ಶಿವಮೊಗ್ಗ | ರಾಜ್ಯ ಚೆಸ್ ಟೂರ್ನಿ ಉದ್ಘಾಟನೆ ; ಮನಸ್ಸನ್ನು ಕೇಂದ್ರೀಕರಿಸಲು ಚೆಸ್ ಆಟ ಅತ್ಯಗತ್ಯ : ಸಿಪಿಐ ಸಂತೋಷ್ ಕುಮಾರ್ ಡಿ ಕೆ

Date:

ಶಿವಮೊಗ್ಗ ಚೆಸ್‌ನಲ್ಲಿ ಒತ್ತಡದಲ್ಲಿ ಯೋಚನೆ ಮಾಡುವ ಶಕ್ತಿಯಿದೆ. ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಗುಣವಿದೆ. ಪ್ರತಿ ಹಂತದಲ್ಲೂ ಸಮಸ್ಯೆಯನ್ನೆದುರಿಸುವ ಸಂದರ್ಭವಿದೆ. ಇಂತಹ ಸಮಸ್ಯೆ ಮೂಲಕವೇ ಸಮರ್ಪಕ ಉತ್ತರ ಕಂಡುಕೊಳ್ಳುವ ಆಟ ಚೆಸ್ ಆಗಿದೆ ಎಂದು ಜೆಸಿಐ ಇಂಡಿಯಾದ ಝೋನ್-೨೪ರ ಅಧ್ಯಕ್ಷ ಗೌರೀಶ್ ಭಾರ್ಗವ್ ಹೇಳಿದರು.

ಅವರು ಶುಕ್ರವಾರ ನಗರದಲ್ಲಿ ಆರಂಭವಾದ ೧೯ರ ಒಳಗಿನವರ ರಾಜ್ಯಮಟ್ಟದ ಚೆಸ್ ಚಾಂಪಿಯನ್ ಶಿಪ್‌ಟೂರ್ನಿಯನ್ನು ಜ್ಯೋತಿ ಬೆಳಗಿ ಉದ್ಘಾಟಿಸಿ ಮಾತನಾಡಿದರು. ಚೆಸ್ ಮೂಲಕ ಸಮಾಜದಲ್ಲಿ ಉತ್ತಮ ನಾಗರಿಕನಾಗುವ ಗುಣವನ್ನು ಮೈಗೂಡಿಸಿಕೊಳ್ಳಬೇಕು. ಇದರಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಯಾವೆಲ್ಲ ಗುಣಗಳು ಬೇಕೋ ಅವೆಲ್ಲವೂ ಇವೆ. ಈ ಆಟದ ಮೂಲಕ ಹೆಸರುಗಳಿಸಿ ದೇಶವನ್ನು ಪ್ರತಿನಿಧಿಸುವಂತಾಗಬೇಕು ಎಂದರು.

ವಿದ್ಯಾರ್ಥಿ ದೆಸೆಯಿಂಸಲೇ ಉತ್ತಮ ಹವ್ಯಾಸದ ಆಟಗಳನ್ನು ರೂಢಿಸಿಕೊಂಡು ಸ್ಪರ್ಧಾ ಮನೋಭಾವದಿಂದ ಆಡುವುದು ಮುಖ್ಯ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿದ್ದ ವಿನೋಬನಗರ ಸಿಪಿಐ ಡಿ ಕೆ ಸಂತೋಷ್‌ಕುಮಾರ್, ಚೆಸ್ ಉತ್ತಮ ಹವ್ಯಾಸದ ಆಟ. ಮನಸ್ಸನ್ನು ಕೇಂದ್ರೀಕರಿಸಲು ಇದು ಅತ್ಯಗತ್ಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ರೀಡಾ ಮತ್ತು ಸ್ಪರ್ಧಾ ಮನೋಭಾವದಿಂದ ಆಟವನ್ನು ಆಡಿದರೆ ಯಶಸ್ಸು ಸಾಧ್ಯ. ಮಕ್ಕಳು ಬಾಲ್ಯದಿಂದಲೇ ಇಂತಹ ಆಟದ ಮೂಲಕ ತಮ್ಮ ಭವಿಷ್ಯವನ್ನು ಕಟ್ಟಿಕೊಳ್ಳಬೇಕೆಂದರು.

ವೇದಿಕೆಯಲ್ಲಿ ಜೆಸಿಐ ಝೋನ್-೨೪ರ ಸಂಭಾವ್ಯ ಉಪಾಧ್ಯಕ್ಷ ಪ್ರಮೋದ ಶಾಸ್ತ್ರಿ, ಚಾಣಕ್ಯ ಚೆಸ್ ಸ್ಕೂಲ್ ಮುಖ್ಯಸ್ಥ ವಿಲ್ಸನ್ ಅಂದ್ರಾದೆ, ಮುಖ್ಯ ತೀರ್ಪುಗಾರ ಪ್ರಾಣೇಶ್ ಯಾದವ್, ಶಿವಮೊಗ್ಗ ಚೆಸ್ ಅಸೋಸಿಯೇಶನ್ ಕಾರ್ಯದರ್ಶಿ ಸಚಿನ್, ಕುಂದಾಪುರದ ಕಾಶ್ವಿ ಚೆಸ್ ಸ್ಕೂಲ್‌ನ ನರೇಶ್, ಚಿರಂತನ್ ಜೆಸಿಐನ ಕಾರ್ಯದರ್ಶಿ ವೈಷ್ಣವಿ, ಚಾಣಕ್ಯ ಚೆಸ್‌ನ ಆಶಾ ಅಂದ್ರಾದೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...