ಶಿವಮೊಗ್ಗ | ಸಂವಿಧಾನದ ಮೇಲೆ ನಿಜವಾಗಿ ದಾಳಿ ಮಾಡಿದವರು ಕಾಂಗ್ರೆಸಿಗರು : ಕೆ ಎಸ್ ಈಶ್ವರಪ್ಪ

Date:

ಶಿವಮೊಗ್ಗ,ಆರ್ ಎಸ್ ಎಸ್ ಸಹಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಇತ್ತೀಚೆಗೆ ಜಾತ್ಯತೀತ ಮತ್ತು ಸಮಾಜವಾದ ಎಂಬ ಶಬ್ದವನ್ನು ಸಂವಿಧಾನ ಪೀಠಿಕೆಯಿಂದ ತೆಗೆಯಬೇಕೆಂದು ಹೇಳಿರುವುದರ ಬಗ್ಗೆ ಕಾಂಗ್ರೆಸ್ ನಾಯಕರು ಮನಸೋ ಇಚ್ಛೆ ಹೇಳೆ ನೀಡುತ್ತಿರುವುದು ಖಂಡನೀಯ ಎಂದಿರುವ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ, ಇಂದಿರಾ ಗಾಂಧಿ ಸಂವಿಧಾನದ ಮೂಲ ಪೀಠಿಕೆ ಯನ್ನೇ ಬದಲಾಯಿಸಿದ್ದು ಸರಿಯೇ ಎಂದು ಪ್ರಶ್ನಿಸಿದ್ದಾರೆ?

ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಪಂಚದ ಯಾವುದೇ ದೇಶವು ಇದುವರೆಗೂ ತನ್ನ ಸಂವಿಧಾನದ ಪೀಠಿಕೆಯನ್ನು ಬದಲಾಯಿಸಿಲ್ಲ, ಆದರೆ ಭಾರತದಲ್ಲಿ ತಮ್ಮಿಚ್ಛಗನುಗುಣವಾಗಿ ಸಂವಿಧಾನದ ಪೀಠಿಕೆಯನ್ನು ಬದಲಾಯಿಸಲಾಗಿದೆ. ದೇಶದ ಮೇಲೆ ಕರಾಳ ತುರ್ತುಪರಿಸ್ಥಿತಿಯನ್ನು ಹೇರಿದ ಇಂದಿರಾ ಗಾಂಧಿಯವರು ತಮ್ಮ ಸರ್ವಾಧಿಕಾರಿ ಮನಸ್ಥಿತಿಯಲ್ಲಿ 1976ರ ಡಿಸೆಂಬರ್ 18ರಂದು ಸಂವಿಧಾನದ ಮೂಲ ಪೀಠಿಕೆಯನ್ನೇ ಬದಲಾಯಿಸಿ ಜಾತ್ಯಾತೀತ ಸಮಾಜವಾದಿ ಎಂಬ ಎರಡು ಪದಗಳನ್ನು ಸೇರಿಸಿದರು.

ಈ ವಿಷಯವಾಗಿ ಸಂಸತ್ತಿನಲ್ಲಿ ಯಾವುದೇ ಚರ್ಚೆಯೂ ಆಗಲಿಲ್ಲ ಎಂದರು. 1973ರಲ್ಲಿ ಕೇರಳ ಹೈಕೋರ್ಟ್ ಹಾಗು ಸುಪ್ರೀಮ್ ಕೋರ್ಟ್ ನೀಡಿದ ತೀರ್ಪಿನಲ್ಲಿ ಸಂವಿಧಾನದ ಮೂಲಸ್ವರೂಪವನ್ನು ಬದಲಾಯಿಸಲು ಸಾಧ್ಯವಿಲ್ಲ ಹಾಗೂ ಮೂಲ ಆಶಯಗಳನ್ನು ಬದಲಾಯಿಸಲು ಹೋಗುವಂತಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರೂ ಸಹಾ ಇಂದಿರಾಜಿಯವರು ಸಂವಿಧಾನದ ಮೂಲ ಪೀಠಿಕೆಯನ್ನೇ ಬದಲಾಯಿಸಿದ್ದು ನ್ಯಾಯಾಂಗದ ಮೇಲಿನ ದಾಳಿ ಹಾಗು ಸಂವಿಧಾನ ವಿರೋಧಿ ಧೋರಣೆಯಲ್ಲವೇ ಎಂದ ಅವರು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂವಿಧಾನದ ಪ್ರತಿಯನ್ನು ಕೈಯಲ್ಲೇ ಹಿಡಿದುಕೊಂಡಿರುವ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ಹಾಗು ಯಾವಾಗಲೂ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಜಪಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇತಿಹಾಸದ ಅರಿವಿಲ್ಲ.

