ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

Date:

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ ಶಬ್ದ ಮತ್ತೊಮ್ಮೆ ನಗರದಲ್ಲಿ ಸದ್ದು ಮಾಡುತ್ತಿದೆ.

ಕೆಲವು ತಿಂಗಳ ಹಿಂದೆ ಎಸ್ಪಿ ನೇತೃತ್ವದಲ್ಲಿ ಕರ್ಕಶ ಸೈಲೆಂಸರ್ ಅನ್ನು ಅಳವಡಿಸಿ ಓಡಿಸುತ್ತಿದ ಪುಂಡರಿಗೆ ಬೈಕ್ ಸೈಲೆಂಸರ್ ಪುಡಿ ಪುಡಿ ಮಾಡುವ ಮೂಲಕ ಪುಂಡರಿಗೆ ಎಚ್ಚರಿಕೆ ನೀಡಿತ್ತು.

ಈಗ ಮತ್ತೊಮ್ಮೆ ಟ್ರಾಫಿಕ್ ಪೊಲೀಸರು ಫೀಲ್ಡ್ ಗೆ ಇಳಿಯೋದು ಅನಿವಾರ್ಯವಾದಂತೆ ಕಾಣಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದಲ್ಲಿ ಹಲವು ಭಾಗ ಮತ್ತು ಕಾಲೇಜುಗಳ ಸುತ್ತಮುತ್ತಲಿನಲ್ಲಿ ಸಹಜವಾಗಿ ಕರ್ಕಶ ಸೈಲೆಂಸರ್ ಶಬ್ದ ಬೈಕ್ ಚಾಲನೆ ಕಂಡುಬರುತ್ತಿದೆ.ಅತೀ ಹೆಚ್ಚಾಗಿ ವಿದ್ಯಾನಗರ ಸಹ್ಯಾದ್ರಿ ಕಾಲೇಜು, ಸಂತೆ ಕಡೂರು, ವಿಮಾನ ನಿಲ್ದಾಣ ರಸ್ತೆಯಲ್ಲಿ ಹೆಚ್ಚಾಗಿ ಕಾಣಸಿಗುತ್ತಿದೆ.

ಈ ಪುಂಡರು ವಿಪರೀತ ಕರ್ಕಶ ಶಬ್ದ ಜೊತೆ ಜೊತೆಗೆ ಅತೀ ವೇಗ ಮತ್ತು ಅಪಾಯಕಾರಿ ಹೆಲ್ಮೆಟ್ ಧರಿಸದೆ ಚಾಲನೆ ಮಾಡುತ್ತಿದ್ದಾರೆ, ಹಾಗೂ ಕೆಲವರು ಆರ್ ಎಕ್ಸ್ ಬೈಕ್ ನಲ್ಲಿ ನಂಬರ್ ಪ್ಲೇಟ್ ಗೆ ಬಿಳಿ ಬಣ್ಣ ಬಳಿಯುವ ಮೂಲಕ ನಂಬರ್ ಸಹ ಸಿಗಬಾರದು ಎಂಬ ಬುದ್ದಿ ಓಡಿಸಿ,ಟ್ರಾಫಿಕ್ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನುಸುವ ಭಾವನೆಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ.

ಈ ಸಂಬಂಧ ಶಿವಮೊಗ್ಗ ನಗರ ಪ್ರಜ್ಞಾವಂತ ವಾಹನ ಸವಾರರಿಗೆ, ವಾಹನ ಚಲಾಯಿಸುವುದಕ್ಕೆ ಸಾಕಷ್ಟು ಕಿರಿ ಕಿರಿ ಹಾಗೂ ತೊಂದರೆ ಉಂಟಾಗಿರುತ್ತೆ. ಇವರುಗಳ ಪುಂಡಾಟಿಕೆಗೆ ಬೇರೆ ವಾಹನ ಸವಾರರ ಜೀವಕ್ಕೆ ತೊಂದರೆ ಆಗುವ ಮುನ್ನ ಟ್ರಾಫಿಕ್ ಪೊಲೀಸ್ ಎಚ್ಚತ್ತುಕೊಳ್ಳಬೇಕು ಎಂಬುದು ನಗರದ ವಾಹನ ಸವಾರರ ಆಗ್ರಹವಾಗಿದೆ.

