ಶಿವಮೊಗ್ಗ | ಹೊಸನಗರ ತಹಶೀಲ್ದಾರ್ ಅಮಾನತಿಗೆ ತೀ.ನ. ಶ್ರೀನಿವಾಸ್ ಆಗ್ರಹ

Date:

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ವಸವೆ ಗ್ರಾಮದ ರೈತ ಶ್ರೀಧರ್ ಎನ್ನುವವರ ತೋಟವನ್ನು ಕಾನೂನುಬಾಹಿರವಾಗಿ ನಾಶಪಡಿಸಿದ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರನ್ನು ಅಮಾನತುಗೊಳಿಸಬೇಕು ಎಂದು ಮಲೆನಾಡು ರೈತ ಹೋರಾಟ ಸಮಿತಿಯ ಸಂಚಾಲಕ ತೀ.ನ. ಶ್ರೀನಿವಾಸ್ ಆಗ್ರಹಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಸವೆ ಗ್ರಾಮದ ಸ.ನಂ. ೧೭ರಲ್ಲಿ ಶ್ರೀಧರ್ ಎಂಬುವವರು ೫ ಎಕರೆ ಜಮೀನು ಮಂಜೂರಿಗೆ ಫಾರಂ ನಂ. ೫೩ರಲ್ಲಿ ಅರ್ಜಿ ಸಲ್ಲಿಸಿದ್ದರು. ಇದು ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದೆ.

ಹಾಗೆಯೇ ಫಾರಂ ನಂ. ೫೭ರಲ್ಲಿ ಅರ್ಜಿ ಸಲ್ಲಿಸಿದ್ದು, ಇದು ಹೊಸನಗರ ತಾಲೂಕು ಕಚೇರಿಯಲ್ಲಿ ಬಾಕಿ ಇದೆ. ಆದರೂ ಕೂಡ ಹೊಸನಗರ ತಹಶೀಲ್ದಾರ್ ಅವರು ಮೇ ೨೮ರಂದು ಬೆಳಗ್ಗೆ ೧೧ ಗಂಟೆಗೆ ಏಕಾಏಕಿ ಯಾವುದೇ ತಿಳಿವಳಿಕೆ ನೀಡದೇ ೭ ವರ್ಷದ ೧೬೦೦ ಅಡಕೆ ಗಿಡಗಳನ್ನು ನಾಶಪಡಿಸಿದ್ದಾರೆ. ಗೃಹೋಪಯೋಗಿ ವಸ್ತುಗಳನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಪೊಲೀಸರಿಗೂ ಕೂಡ ದೂರು ನೀಡಲಾಗಿದೆ ಎಂದರು.ಕೂಡಲೇ ತಹಶೀಲ್ದಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಕೂಡ ರೈತರ ಮೇಲಾಗಿರುವ ದೌರ್ಜನ್ಯವನ್ನು ಖಂಡಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಸಹ ಸೂಕ್ರ ಕ್ರಮ ಜರುಗಿಸಲು ಡಿಸಿಯವರಿಗೆ ಹೇಳಿದ್ದಾರೆ ಎಂದರು.

ರೈತ ಶ್ರೀಧರ್ ಮಾತನಾಡಿ, ನನಗೆ ತುಂಬಾ ಅನ್ಯಾಯವಾಗಿದೆ. ಬೆಳೆದು ನಿಂತ ತೋಟ ನಾಶಪಡಿಸಲಾಗಿದೆ. ಈ ಬಗ್ಗೆ ರೈತರು ಹೊಸನಗರ ತಾಲೂಕು ಕಚೇರಿ ಎದುರು ಅಮರಣಾಂತ ಉಪವಾಸ ಕೈಗೊಂಡಿದ್ದರು. ಅಲ್ಲಿ ಕೆಲವರು ಅಸ್ವಸ್ಥರಾಗಿದ್ದರೂ ಕೂಡ ಇಷ್ಟೆಲ್ಲಾ ಹೋರಾಟ ಮಾಡಿದ್ದರೂ ತೋಟ ನಾಶಪಡಿಸಿದ ಅಧಿಕಾರಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಒಂದು ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಡಿಸಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಸವೆ ಗ್ರಾಮದ ಪ್ರಮುಖರಾದ ಭಾಸ್ಕರ್, ವಿಠಲ್, ಜಯರಾಮ ಶೆಟ್ಟಿ, ವೀರಪ್ಪ, ರೇಣುಕೇಶ್, ರವಿ ಮಾಸ್ತಿಕಟ್ಟೆ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...