ಶಿವಮೊಗ್ಗ | ಸಾಲ ಬಡ್ಡಿಮನ್ನಾದ 15 ಕೋಟಿ ರೂ. ಬಾಕಿಯನ್ನು ಡಿಸಿಸಿ ಬ್ಯಾಂಕಿಗೆ ಬಿಡುಗಡೆ ಮಾಡಿ : ಕಲ್ಲೂರು ಮೇಘರಾಜ್

Date:

ಶಿವಮೊಗ್ಗ, ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸರ್ಕಾರ ಪ್ರಕಟಿಸಿದ ಮಧ್ಯಮಾವಧಿ ಕೃಷಿ ಸಾಲ (ಎಂ.ಐ.ಎಲ್.) ದ ಬಡ್ಡಿ ಹಣ ಮನ್ನಾ ಯೋಜನೆಯ 2.52 ಕೋಟಿ ರೂಪಾಯಿಗಳನ್ನು ಹಾಗೂ 2018 ರಲ್ಲಿ ಅಂದಿನ ಮುಖ್ಯಮಂತ್ರಿಗಳಾಗಿದ್ದ ಹೆಚ್.ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದ ಸಾಲ ಮನ್ನಾ ಯೋಜನೆಯ ಜಿಲ್ಲೆಯ 1956 ರೈತ ಫಲಾನುಭವಿಗಳ 12.54 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಆಗ್ರಹಿಸಿದೆ.

ಸುದ್ದಿಗೊಷ್ಟಿಯಲ್ಲಿ ಈ ಬಗ್ಗೆ ಮಾತನಾಡಿದ ಕೇಂದ್ರದ ಟ್ರಸ್ಟಿ ಕಲ್ಲೂರು ಮೇಘರಾಜ, ಇದರಿಂದ ರೈತರು ಡಿ.ಸಿ.ಸಿ. ಬ್ಯಾಂಕ್‌ಗಳಲ್ಲಿ ಅಡಮಾನ ಮಾಡಿರುವ ತಮ್ಮ ಭೂದಾಖಲೆಗಳನ್ನು ವಾಪಾಸ್ ಪಡೆದು, ಮುಂದಿನ ಕೃಷಿ ಚಟುವಟಿಕೆಗೆ ವಿವಿಧ ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯವನ್ನು ಪಡೆಯಲು ಅನುಕೂಲಾಗುತ್ತದೆ ಎಂದರು.

ಮಧ್ಯಮಾವಧಿ ಕೃಷಿ ಸಾಲದ ಸಿದ್ದರಾಮಯ್ಯನವರ ಸರ್ಕಾರ 2023 ರಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ರೈತರ ಮಾಡಿದ್ದರಿಂದ ಶಿವಮೊಗ್ಗ ಜಿಲ್ಲೆಯ 144 ರೈತ ಫಲಾನುಭವಿಗಳು ಸಾಲದ ಅಸಲು ಹಣವನ್ನು ಪಾವತಿಸಿದ್ದು, (ಎಂ.ಐ.ಎಲ್.) ಬಡ್ಡಿ ಹಣವನ್ನು ಮನ್ನಾ ಮಾಡುವುದಾಗಿ ಘೋಷಣೆ ಬಡ್ಡಿ ಮನ್ನಾ ಯೋಜನೆಯ ರೂ.2.52 ಕೋಟಿ ಬಾಕಿ ಹಣ ಬಿಡುಗಡೆಯಾಗದೇ ರೈತರು ಜಿಲ್ಲೆಯಲ್ಲಿ ಡಿ.ಸಿ.ಸಿ. ಬ್ಯಾಂಕ್‌ಗೆ ಅಡಮಾನ ಮಾಡಿದ ದಾಖಲೆಗಳನ್ನು ವಾಪಾಸ್ ಪಡೆಯದೇ ಬೇರೆ ವಾಣಿಜ್ಯ ಬ್ಯಾಂಕಿನಲ್ಲೂ ಸಾಲ ಪಡೆಯದ ಅತಂತ್ರ ಸ್ಥಿತಿಯಲ್ಲಿ ಸಿಲುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದೇ ರೀತಿ 2018 ರಲ್ಲಿ ಅಂದಿನ ಮುಖ್ಯಮಂತ್ರಿಗಳಾಗಿದ್ದ ಹೆಚ್.ಡಿ. ಕುಮಾರಸ್ವಾಮಿಯವರು ಸಾಲ ಮನ್ನಾ ಯೋಜನೆಯನ್ನು ಘೋಷಣೆ ಮಾಡಿದಾಗ ಜಿಲ್ಲೆಯಲ್ಲಿ 1956 ಫಲಾನುಭವಿಗಳಿಗೆ 12.54 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕಾಗಿದೆ ಎಂದರು.

ಭದ್ರಾವತಿ ತಾಲ್ಲೂಕಿಗೆ ರೂ.2.52 ಕೋಟಿ, ಹೊಸನಗರ ತಾಲ್ಲೂಕಿಗೆ ರೂ.2.62 ಕೋಟಿ, ಸಾಗರ ತಾಲ್ಲೂಕಿಗೆ ರೂ.1.32 ಕೋಟಿ, ಶಿಕಾರಿಪುರ ತಾಲ್ಲೂಕಿಗೆ ರೂ.0.52 ಕೋಟಿ, ಶಿವಮೊಗ್ಗ ತಾಲ್ಲೂಕಿಗೆ ರೂ. 3.27 ಕೋಟಿ, ಸೊರಬ ತಾಲ್ಲೂಕಿಗೆ ರೂ. 3.07 ಕೋಟಿ ಹಾಗೂ ತೀರ್ಥಹಳ್ಳಿ ರೂ.1.55 ಕೋಟಿ ಸೇರಿ ಒಟ್ಟು 12.54 ಕೋಟಿ ತಾಲ್ಲೂಕಿಗೆ ರೂಪಾಯಿಗಳನ್ನು ಬಾಕಿ ಹಣ ಬಿಡುಗಡೆ ಮಾಡಬೇಕಾಗಿದೆ ಎಂದರು.

ಹೆಚ್.ಡಿ. ಕುಮಾರಸ್ವಾಮಿಯವರು ನಾನು ಮಣ್ಣಿನ ಮಗ ಎಂದು ಘೋಷಣೆ ಮಾಡಿಕೊಂಡು, ಸಾಲ ಮನ್ನಾ ಯೋಜನೆಯ ಹರಿಕಾರ ಎಂದು ಟಾಂ ಟಾಂ ಎಂದು ಸಾರುತ್ತಾ ಹೋದರು. ಆದರೆ ತಾವೇ ಘೋಷಣೆ ಮಾಡಿದ ಸಾಲ ಮನ್ನಾ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ 1956 ರೈತ ಫಲಾನುಭವಿಗಳಿಗೆ 12.54 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡದೇ ಇರುವುದು ರೈತ ಕುಟುಂಬಗಳಿಗೆ ಕುಮಾರಸ್ವಾಮಿಯವರು ಮಾಡಿದ ಅನ್ಯಾಯವಾಗಿದೆ ಎಂದರು.

ನಂತರ 2019 ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಯ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪನವರಾಗಲೀ ಶಿವಮೊಗ್ಗ ಜಿಲ್ಲೆಯ 1956 ರೈತ ಫಲಾನುಭವಿಗಳಿಗೆ ಸಾಲ ಮನ್ನಾ ಯೋಜನೆಯ 12.54 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡದೇ ಅನ್ಯಾಯ ಮಾಡಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಜನಮೇಜಿರಾವ್, ಶಂಕ್ರಾ ನಾಯ್ಕ್ ಮೊದಲಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...