ನಗರದಲ್ಲಿ ಟ್ರಾಫಿಕ್ ನಿಯಮ ಪಾಲಿಸುವಂತೆ, ಸುಲಲಿತ ಸಂಚಾರ ಮಾಡಲು ಸಾರ್ವಜನಿಕರು, ವಾಹನ ಸವಾರರಿಗೆ ಅನುಕೂಕವಾಗಲು ದಿನ ನಿತ್ಯ ಸಾಕಷ್ಟು ಪರಿಶ್ರಮ ನಡೆಸುತ್ತಿರುವ ಪೊಲೀಸ್ ಇಲಾಖೆ ಭಾರಿ ದಂಡ ವಿಧಿಸಿದರೆ ಸಂಚಾರ ನಿಯಮ ಪಾಲಿಸುತ್ತಾರೆ ಎಂದು ಭವಿಸಿದ್ದಾರೇನೋ ಈಗ ಅದು ಕೂಡ ಲೆಕ್ಕಕ್ಕೆ ಇಲ್ಲದಂತೆ ವಾಹನ ಸವಾರರು ವರ್ತಿಸುತ್ತಿರುವುದು ಕಂಡು ಬರುತ್ತಿದೆ.

ಸಾಮಾಜಿಕವಾಗಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಟ್ರಾಫಿಕ್ ಪೊಲೀಸ್ ದಿನ ನಿತ್ಯ ಎಷ್ಟೇ ಅರಿವು ನೀಡಿದರು ಸಹ ಇದು ಪ್ರಯೋಜನವಾದಂತೆ ಕಾಣಿಸುತ್ತಿಲ್ಲ. ಹಾಗೆಯೇ ಪೊಲೀಸ್ ಇಲಾಖೆ ಫೀಲ್ಡ್ ಗೆ ಇಳಿದು ಸಂಚಾರಿ ನಿಯಮದ ಅರಿವು ಮತ್ತೊಮ್ಮೆ ಮೂಡಿಸುವ ಅನಿವಾರ್ಯತೆ ಎದ್ದು ಕಾಣುತ್ತಿದೆ.

ಈ ಅರಿವಿನ ಕಾರ್ಯಕ್ರಮ ತಾತ್ಕಾಲಿಕವಾಗಿರಬಾರದು ನಿರಂತರವಾಗಿ ನಡೆಯುತ್ತಿರ ಬೇಕು ಎಂಬುದು ಜನಸಾಮಾನ್ಯರ ಆಗ್ರಹವಾಗಿದೆ.

ಇಷ್ಟೇ ಅಲ್ಲದೆ ನಗರದ ಸಿಗ್ನಲ್ ಲೈಟ್ ಗಳಲ್ಲಿ ಕ್ಯಾಮೆರಾ ಇರುತ್ತೆ ಎಂಬ ಕಾರಣಕ್ಕೆ ಹೆಲ್ಮೆಟ್ ಧರಿಸುತ್ತಿರುವುದು ಅಷ್ಟೇ. ಉಳಿದಂತೆ ನಗರದ ಬಹುಭಾಗಗಳಲ್ಲಿ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸುತ್ತಿಲ್ಲ, ಮೊಬೈಲ್ ಬಳಸಿ ಚಾಲನೆ ಮಾಡುವುದು, ಥ್ರಿಬಲ್ ಚಾಲನೆ, ಒನ್ ವೇ ಲಿ ಸಂಚಾರ, ಹಾಗೂ ಸಂಚಾರಿ ನಿಯಮಗಳನ್ನೆಲ್ಲ ಗಾಳಿಗೆ ತೂರುವ ಮೂಲಕ ಟ್ರಾಫಿಕ್ ಪೊಲೀಸ್ ಇಲಾಖೆಗು ನಮಗೆ ಸಂಬಂಧವೇ ಇಲ್ಲದಂತೆ ಬಹಳಷ್ಟು ವಾಹನ ಸವಾರರು ವಾಹನ ಚಲಾಯಿಸುತ್ತಿರುವುದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿರತ್ತೆ ಎಂಬುದು ಜನಸಾಮಾನ್ಯರ ಮಾತಾಗಿದೆ.

