ಶಿವಮೊಗ್ಗ | ಷಡಾಕ್ಷರಿ ಬಿಜೆಪಿ ಸೇರಿ ರಾಜಕಾರಣ ಮಾಡಲಿ : ಯೋಗೇಶ್ | ರಾಜಕೀಯ ಮಾಡಿದ್ದರೆ ಸಾಬೀತು ಪಡಿಸಲಿ : ಷಡಾಕ್ಷರಿ ಸವಾಲು

Date:

ಶಿವಮೊಗ್ಗ, ರಾಜ್ಯ ಸರಕಾರಿ‌ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ‌ ಬಿಜೆಪಿ ಸದಸ್ಯರಾಗುವುದು ಒಳ್ಳೆಯದು ಎಂದು ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಇಂದು‌ ಮಾತನಾಡಿದ ಅವರು, ಸರಕಾರಿ‌ ನೌಕರರ ಸಂಘದ ಅಧ್ಯಕ್ಷನಾಗಿ ಸಂಸದ ಬಿ ವೈ ರಾಘವೇಂದ್ರ ಅವರ ಹುಟ್ಟುಹಬ್ಬ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಸಲಹೆ-ಸೂಚನೆ ನೀಡಿರುವುದನ್ನು ಆಕ್ಷೇಪಿಸಿದ್ದಾರೆ.

ಆ. 5ರಂದು ನಡೆದ ಈ ಸಭೆಯಲ್ಲಿ ಸಂಸದರ ಅಭಿಮಾನಿಗಳ ಬಳಗದ ಜೊತೆ ಷಡಾಕ್ಷರಿ ಹಾಜರಿರುವುದರ ಚಿತ್ರ ಬಿಡುಗಡೆ ಮಾಡಿದ ಯೋಗೇಶ್, ಷಡಾಕ್ಷರಿ ಸರಕಾರಿ ನೌಕರರ ಹಿತ ಕಾಯುತ್ತಾರೋ ಅಥವಾ ಬಿಜೆಪಿ ಹಿತ ಕಾಯುತ್ತಾರೆಯೋ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಷಡಕ್ಷರಿ ಭಜರಂಗವಾಗಿ ಬಿಜೆಪಿ ಸದಸ್ಯರಾಗಿ ಆ ಪಕ್ಷದ ಕೆಲಸ ಮಾಡಲಿ ಅದನ್ನು ಬಿಟ್ಟು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಬಿಜೆಪಿ ಕೆಲಸ ಮಾಡುವುದು ಎಂದು ಹೇಳಿದರು ರಾಘವೇಂದ್ರ ಅವರ ಜನ್ಮದಿನದ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಷಡಕ್ಷರಿ ಮಾಡುತ್ತಿದ್ದಾರೆ ಅವರು ರಾಜಕೀಯೇತರವಾಗಿ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರಾಜೀನಾಮೆ ಕೊಟ್ಟು ರಾಜಕೀಯ ಸೇರಲಿ ಎಂದು ಹೇಳಿದರು.

ಷಡಾಕ್ಷರಿ ಪ್ರತಿಕ್ರಿಯೆ

ಇನ್ನೊಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸರ್ಕಾರಿ ನೌಕರ ಸಂಘದ ರಾಜ್ಯ ಅಧ್ಯಕ್ಷ ಷಡಕ್ಷರಿ ಮಾತನಾಡಿ , ನಾನು ಅಧಿಕಾರಿ. ಆ ಚೌಕಟ್ಟಿನಲ್ಲಿಯೇ ಕೆಲಸ ಮಾಡುತ್ತಿದ್ದೇನೆ . ನಾನು ರಾಜಕೀಯ ವಿಚಾರವನ್ನು ಆ ಕಾರ್ಯಕ್ರಮದಲ್ಲಿ ಮಾತನಾಡಿದ್ದರೆ ಅದನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದರಲ್ಲದೆ ಸಿದ್ಧಗಂಗಾ ಮಠಕ್ಕೆ ಅಕ್ಕಿ ಕಳುಹಿಸುವ ಸಂಬಂಧ ಅಭಿಮಾನಿಗಳ ಸಭೆಯಲ್ಲಿ ಪಾಲ್ಗೊಂಡಿದ್ದೆ ಎಂದರು.

ಇದರಲ್ಲಿ ರಾಜಕೀಯವಿಲ್ಲ, ಯೋಗೇಶ್ ಸಂಕುಚಿತತೆ ಬಿಟ್ಟು ಕೆಲಸ ಮಾಡಲಿ . ನನಗೆ ಯಾವುದೇ ಪಕ್ಷ ಇಲ್ಲ. ನಾನು ಸರ್ಕಾರಿ ನೌಕರಿಯನ್ನು ಮಾಡುತ್ತಿದ್ದೇನೆ . ಅಕ್ಕಿ ಕಳುಹಿಸುವ ಸಂಬಂಧದ ಹಲವು ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಎಲ್ಲಾ ಧರ್ಮೀಯರು ಮತ್ತು ಜಾತಿಯವರು ಈ ಸಭೆಯಲ್ಲಿ ಇದ್ದರು.

ಆದರೆ ಇದನ್ನೇ ಬೇರೆ ರೀತಿ ಅರ್ಥ ಕಲ್ಪಿಸಿ ಪ್ರಚಾರ ಮಾಡುವುದು ಸಲ್ಲದು ಎಂದು ಹೇಳಿದರು. ಬಿಜೆಪಿ ಅಥವಾ ಸಂಸದರ ಬ್ಯಾನರ್ ಅಥವಾ ಲೋಗೋ ಕೆಳಗಡೆ ಕೆಲಸ ಮಾಡಿದ್ದಲ್ಲಿ ಫೋಟೋ ತೋರಿಸಲಿ. ಅದನ್ನು ಒಪ್ಪಿಕೊಳ್ಳುವೆ ‌ ನನಗೂ ಇತಿ ಮಿತಿ ಗೊತ್ತಿದೆ. ಆರೋಪ ಮಾಡುವುದು ಸರಿಯಲ್ಲ ‌ ಇಂತಹ ನೂರು ಫೋಟೋಗಳಿವೆ. ನಾನು ಕಳಿಸುವೆ . ಸಿದ್ದಗಂಗಾ ಮಠದ ವಿಷಯದಲ್ಲಿ ರಾಜಕಾರಣ ನಡೆಸಬಾರದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...