ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಚಿಕ್ಕಬನ್ನಿಹಟ್ಟಿ ಗ್ರಾಮದ ಪ್ರಗತಿಪರ ರೈತ ಶ್ರೀಮತಿ ನಾಗರತ್ನಮ್ಮ ಹಾಗೂ ಶ್ರೀ ರೇವಣಸಿದ್ದಪ್ಪ ಕೆ.ಜಿ. ದಂಪತಿಗಳ ಪುತ್ರರಾದ ಸಂದೀಪ ಆರ್. ಅವರು ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ, ಶಿವಮೊಗ್ಗ ಇವರು ನೀಡುವ ಡಾಕ್ಟರೇಟ್ (ಪಿ.ಎಚ್.ಡಿ) ಪದವಿಗೆ ಪಾತ್ರರಾಗಿದ್ದಾರೆ.
‘ಪಂಚಮಸಾಲಿ ಸಮುದಾಯದ ಒಂದು ಸಮಾಜಶಾಸ್ತ್ರ ಅಧ್ಯಯನ’ ಎಂಬ ವಿಷಯದ ಮೇಲೆ ನಡೆಸಿದ ಸಂಶೋಧನೆಗೆ ಅವರು ಈ ಪದವಿ ಪಡೆದಿದ್ದಾರೆ.
ಈ ಸಂಶೋಧನೆಗೆ ಸಹ್ಯಾದ್ರಿ ಕಲಾ ಕಾಲೇಜು, ಶಿವಮೊಗ್ಗದ ಪ್ರಾಧ್ಯಾಪಕರಾದ ಪ್ರೊ. ಎಂ. ಪೂರ್ವಾಚಾರ್ ಅವರ ಮಾರ್ಗದರ್ಶನ ದೊರೆದಿದೆ.
ಇವರ ಸಾಧನೆಗೆ ಸ್ನಾತಕೋತ್ತರ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷರು, ಪ್ರಾಧ್ಯಾಪಕರು ಹಾಗೂ ಸಿಬ್ಬಂದಿವರ್ಗ ಶ್ಲಾಘನೆ ವ್ಯಕ್ತಪಡಿಸಿ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.





