ಞಾನಿ’ಯೆಂದು ಗುರುತಿಸಿ ಗೌರವಿಸಿದೆ.





