ಶಿವಮೊಗ್ಗ | ಜಾತಿ ಗಣತಿ ಸಂದರ್ಭದಲ್ಲಿ ದೀವರು ಎಂದೇ ನಮೂದಿಸಲು ಮನವಿ

Date:

ಶಿವಮೊಗ್ಗ, ಜಾತಿ ಗಣತಿ ಸಂದರ್ಭದಲ್ಲಿ ಮೂಲ ದೀವರು ಜಾತಿಯಿಂದ ಈಡಿಗ ಜಾತಿಗೆ ಜಾತ್ಯಾಂತರ ಹೊಂದಿದವರು ಹಾಗೂ ಈಡಿಗ ಜಾತಿಯ ಅಡಿಯಲ್ಲಿ ದೀವರು ಎಂದು ಉಪಜಾತಿಯಾಗಿ ಗುರುತಿಸಿಕೊಂಡವರು ತಮ್ಮ ಮೂಲ ಜಾತಿಯಾದ ದೀವರು ಜಾತಿಯನ್ನು “ದೀವರು” ಎಂದು ಮುಖ್ಯ ಜಾತಿಯನ್ನಾಗಿ ನಮೂದಿಸುವಂತೆ ದೀವರ ಕ್ಷೇಮಾಭಿವೃದ್ಧಿ ಸಂಘ ಮನವಿ‌ ಮಾಡಿದೆ.

ಶಿವಮೊಗ್ಗದಲ್ಲಿ ಬಹುಸಂಖ್ಯಾತರಾಗಿರುವ ಹಾಗೂ ಉತ್ತರ ಕನ್ನಡ ಮುತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಇರುವಂತಹ ದೀವರ ಸಮುದಾಯದವರು ಕನ್ನಡ ನಾಡಿನಲ್ಲಿ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದ್ದಾರೆ.

ಮೂಲತಃ ಬುಡಕಟ್ಟು ಜನಾಂಗದವರಾದ ದೀವರು ಸ್ಥಿತ್ಯಂತರಗೊಂಡ ಸಂದರ್ಭದಲ್ಲಿ ಅರಸೊತ್ತಿಗೆಯ ಅಡಿಯಲ್ಲಿ ನೂರಾರು ವರ್ಷ ಸೇನೆಯಲ್ಲಿ ಉನ್ನತ ಹುದ್ದೆಗಳಲ್ಲಿ ಮತ್ತು ಸೈನಿಕರಾಗಿ ಸೇವೆ ಸಲ್ಲಿಸುವ ಮೂಲಕ ಕ್ಷಾತ್ರಗುಣವನ್ನೂ ಸಹ ಮೆರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಳುವವನೆ ಹೊಲದೊಡೆಯ ಕಾನೂನು ಜಾರಿಯಾದ ನಂತರದಲ್ಲಿ – ಭೂ ಮಾಲೀಕರಾಗಿ ದೀವರು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.ಮೂಲತ: ದೀವರು ರಾಜ್ಯದಲ್ಲಿ ಸುಮಾರು 6-8 ಲಕ್ಷ ಜನರಿದ್ದು ಅವರಲ್ಲಿ ಬಹುತೇಕರು ಇತ್ತೀಚಿನ ದಿನಗಳಲ್ಲಿ ಇತಿಹಾಸದ ಅರಿವಿನ ಕೊರತೆಯಿಂದಲೋ ಅಥವಾ ಕೀಳರಿಮೆಯಿಂದಲೋ ತಮ್ಮ ಜಾತಿಯನ್ನು ಈಡಿಗ ಎಂದು ನಮೂದಿಸಿಕೊಳ್ಳುವ ಮುಖೇಣ ಜಾತ್ಯಾಂತರ ಹೊಂದಿ ದೀವರು ಎನ್ನುವಂತ ಒಂದು ಶ್ರೀಮಂತ ಪರಂಪರೆ ಕಣ್ಮರೆಯಾಗುವಂತ ಸಂದರ್ಭಕ್ಕೆ ಕಾರಣರಾಗಿದ್ದಾರೆ ಎಂದರು.

ಹಾವನೂರು ವರದಿ ಜಾರಿಗೊಳ್ಳುವ ಸಂದರ್ಭದಲ್ಲಿ ಪರಿಶಿಷ್ಟರ ಗುಂಪಿಗೆ ಸೇರಬೇಕಾಗಿದ್ದಂತ ಅವಕಾಶದಿಂದ ವಂಚಿತರಾಗಿದ್ದಾರೆ. ಬಹುತೇಕ ದೀವರು ಸಾಂದರ್ಭಿಕ ಶಿಶುಗಳಾಗಿ ಈಡಿಗ ಎಂದು ಮುಖ್ಯ ಜಾತಿಯನ್ನಾಗಿ ಗುರುತಿಸಿಕೊಂಡಿರುತ್ತಾರೆ. ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ನಿಟ್ಟಿನಲ್ಲಿ ಒಟ್ಟು 1400 ಜಾತಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ವತಿಯಿಂದ ಕಲ್ಪಿಸಲಾಗುವ ಆರ್ಥಿಕ ಮತ್ತು ಮೀಸಲಾತಿ ಸೌಲಭ್ಯಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ, ದೀವರು ಎಂದೇ ನಮೂದಿಸಬೇಕೆಂದು ಮನವಿ ಮಾಡಿದರು.

ಮೂಲತಃ ದೀವರ ಜಾತಿಯವರಾಗಿ ಈಗ ಈಡಿಗ ಜಾತಿಯಲ್ಲಿ ಗುರುತಿಸಿಕೊಂಡು ಸರ್ಕಾರಿ ದಾಖಲೆಗಳಲ್ಲಿ ಈಡಿಗ ಎಂದು ನಮೂದಾಗಿರುವ, ದೀವರ ಸಮುದಾಯದವರಿಗೆ ಈಡಿಗ ಜಾತಿಯಿಂದ ಪುನಃ ದೀವರು ಜಾತಿಗೆ ಜಾತ್ಯಾಂತರ ಹೊಂದಲು ಅವಕಾಶ ನೀಡುವ ಮುಖೇನ ಸರ್ಕಾರಿ ದಾಖಲೆಗಳಲ್ಲಿ ತಮ್ಮ ಜಾತಿಯನ್ನು ಈಡಿಗ ಜಾತಿ ಬದಲಿಗೆ ದೀವರು ಜಾತಿಯನ್ನು ನಮೂದಿಸಿಕೊಳ್ಳಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಆದೇಶ ನೀಡಬೇಕೆಂದು ಮನವಿ‌ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...