ಶಿವಮೊಗ್ಗ | ಕಾಡಾನೆ ನಡೆದದ್ದೆ ದಾರಿ ; ಜನರಲ್ಲಿ ಹೆಚ್ಚಿದ ಆತಂಕ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆರಗದ ಕಲ್ಲುಂಡಿ ಸಮೀಪ ಕಾಣಿಸಿಕೊಂಡಿದೆ. ಬೆಳಗಿನ ಜಾವ ಓಡಾಟ ಆರಂಭಿಸಿರುವ ಆನೆ ಸುಮಾರು 50 ಕಿ.ಮೀ. ಕ್ರಮಿಸಿದೆ. ಬೆಳಗ್ಗೆ ವಾಸ್ತವ್ಯ ಹೂಡಲು ಸರಿಯಾದ ಜಾಗ ಹುಡುಕುತ್ತಿದ್ದು ಎಲ್ಲಿ ನಿದ್ರಿಸಲಿದೆ ಎಂಬುದು ಪ್ರಶ್ನೆಯಾಗಿದೆ?

ಆನೆಗೆ ರೇಡಿಯೋ ಕಾಲರ್ ಅಳವಡಿಸಿದ್ದು ಆನೆ ನಡೆದ ಎಲ್ಲಿ ಓಡಾಡುತ್ತಿದೆ. ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿಗಳ ದಂಡೆ ಹರಿದಾಡುತ್ತಿದೆ. ಪುಂಡಾಟ ನಡೆಸಿದ್ದ ಆನೆಗಳಿಗೆ ಈ ರೀತಿ ರೇಡಿಯೋ ಕಾಲರ್ ಅಳವಿಡಿಸಲಾಗಿರುತ್ತದೆ. ಇದು ವಿರುದ್ಧ ದಿಕ್ಕಿಗೆ ಹೋಗುತ್ತಿರುವುದರಿಂದ ಬಹುತೇಕ ದಾರಿ ತಪ್ಪಿದ ಆನೆ ಆಗಿದೆ ಎನ್ನಲಾಗಿದೆ. ಆದರೆ ರೇಡಿಯೋ ಕಾಲರ್ ಅಪ್ಲೇಟ್ ವಿಚಾರದಲ್ಲಿ ತೀರಾ ನಿಧಾನವಾಗಿದ್ದು ಮೂರು, ನಾಲ್ಕು ಗಂಟೆಗಳಿಗೊಮ್ಮೆ ಮಾತ್ರ ಅಪ್ಲೇಟ್ ಆಗುತ್ತಿರುವುದು ತಲೆಬಿಸಿಗೆ ಕಾರಣವಾಗುತ್ತಿದೆ ಎಂಬ ಚರ್ಚೆಗಳು ಸಾರ್ವಜನಿಕವಾಗಿ ಕೇಳುಬರುತ್ತಿರುವ ವಿಷಯ.

ತಪ್ಪಿಸಿಕೊಂಡಿರುವ ಸುಮಾರು 15 ವರ್ಷದ ಈ ಗಂಡಾನೆ ಸಕಲೇಶಪುರದಲ್ಲಿ ಈಚೆಗೆ ಕಂಡುಬಂದಿತ್ತು. ಅಲ್ಲದೇ ಆನೆಯ ಕಾಲ್ತುಳಿತಕ್ಕೂ ಜನ ಸತ್ತಿದ್ದಾರೆಂಬ ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ಮೂಡಿಗೆರೆ, ಸಕಲೇಶಪುರ ಭಾಗದಲ್ಲಿ ಹಿಡಿದ ಪುಂಡಾನೆಗಳನ ಭದ್ರಾ ಅಭಯಾರಣ್ಯಕ್ಕೆ ತಂದು ಬಿಡಲಾಗುತ್ತಿದ್ದು ಅದನ್ನು ಸರಿಯಾಗಿ ವನ್ಯಜೀವಿ ವಿಭಾಗದ ಅಧಿಕಾರಿಗಳು ಪಾಲನೆ ಮಾಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಪುಂಡಾಟದ ಆನೆ ಊರಿಗೆ ನುಗ್ಗುತ್ತಿದ್ದರು ವನ್ಯಜೀವಿ ಅರಣ್ಯ ಸಿಬ್ಬಂದಿಗಳು ಹಿಮ್ಮೆಟ್ಟಿಸುವಲ್ಲಿ ವಿಫಲ. ಜೊತೆಗೆ ಉಡಾಫೆ ಧೋರಣೆ ಮುಂದುವರೆಸಿದ್ದಾರೆಂದು ಕೇಳಿ ಬರುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ವಿಡಿಯೋ ಕೃಪೆ ; ಶಿವಮೊಗ್ಗ ಸುದ್ದಿ ನ್ಯೂಸ್