ಕೆಲವು ತಿಂಗಳ ಹಿಂದೆ ಟ್ರಾಫಿಕ್ ಪೊಲೀಸ್ ಇಲಾಖೆ ನಗರದಲ್ಲಿ ಸಂಚಾರಿ ನಿಯಮ ಪಾಲಿಸಲು ತೋರಿಸಿದ್ದ ಆಸಕ್ತಿ, ಈಗ ಕಡಿಮೆ ಆದಂತೆ ಕಾಣಿಸುತ್ತಿದೆ.

ಇದರ ಜೊತೆಗೆ ಮುಖ್ಯವಾಗಿ ಹೊಳೆ ಸ್ಟಾಪ್, ಬೆಕ್ಕಿನ ಕಲ್ಮಠ, ಎದುರಿನ ಆಸುಪಾಸಿನಲ್ಲಿ ಬೆಳಿಗ್ಗೆ ಸಮಯದಲ್ಲಿ ಕೋಟೆ ರಸ್ತೆ ಹಾಗೂ ಓಲ್ಡ್ ಬಾರ್ ಲೈನ್ ರಸ್ತೆಗೆ ಹೋಗುವವರು ಹಾಗೂ ಆ ರಸ್ತೆಯಿಂದ ಬರುವ ವಾಹನ ಸವಾರರಿಗೆ, ಕೂಲಿ ಕಾರ್ಮಿಕರು ರಸ್ತೆಯಲ್ಲಿ ಅಡ್ದಲ್ಲಾಗಿ ನಿಲ್ಲುತ್ತಿದ್ದೂ, ಇದರಿಂದ ವಾಹನ ಸವಾರರಿಗೆ ವಿಪರೀತ ಸಮಸ್ಯೆ ಎದುರಾಗುತ್ತಿದೆ, ಹೀಗಾಗಿ ಈ ಸ್ಥಳದಲ್ಲಿ ವಾಹನ ಸವಾರರಿಗೆ ಅನುಕೂಲ ಮಾಡಿಕೊಡಲು ತಿಳಿಸಿ ಎಂದು ಹಲವು ವಾಹನ ಸವಾರರು ನಮ್ಮ ಈದಿನ ಡಾಟ್ ಕಾಮ್ ಗೆ ಮಾಹಿತಿ ನೀಡಿರುತ್ತಾರೆ. ಈ ಸಮಸ್ಯೆ ಕೂಡ ಶೀಘ್ರದಲ್ಲಿ ಬಗೆಹರಿಸಿ ಕೊಡಬೇಕಾಗಿದೆ.

ಇದೆಲ್ಲರ ಜೊತೆಗೆ ಕೆಲವು ತಿಂಗಳು ಹಿಂದೆ ಘರ್ಜಿಸುವ ಮೂಲಕ ಸೈಲೆಂಸರ್ ಗಳು ಪುಡಿ ಪುಡಿ ಆಗಿದ್ದವು ಮತ್ತದೇ ಮಾಡುತ್ತಾರ, ಹಾಗೂ ಹೆಲ್ಮೆಟ್ ಇಲ್ಲದೆ ವಾಹನ ಚಾಲನೆ, ಮೊಬೈಲ್ ಹಿಡಿದು ಚಾಲನೆ ಇದುಕ್ಕೆಲ್ಲ ಶಾಶ್ವತ ಕಡಿವಾಣ ಹಾಕಲಿದ್ದಾರ ಟ್ರಾಫಿಕ್ ಪೊಲೀಸ್ ಎಂಬ ಪ್ರಶ್ನೆಗೆ, ಉತ್ತರದ ನಿರೀಕ್ಷೆಯಲ್ಲಿ ಪ್ರಜ್ಞಾವಂತ ನಾಗರಿಕರು?!

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...