ಶಿವಮೊಗ್ಗ | ‘ಶೋಧ ಸಂಭ್ರಮ’ ಕೃತಿ ಬಿಡುಗಡೆ

Date:

ಶಿವಮೊಗ್ಗ , ‘ಶೋಧ ಸಂಭ್ರಮ’ ಕೃತಿ ಬಿಡುಗಡೆ ಮಾಡಿದ ನಂತರ ಹೀಗೆ ತಿಳಿಸಿದರು, ಸಂಶೋಧಕರ ಆಲೋಚನೆಗಳು ಸಮಾಜ ಕಟ್ಟಲು ಸಹಕಾರಿಯಾಗಿರಬೇಕು ಎಂದು ಕುವೆಂಪು ವಿ.ವಿ. ಕುಲಸಚಿವ ಎ.ಎಲ್. ಮಂಜುನಾಥ್ ಅವರು ಅಭಿಪ್ರಾಯಪಟ್ಟರು.

ಕುವೆಂಪು ವಿ.ವಿ. ಕನ್ನಡ ಭಾರತಿಯ ಸಂಶೋಧನಾರ್ಥಿಗಳ ವೇದಿಕೆಯ ವತಿಯಿಂದ ಶಂಕರಘಟ್ಟದ ವಿಶ್ವವಿದ್ಯಾಲಯ ಆವರಣದಲ್ಲಿ ಈಚೆಗೆ ಹಮ್ಮಿಕೊಳ್ಳಲಾಗಿದ್ದ “ಕನ್ನಡ ಸಂಸ್ಕೃತಿ ಸಾಹಿತ್ಯ : ಪುನರ್ಮನನ” ವಿಷಯ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಚಟುವಟಿಕೆ ಬಹಳ ಮುಖ್ಯವಾದದ್ದು, ಸಂಶೋಧನಾರ್ಥಿಗಳು ಸದಾ ಬರಹದಲ್ಲಿ ತಮ್ಮನ್ನು ತೊಡಗಿಸಿಕೊಂಡಿರಬೇಕು,ಸದಾ ಹೊಸತರ ಹುಡುಕಾಟ ಸಂಶೋಧನಾ ಬರಹಗಳಲ್ಲಿ ಕಾಣಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃತಿಯ ಸಂಪಾದಕರಾದ ಡಾ. ಜಿ. ಪ್ರಶಾಂತ ನಾಯಕ ಮಾತನಾಡಿ, ಬರವಣಿಗೆ ಸುಲಭಕ್ಕೆ ದಕ್ಕುವ ಸಂಗತಿಯಲ್ಲ, ಬದಲಾಗಿ ಕಠಿಣವಾದ ಪರಿಶ್ರಮ‌ವನ್ನು ಬೇಡುತ್ತದೆ. ಸಂಶೋಧನಾ ವಿದ್ಯಾರ್ಥಿಗಳು ಸದಾ ಓದು ಮತ್ತು ಬರವಣಿಗೆ‌ಯಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಮಾತ್ರ ಉತ್ತಮ ಸಂಶೋಧನಾ ಬರಹಗಳನ್ನು ನೀಡಲು ಸಾಧ್ಯ ಎಂದು ಅಭಿಪ್ರಾಯ‌ಪಟ್ಟರು.

ಕಳಪೆ ಗುಣಮಟ್ಟದ ಸಂಶೋಧನಾ ಪ್ರಬಂಧಗಳು ರಚನೆಯಾಗುತ್ತಿರುವುದು ಶೈಕ್ಷಣಿಕ ವಲಯದ ಅಧೋಗತಿಯ ಸೂಚಕವಾಗಿದೆ. ಕೆಲವರಾದರು ಪ್ರಾಮಾಣಿಕ‌ವಾಗಿ ಬರವಣಿಗೆ ಮಾಡುವ ಮೂಲಕ ಸಂಶೋಧನೆ‌ಯ ಗುಣಮಟ್ಟ ಕಾಯ್ದುಕೊಳ್ಳಬೇಕಿದೆ. ಸ್ವತಂತ್ರ‌ವಾದ ಬರವಣಿಗೆ ಆತ್ಮ ಸಂತೋಷವನ್ನು ನೀಡುವುದರ ಜೊತೆಗೆ ಸಮಾಜಕ್ಕೆ ಕೊಡುಗೆ‌ಯಾಗಬಲ್ಲುದು ಎಂದು ಅಭಿಪ್ರಾಯ‌ಪಟ್ಟರು.

ಕನ್ನಡ ಭಾರತಿಯ ನಿರ್ದೇಶಕ‌ರಾದ ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಮಾರು ಎರಡು ಸಾವಿರ ವರ್ಷಗಳಲ್ಲಿ ರಚನೆಯಾಗಿರುವ ಕನ್ನಡ ಸಾಹಿತ್ಯ‌ವನ್ನು ಹಲವು ದೃಷ್ಟಿಕೋನಗಳಿಂದ ಅವಲೋಕನ ಮಾಡುವ ಪ್ರಯತ್ನ‌ವನ್ನು ಸಂಶೋಧಕರು ಮಾಡಿದ್ದಾರೆ. ರಾಜ್ಯದ ಹಲವಾರು ಭಾಗಗಳಿಂದ ಸಂಶೋಧನಾರ್ಥಿಗಳು ಬಂದು ಈ ವಿಚಾರ ಸಂಕಿರಣದಲ್ಲಿ ತಮ್ಮ ಪ್ರಬಂಧ ಮಂಡಿಸಿದ್ದಾರೆ. 81 ಲೇಖನಗಳು ಶೋಧ ಸಂಭ್ರಮ ಕೃತಿಯಲ್ಲಿ ಪ್ರಕಟವಾಗಿವೆ ಎಂದರು.

ಮದ್ರಾಸು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ. ರಂಗಸ್ವಾಮಿ ಅವರು ಕೃತಿಯ ಕುರಿತು ಮಾತನಾಡಿದರು. ಪ್ರಕಾಶಕರಾದ ಸುನೀಲ್ ಕುಮಾರ್, ಸಹ್ಯಾದ್ರಿ ಕಾಲೇಜಿನ ಪ್ರಾಧ್ಯಾಪಕರುಗಳಾದ ಡಾ. ಎಸ್.ಎಂ. ಮುತ್ತಯ್ಯ, ಡಾ. ಹಾ.ಮಾ. ನಾಗಾರ್ಜುನ, ಡಾ. ಪ್ರಕಾಶ್ ಮರ್ಗನಳ್ಳಿ, ಡಾ. ಮೋಹನ್ ಚಂದ್ರಗುತ್ತಿ ಉಪಸ್ಥಿತರಿದ್ದರು. ವಿಭಾಗದ ಡಾ. ನವೀನ್ ಮಂಡಗದ್ದೆ ಸ್ವಾಗತಿಸಿದರು. ಡಾ. ರವಿನಾಯ್ಕ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...