ಆನೆಯು ಮುತ್ತಿನಕೊಪ್ಪದ ಮೂಲಕ ತುಂಗಾ ನದಿ ದಾಟಿ ಮುಡುಬ ಪೆಟ್ರೋಲ್ ಬಂಕ್, ಉಳ್ಳೂರು ಘಟ್ಟ, ಮಣಿವೆ, ಉಟ್ಟೂರು, ಕುಚ್ಚಲು, ಬಾಳೇಗುಡ್ಡ ಕಾಡಿನಲ್ಲಿ ನಿದ್ರೆ, ಹಿರೇಬೈಲು, ಸೀಕೆ, ಕಾನಳ್ಳಿ, ದಾನಸಾಲೆ, ಹೊಸಬೀಡು, ಏಳುಮನೆ ಮಾರ್ಗ, ಕೋಣಂದೂರು, ಅರಳಸುರಳಿ, ನೊಣಬೂರು, ಗುಡ್ಡಕೊಪ್ಪ, ಕಲ್ಲುಂಡಿ, ಪಟಮಕ್ಕಿ.ಈಗ ಭದ್ರ ಅಭಯಾರಣ್ಯ ವ್ಯಾಪ್ತಿಯಿಂದ ತಪ್ಪಿಸಿಕೊಂಡ ಸುಮಾರು 15 ವರ್ಷದ ಈ ಗಂಡಾನೆ ಸಕಲೇಶಪುರದಲ್ಲಿ ಈಚೆಗೆ ಕಂಡುಬಂದಿತ್ತು.

ಸಕಲೇಶಪುರದಿಂದ ಭದ್ರಾ ಅಭಯಾರಣ್ಯಕ್ಕೆ ಆನೆ ತಂದು ಬಿಟ್ಟಿದ್ದು ಅಲ್ಲಿನ ಕಾಡಾನೆ ಹಿಂಡಿನೊಂದಿಗೆ ಆನೆ ಸೇರಿಕೊಳ್ಳಬೇಕು.ಅದು ಅಷ್ಟು ಸುಲಭದ ವಿಚಾರವಲ್ಲ. ಜೊತೆಗೆ ಮರಿಯಾನೆಯಾದ್ದರಿಂದ ದೊಡ್ಡ ಆನೆಗಳು ಕಾಳಗಕ್ಕೆ ಆಹ್ವಾನ ಮಾಡುತ್ತವೆ. ಒಂದುವೇಳೆ ಸೋತರೆ ಹಿಂಡಿನಿಂದ ಹೊರದಬ್ಬುತ್ತವೆ. ಬಲಿಷ್ಟ ಆನೆಗಳ ಜೊತೆಗೆ ಕಾಳಗ ಮಾಡಲು ಹೆದರಿದ ಗಂಡಾನೆ ಭದ್ರಾ ಅಭಯಾರಣ್ಯ ವ್ಯಾಪ್ತಿಯಿಂದ ತಪ್ಪಿಸಿಕೊಂಡು ದಾರಿ ತಪ್ಪಿದೆ.

ತನ್ನ ಹಿಂದಿನ ವಾಸಸ್ಥಳಗಳನ್ನು ಹುಡುಕುವುದಕ್ಕೆ ಮುಂದಾಗಿದೆ. ಭದ್ರಾದಿಂದ ಸಕಲೇಶಪುರ ಓಡಾಡಲು ಈಗಾಗಲೇ ಇತರೆ ಆನೆಗಳು ನಡೆದ ದಾರಿಗಳು ಸಿಕ್ಕರೆ ಹೋಗಲು ಸಲೀಸಾಗುತ್ತದೆ.

