ಶಿವಮೊಗ್ಗ | ಮನೆ ಹಿತ್ತಲಿನಲ್ಲಿ 5 ನಾಗರಹಾವಿನ ಮರಿಗಳ ಸಂರಕ್ಷಣೆ ಮಾಡಿದ ಸ್ನೇಕ್ ಕಿರಣ್

Date:

ಶಿವಮೊಗ್ಗ , ಮನೆಯೊಂದರ ಹಿತ್ತಲಿನಲ್ಲಿ ಕಾಣಿಸಿಕೊಂಡ 5 ನಾಗರಹಾವಿನ ಮರಿಗಳನ್ನು ಉರಗ ಸಂರಕ್ಷಕ ಸ್ನೇಕ್ ಕಿರಣ್ ಅವರು ರಕ್ಷಣೆ ಮಾಡಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ತೆವರೆಚಟ್ನಳ್ಳಿ ಗ್ರಾಮದಲ್ಲಿ ಜೂ. 29 ರಂದು ನಡೆದಿದೆ.

ಶರಣ್ ಎಂಬುವರ ಮನೆಯ ಹಿಂಭಾಗದ ಖಾಲಿ ಜಾಗದಲ್ಲಿ ಹಾವಿನ ಮರಿಗಳು ಕಾಣಿಸಿಕೊಂಡಿದ್ದವು. ತಕ್ಷಣವೇ ಅವರು ಸ್ನೇಕ್ ಕಿರಣ್ ಅವರಿಗೆ ಮಾಹಿತಿ ರವಾನಿಸಿದ್ದರು.ಸ್ಥಳಕ್ಕಾಗಮಿಸಿದ ಕಿರಣ್ ಅವರು ಪ್ಲಾಸ್ಟಿಕ್ ಟಾರ್ಪಲ್ ಕೆಳಭಾಗ, ಪೊದೆಗಳಲ್ಲಿ ಅಡಗಿದ್ದ 5 ನಾಗರಹಾವಿನ ಮರಿಗಳನ್ನು ರಕ್ಷಣೆ ಮಾಡಿದ್ದಾರೆ.

ಈ ವೇಳೆ ಕೆಲ ನಾಗರಹಾವಿನ ಮರಿಗಳು ತಪ್ಪಿಸಿಕೊಂಡಿವೆ.‘ಸುರಕ್ಷಿತವಾಗಿ ಹಾವಿನ ಮರಿಗಳನ್ನು ರಕ್ಷಿಸಲಾಗಿದೆ. ರಕ್ಷಣೆ ಮಾಡುವ ವೇಳೆ, ಕೆಲ ಹಾವಿನ ಮರಿಗಳು ಪೊದೆಗಳಲ್ಲಿ ತಪ್ಪಿಸಿಕೊಂಡಿವೆ. ಅವುಗಳು ಕಂಡ ವೇಳೆ ತಮಗೆ ಮಾಹಿತಿ ನೀಡುವಂತೆ ಕುಟುಂಬದವರಿಗೆ ತಿಳಿಸಲಾಗಿದೆ’ ಎಂದು ಸ್ನೇಕ್ ಕಿರಣ್ ಅವರು ಮಾಹಿತಿ ನೀಡಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...