ಶಿವಮೊಗ್ಗ | ಜೆಪಿಎನ್ ಪ್ರೌಢ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ : ನಿವೃತ್ತ ಶಿಕ್ಷಕಿಗೆ ಸನ್ಮಾನ

Date:

ಶಿವಮೊಗ್ಗ ನಗರದ ಜೆಪಿಎನ್ ಪ್ರೌಢ ಶಾಲೆಯಲ್ಲಿ ನೆನ್ನೆ ದಿವಸ ಶಿಕ್ಷಕರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿನಿ ಹಾಗೂ ನಿವೃತ್ತ ಶಿಕ್ಷಕಿಯಾದ ಶ್ರೀಮತಿ ಸರೋಜಮ್ಮನವರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕೃಷ್ಣಮೂರ್ತಿ ಅವರು ಮಾತನಾಡಿ ರಾಷ್ಟ್ರೀಯ ಶಿಕ್ಷಣ ಸಮಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದು ನನ್ನ ಭಾಗ್ಯವಾಗಿದೆ ಎಂದರು.

ಹಿಂದಿ ಶಿಕ್ಷಕಿ ಯಮುನಾ ಮಾತನಾಡಿ ನಾನು ಓದುತ್ತಿದ್ದ ಸಂದರ್ಭದಲ್ಲಿ ಶಿಕ್ಷಕರು ಕಲಿಸಿ ಕೊಟ್ಟ ಶಿಕ್ಷಣದಿಂದ ನಾನು ಶಿಕ್ಷಕಿಯಾಗುವ ಭಾಗ್ಯ ದೊರೆಯಿತು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲೆಯ ಹಳೆ ವಿದ್ಯಾರ್ಥಿ ಹಾಗೂಸಮಾಜ ಸೇವಕ ಮಸ್ತಾನ್ ರವರು ಮಾತನಾಡಿ ಸಾವಿತ್ರಿ ಬಾಯಿ ಫುಲೆ ಅವರ ಜೀವನದ ಇತಿಹಾಸ ತಿಳಿದಿಕೊಳ್ಳಿ ಇದರಿಂದ ನಿಮ್ಮ ಮುಂದಿನ ವಿದ್ಯಾಭ್ಯಾಸ ಜೀವನಕ್ಕೆ ಅನುಕೂಲವಾಗಲಿದೆ ಎಂದರು.

ಶಿಕ್ಷಕರಿಗೆ ಹಾಗೂ ಪೋಷಕರಿಗೆ ಗೌರವ ನೀಡಿ ಹಾಗೂ ಒಳ್ಳೆಯ ಶಿಕ್ಷಣ ಹಾಗೂ ಜೀವನ ರೂಪಿಸಿಕೊಳ್ಳಿ ಎಂದು ಕಿವಿ ಮಾತು ಹೇಳಿದರು.

1002207191

ಕಾರ್ಯಕ್ರಮದ ಅತಿಥಿಯಾದ ನಿವೃತ್ತಿ ಶಿಕ್ಷಕಿ ಸರೋಜಮ್ಮ ಮಾತನಾಡಿ ಅವರ ಬಾಲ್ಯದ ದಿನಗಳನ್ನು ನೆನಪಿಸಿ ಮಾತನಾಡಿದರು. ನಾನು ಓದಿದ ಸಂದರ್ಭದಲ್ಲಿ ನನಗೆ ಶಿಕ್ಷಕರು ಕೊಟ್ಟ ಮಾರ್ಗದರ್ಶನ ಉನ್ನತ ಶಿಕ್ಷಣವೇ ನನ್ನ ಜೀವನವನ್ನು ಬದಲಾವಣೆ ಮಾಡಿ ನಾನು ಇಂದು ಶಿಕ್ಷಕಿ ಆಗಿ ನಿವೃತ್ತಿ ಹೊಂದಿದ್ದೇನೆ. ಬಾಳ ಕಷ್ಟದ ಸಂದರ್ಭದಲ್ಲಿ ನನ್ನನ್ನು ನನ್ನ ಅಕ್ಕ ಕೈ ಹಿಡಿದರು . ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಿ ನಿಮ್ಮ ಜೀವನದಲ್ಲಿ ಬದಲಾವಣೆ ಅತಿ ಮುಖ್ಯ ಎಂದರು.

ಶಾಲೆಯ ಮುಖ್ಯ ಶಿಕ್ಷಕರಾದ ಇಮ್ತಿಯಾಜ್ ಅಹ್ಮದ್ ಮಾತನಾಡಿ ಶಿಕ್ಷಕರ ದಿನಾಚರಣೆಯಂದು ನಮಗೆ ಉಡುಗೊರೆ ಬೇಡ, ನಾವು ನಿರೀಕ್ಷಿಸುವುದು ವಿದ್ಯಾರ್ಥಿಗಳೆ ಶಿಕ್ಷಣವನ್ನು ಪಡೆದುಕೊಳ್ಳಿ, ಒಳ್ಳೆ ಫಲಿತಾಂಶವನ್ನು ಕೊಡಿ ಅದೇ ನೀವು ನಮಗೆ ನೀಡುವ ಉಡುಗೊರೆ ಎಂದರು. ಕೆಲವು ದಿನಗಳಿಂದ ಹಳೆ ವಿದ್ಯಾರ್ಥಿ ಸಂಘವತಿಯಿಂದ ಹಲವಾರು ಸಾಕಾರಗಳನ್ನು ನಮಗೆ ನೀಡುತ್ತಿದ್ದಾರೆ ಸದಾ ಹೀಗಿದ್ದರೆ ಅದೇ ಸಂತೋಷದ ವಿಷಯ ಎಂದರು. ನಿಮ್ಮ ಸಹಕಾರ ಅತೀ ಮುಖ್ಯವೆಂದರು.

ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...