ಹೊಸಬಾಳೆಯವರ ಹೇಳಿಕೆಯನ್ನು ಸಂವಿಧಾನದ ಮೇಲಿನ ದಾಳಿ ಎಂದು ಹೇಳುತ್ತಿರುವ ಇವರು ನಿಜವಾಗಿ ಸಂವಿಧಾನದ ಮೇಲೆ ದಾಳಿ ಮಾಡಿದವರು ಕಾಂಗ್ರೆಸಿಗರೇ ಎಂಬ ಅರಿವಿಲ್ಲವೇ? ಎಂದು ಪ್ರಶ್ನಿಸಿದರು.

ಸಂವಿಧಾನದಲ್ಲಿ ಜಾತ್ಯತೀತ, ಸಮಾಜವಾದಿ ಪದಗಳನ್ನು ಸೇರಿಸುವ ವಿಷಯವಾಗಿ ಸಂವಿಧಾನ ರಚನಾ ಸಭೆಯಲ್ಲಿ ಈ ವಿಚಾರ ಚರ್ಚೆಗೆ ಬಂದಾಗ ಸ್ವತಃ ಅಂಬೇಡ್ಕರ್ ವಿರೋಧಿಸಿದ್ದರು. ಹಾಗೂ 1948ರಲ್ಲಿ ಈ ವಿಷಯದ ಕುರಿತಾಗಿ ನಡೆದ ಸಭೆಯಲ್ಲಿ ಅಂದಿನ ಪ್ರಧಾನಿ ನೆಹರು ಹಾಗು ಅಂಬೇಡ್ಕರ್ ಇಬ್ಬರೂ ಈ ಪದಗಳನ್ನು ಸೇರಿಸುವುದು ಬೇಡ ಎಂಬ ನಿಲುವನ್ನು ತಾಳಿದ್ದರು ಎಂಬುದು ವಿಶೇಷ.

ಅಂಬೇಡ್ಕರ್ ಆಶಯಕ್ಕೆ ವಿರುದ್ಧವಾಗಿ ಸಂವಿಧಾನದ ಆತ್ಮವಾಗಿರುವ ಪೀಠಿಕೆಯನ್ನು ಬದಲಾಯಿಸಿದ್ದು ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನ, ಎಂದರು.

ದೇಶದ ಮೇಲೆ ತುರ್ತುಪರಿಸ್ಥಿತಿಯನ್ನು ಹೇರಿ ಕಾರ್ಯಾಂಗ ನ್ಯಾಯಾಂಗ ಪತ್ರಿಕಾರಂಗದ ಚಟುವಟಿಕೆಗಳನ್ನು ತನ್ನ ನಿಯಂತ್ರಣದಲ್ಲಿ ಇರುವಂತೆ ನೋಡಿಕೊಂಡ ಇಂದಿರಾ ಗಾಂಧಿಯವರು ಸಂವಿಧಾನದ ಮೂಲ ಸ್ವರೂಪವನ್ನೇ ಬದಲಾಯಿಸಿದ್ದು ಈಗಲಾದರೂ ಚರ್ಚೆಯಾಗಬೇಕು ಹಾಗೂ ಅಂಬೇಡ್ಕರ್ ಅವರ ಮೂಲ ಸಂವಿಧಾನಕ್ಕೆ ಧಕ್ಕೆಯಾಗದಂತೆ ಜಾತ್ಯಾತೀತ ಸಮಾಜವಾದಿ ಪದಗಳ ಬಗ್ಗೆ ಸಮಗ್ರವಾದ ಚರ್ಚೆ ನಡೆದು ಅಭಿಪ್ರಾಯ ಸಂಗ್ರಹವಾಗಿ ಪ್ರಜಾಪ್ರಭುತ್ವಕ್ಕೆ ಅನುಗುಣವಾದ ತೀರ್ಮಾನಗಳು ಈಗಲಾದರೂ ಆಗಬೇಕು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...