ಆದರೆ ಈ ಪ್ರಕರಣದಲ್ಲಿ ಹಾಗಾಗಿಲ್ಲ. ಆನೆ ಹೊಸ ದಾರಿ ಮಾಡುತ್ತಿದೆ.ಹಾಗಾಗಿಯೇ ತೀರ್ಥಹಳ್ಳಿ ಪ್ರವೇಶಿಸಿರುವ ಆನೆ ತೀರ್ಥಹಳ್ಳಿ ತಾಲೂಕಿನ ಆರಗಕ್ಕೆ ಬಂದಿದೆ. ಅಲ್ಲಿಂದ ಕೊಂಡೂರು, ಸಾಲೂರು, ಕವಲೇದುರ್ಗಾ, ಯಡೂರು, ಮಾಸ್ತಿಕಟ್ಟೆ ಮೂಲಕ ವರಾಹಿ ಹಿನ್ನೀರು ತಲುಪುವ ಪ್ರಯತ್ನ ನಡೆಸಬೇಕು.

ಹೀಗೆ ಹೋದ ಆನೆ ತೀರ್ಥಹಳ್ಳಿಯ ಹುರುಳಿ, ಗಾರ್ಡರಗದ್ದೆ ಕೊರನಕೋಟೆ, ನಾಲೂರು, ಇಳಿಮನೆ, ಬೋಳುಗುಡ್ಡ ಮಾರ್ಗವಾಗಿ ಆಗುಂಬೆ ಪ್ರವೇಶಿಸಬೇಕು. ನಂತರ ಸಕಲೇಶಪುರದಿಂದ ವರ್ಷ ಬರುವ ಒಂಟಿ ಕಾಡಾನೆ ಕುದುರೆಮುಖ ಮೂಲಕ ಸಕಲೇಶಪುರ ತಲುಪಬೇಕಿದೆ.

ಇದಕ್ಕೆ ಕನಿಷ್ಠ 15 ದಿನ ಬೇಕಿದೆ. ಅರಣ್ಯ ಇಲಾಖೆ ಇಷ್ಟೊಂದು ರಿಸ್ಕ್ ತೆಗೆದುಕೊಳ್ಳುತ್ತಾ ಎಂಬುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ? ದೇವಂಗಿ ಕಾಡಿನಲ್ಲಿ ಕಳೆದ ವರ್ಷ ಮರಿಯಾನೆ ಹಿಡಿದು ನಾಗರಹೊಳೆ ವನ್ಯಜೀವಿ ವಿಭಾಗಕ್ಕೆ ಬಿಡಲಾಗಿತ್ತು. ಅದೇ ರೀತಿಯಲ್ಲಿಯೇ ಈ ಆನೆಯನ್ನು ಸಕಲೇಶಪುರದಿಂದ ಇಲ್ಲಿಗೆ ತರಲಾಗಿದೆ. ಆದರೆ ಆನೆಯ ಬಗ್ಗೆ ಭದ್ರಾ ಅಭಯಾರಣ್ಯ ವಿಭಾಗ ತೆಗೆದುಕೊಂಡ ನಿರ್ಲಕ್ಷ ಧೋರಣೆಯಿಂದಾಗಿ ಆನೆ ಪುನಃ ನಗರ ಪ್ರದೇಶಕ್ಕೆ ನುಗ್ಗುತ್ತಿದೆ. ಅಲ್ಲದೇ ಈಗಾಗಲೇ ಡಾಟ್ ಆಗಿರುವ ಆನೆಗೆ ಪದೇ ಪದೇ ಮದ್ದು ಹೊಡೆಯುವುದು ಕೂಡ ಆನೆಯ ಜೀವಕ್ಕೆ ಅಪಾಯವಾಗಿದೆ. ಇವೆಲ್ಲವನ್ನು ಮುಂದಿಟ್ಟುಕೊಂಡು ಆನೆಯನ್ನು ಹಿಮ್ಮೆಟ್ಟಿಸುವ ಪ್ರಯತ್ನ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...