ಶಿವಮೊಗ್ಗ | ಸೆ.4ಕ್ಕೆ ಸೌಹಾರ್ದವೇ ಹಬ್ಬ : ಗೋಪಿವೃತ್ತದಲ್ಲಿ ಮಾನವ ಸರಪಳಿ

Date:

ಶಿವಮೊಗ್ಗ, ಈ ವಾರಾಂತ್ಯದಲ್ಲಿ ನಡೆಯಲಿರುವ ಗಣಪತಿ ಮೆರವಣಿಗೆ ಮತ್ತು ಈದ್ ಮಿಲಾದ್ ಮೆರವಣಿಗೆಯಲ್ಲಿ ಶಾಂತಿ ಕಾಪಾಡಲು ಮತ್ತು ಎಲ್ಲಾ ಧರ್ಮದವರು ಒಟ್ಟಾಗಿ ಸಾಮರಸ್ಯದಿಂದ ಹಬ್ಬ ಆಚರಿಸುವ ದೃಷ್ಠಿಯಿಂದ ‘ನಮ್ಮ ನಡೆ ಶಾಂತಿಯ ಕಡೆ’ ಸಮಿತಿಯು ಸೆ.೪ ರಂದು ಮಧ್ಯಾಹ್ನ ೪ ಗಂಟೆಗೆ ಅಂಬೇಡ್ಕರ್ ಭವನದಲ್ಲಿ ಸೌಹಾರ್ದವೇ ಹಬ್ಬ ಶಾಂತಿಸಭೆಯನ್ನು ಹಮ್ಮಿಕೊಂಡಿದೆ.
ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕಾರ್ಯಕ್ರಮದ ಮುಖಂಡ ವಕೀಲ ಕೆ.ಪಿ. ಶ್ರೀಪಾಲ್ ಹೇಳಿದರು.

4 ವರ್ಷಗಳಿಂದ ನಮ್ಮ ಸಮಿತಿಯು ಶಿವಮೊಗ್ಗದಲ್ಲಿ ಶಾಂತಿ ನೆಲೆಸುವ ಹಿನ್ನೆಲೆಯಲ್ಲಿ ಪ್ರಮುಖವಾಗಿ ಎಲ್ಲಾ ಧರ್ಮದವರ ಹಬ್ಬಗಳನ್ನು ಸಾಮರಸ್ಯದಿಂದ ಒಟ್ಟಾಗಿ ಆಚರಿಸಲು ಅನುಕೂಲವಾಗುವಂತೆ ಶಾಂತಿ ನಡಿಗೆ, ಸೌಹಾರ್ದ ಹಬ್ಬ ಎಂಬ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಈ ಬಾರಿಯೂ ಕೂಡ ಶಾಂತಿ ಕಾರ್ಯಕ್ರಮಗಳನ್ನು ಕೊಳ್ಳಲಾಗಿದೆ ಎಂದರು.

ಸೆ.4 ರಂದು ಮಧ್ಯಾಹ್ನ 4 ಗಂಟೆಗೆ ಗೋಪಿವೃತ್ತದಲ್ಲಿ ಮಾನವ ಸರಪಳಿಯನ್ನು ರಚಿಸಲಾಗುವುದು. ಎಲ್ಲಾ ಧರ್ಮದ ಗುರುಗಳು ಇದರಲ್ಲಿ ಭಾಗವಹಿಸುತ್ತಾರೆ. ನಂತರ ಅಂಬೇಡ್ಕರ್ ಭವನದಲ್ಲಿ ಶಾಂತಿಸಭೆ ನಡೆಯಲಿದೆ. ಬೆಕ್ಕಿನಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರರು, ಬಸವಕೇಂದ್ರ ಬಸವಮರುಳಸಿದ್ಧರು, ಫಾದರ್ ಸ್ಟಾನ್ಲಿ ಡಿಸೋಜಾ, ಜಾಮೀಯಾ ಮಸೀದಿಯ ಗುರು ಅಬ್ದುಲ್ ಹಬೀಬ್, ಜಿಲ್ಲಾಧಿಕಾರಿ ಗುರುದತ್ ಹೆಗಡೆ , ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ಕುಮಾರ್ ಸೇರಿದಂತೆ ಎಲ್ಲಾ ಧರ್ಮದ ಸ್ವಾಮೀಜಿ, ಫಾದರ್, ಮೌಲಿಗಳು ಇದರಲ್ಲಿ ಪಾಲ್ಗೊಳ್ಳುತ್ತಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಬಳಿಕ ಕೆಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೂಡ ಆಯೋಜಿಸಲಾಗಿದೆ. ಗಾಯಕ ಕೆ. ಯುವರಾಜ್, ಇಮ್ತಿಯಾಜ್ ಸುಲ್ತಾನ್ ಅವರಿಂದ ಗಾಯನ, ರಂಗಬೆಳಕು ತಂಡದಿಂದ ಹಾಡು, ರಂಗಗೀತೆ ಏರ್ಪಡಿಸಲಾಗಿದೆ ಎಂದರು.

ಡಿ ಎಸ್ ಎಸ್ ರಾಜ್ಯ ಸಂಚಾಲಕ ಮುಖಂಡ ಎಂ. ಗುರುಮೂರ್ತಿ ಮಾತನಾಡಿ. ಶಿವಮೊಗ್ಗ ಅತ್ಯಂತ ಸೂಕ್ತ ಪ್ರದೇಶವಾಗಿತ್ತು. ಎಲ್ಲಾ ಸೌಲಭ್ಯಗಳಿದ್ದರೂ ಇಲ್ಲಿ ಹಿಂದು- ಮುಸ್ಲೀಂ ಗಲಾಟೆಗಳು ನಡೆಯುತ್ತವೆ ಎಂಬ ಕಾರಣಕ್ಕೆ ಬಂಡವಾಳ ಹೂಡುವವರು ಬರುತ್ತಿಲ್ಲ. ನಮ್ಮ ನಡೆ ಶಾಂತಿಯ ಕಡೆಗೆ ಎಂಬ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದರಿಂದ ಒಂದಿಷ್ಟು ಶಾಂತಿ ನೆಲೆಸಿದೆ. ಗಣೇಶ್-ಈದ್ ಮಿಲಾದ್ ಹಬ್ಬಗಳು ಶಾಂತಿಯುತವಾಗಿ ನಡೆಯಲಿ ಎಂದರು.

ಮುಖಂಡರಾದ ಕಿರಣ್ ಕುಮಾರ್, ಅಫ್ತಾಬ್ ಪರ್ವೇಜ್, ಅಬ್ದುಲ್ ವಹಾಬ್, ಜಗದೀಶ, ಮಹಮ್ಮದ್ ಹುಸೇನ್, ಪಾಲಾಕ್ಷಿ, ನಾಗರಾಜ್ ಕಂಕಾರಿ, ಹರಿಗೆ ರವಿ, ಹುಸೇ ನ್ , ರೈತ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಚಂದ್ರಪ್ಪ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...