ಸೊರಬ, ತಾಲೂಕಿನಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದ ಮಳೆ ಆಗಿದ್ದರಿಂದ ಬೆಳೆಹಾನಿಯಾಗಿದ್ದು, ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಪಟ್ಟಣದ ತಾಲೂಕು ಕಚೇರಿ ಮುಂಭಾಗ ರಾಜ್ಯ ರೈತ ಸಂಘ ಹಾಗೂ ಹೆಸಿರು ಸೇನೆ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮಂಜುಳಾ ಹೆಗಡಾಳ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘಟನೆಯ ಜಿಲ್ಲಾಧ್ಯಕ್ಷ ಹಾಲೇಶ್ ಗೌಡ ಮಾತನಾಡಿ, ತಾಲೂಕಿನಲ್ಲಿ ಕಳೆದ ಮೇ ತಿಂಗಳಿನಿಂದ ವಿಪರೀತ ಮಳೆಯಾದ ಪತರಿಣಾಮ ರೈತರು ಬೆಳೆದಿರುವ ಜೋಳ, ಅಡಿಕೆ, ಶುಂಠಿ, ಕಬ್ಬು, ಭತ್ತ ಇನ್ನಿತರ ಬೆಳೆಗಳು ಸಂಪೂರ್ಣ ನಾಶವಾಗಿದೆ. ಇದರಿಂದ ರೈತ ಕೂಲಿಕಾರ್ಮಿಕರಿಗೆ ದೈನಂದಿನ ಜೀವನ ನಡೆಸುವುದು ಕಷ್ಟವಾಗಿದೆ.
ಅಲ್ಲದೆ, ಬೆಳೆದ ಬೆಳೆಗೆ ಸರಿಯಾದ ವೈಜ್ಞಾನಿಕ ಬೆಲೆ ಸಿಗದೇ ಕೃಷಿಗಾಗಿ ಮಾಡಿದ ಸಾಲ ತೀರಿಸಲು ರೈತರು ಹೆಣಗಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಎಸ್. ಬಾಪಟ್ ಮಾತನಾಡಿ, ರೈತರು ವ್ಯವಸಾಯ ಸಹಕಾರ ಸಂಘ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಮಾಡಿದ ಕೃಷಿ ಸಾಲವನ್ನು ಮನ್ನಾ ಮಾಡಬೇಕು ಸರ್ಕಾರದಿಂದ ಬೆಳೆ ಪರಿಹಾರ ಬಿಡುಗಡೆ ಮಾಡಿಸಬೇಕು. ತಾಲೂಕಿನಲ್ಲಿದ್ದಂತ ಹದಗೆಟ್ಟ ರಸ್ತೆಗಳನ್ನ ದುರಸ್ತಿ ಮಾಡಬೇಕು ಎಂದು ಅಗ್ರಹಿಸಿದರು.ಪ್ರ
ತಿಭಟನೆಯಲ್ಲಿ ರೈತ ಸಂಘದ ಗೌರವಾಧ್ಯಕ್ಷ ಈರಪ್ಪ ಪ್ಯಾಟಿ, ಉಪಾಧ್ಯಕ್ಷ ಲೋಕಪ್ಪ, ವಿರೂಪಾಕ್ಷಪ್ಪ, ವಿಕ್ರಂ ಪಾಟೀಲ್, ಲೋಕಪ್ಪ, ಬಂಗಾರಪ್ಪ, ಶೇಖರಪ್ಪ, ಗದಿಗೆಪ್ಪಗೌಡ, ಕೆರಿಯಪ್ಪ, ಹೆಚ್.ಸಿ. ನಾಗರಾಜ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.





