ಶಿವಮೊಗ್ಗ | ಬಡ ಪ್ರತಿಭಾವಂತ ಮಕ್ಕಳಿಗೆ ವಿದ್ಯಾನಿಧಿ ಯೋಜನೆಗೆ ಚಾಲನೆ ನೀಡಿದ : ಶಾಸಕ ಎಸ್ ಎನ್ ಚನ್ನಬಸಪ್ಪ

Date:

ಶಿವಮೊಗ್ಗ,ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಬೆಂಬಲ ನೀಡಲು ವಿದ್ಯಾನಿಧಿ ಯೋಜನೆಗೆ ಚಾಲನೆ ಕೊಡಲಾಗಿದೆ ಎಂದು ಶಾಸಕ ಎಸ್ ಎನ್ ಚನ್ನಬಸಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಈ ಮಹತ್ತರ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ, ತನ್ನ ನೇತೃತ್ವದ ಅನವರತ ತಂಡವು “ವಿವೇಕ ವಿದ್ಯಾ ನಿಧಿ’ ಎಂಬ ಕಾರ್ಯಕ್ರಮವನ್ನು ರೂಪಿಸಿದೆ. ಇಂದಿನ ಯುವ ಪೀಳಿಗೆಯು ಯಾವುದೇ ಕಾರಣಕ್ಕೂ ವಿದ್ಯಾಭ್ಯಾಸದ ಕೊರತೆಯಿಂದ ಶೈಕ್ಷಣಿಕವಾಗಿ ಹಿಂದುಳಿಯಬಾರದು ಎಂಬುದು ನಮ್ಮ ಸದುದ್ದೇಶ ಎಂದರು.

ನಗರದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ಕೈಲಾದ ಕಿರು ಸಹಾಯವನ್ನು ನೀಡುವುದು ಇದರ ಉದ್ದೇಶವಾಗಿದೆ.ಈ ಕಾರ್ಯಕ್ರಮದಡಿಯಲ್ಲಿ, ಪ್ರಸಕ್ತ ಸಾಲಿನಲ್ಲಿ ಓದುತ್ತಿರುವಂತಹ SSLC ಮತ್ತು ದ್ವಿತೀಯ PUC ವಿದ್ಯಾರ್ಥಿಗಳು ಕಳೆದ ಸಾಲಿನಲ್ಲಿ ಶೇಕಡ 50% ರಿಂದ 75% ವರೆಗೆ ಅಂಕಗಳನ್ನು ಗಳಿಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನಲ್ಲಿ ಇನ್ನು ಹೆಚ್ಚು ಅಂಕ ಪಡೆಯಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅವರ ವಿದ್ಯಾಭ್ಯಾಸಕ್ಕೆ ಸಹಕಾರಿಯಾಗುವಂತೆ ಆರ್ಥಿಕ ನೆರವು ನೀಡಲು ಚಿಂತಿಸಿದ್ದು, ಸಮಾಜದಲ್ಲಿನ ಅನೇಕ ಕೊಡುಗೈ ದಾನಿಗಳನ್ನು ಈ ಶ್ರೇಷ್ಠ ಕಾರ್ಯದಲ್ಲಿ ಜೋಡಿಸಿಕೊಂಡು ವಿದ್ಯಾರ್ಥಿಯ ಭವಿಷ್ಯ ರೂಪಿಸುವಲ್ಲಿ ಸಮಾಜದ ಪಾತ್ರವನ್ನು ನೆನಪಿಸುವುದರ ಜೊತೆಗೆ ಈ ವಿದ್ಯಾನಿಧಿಯು ಅವರ ಉನ್ನತ ಶಿಕ್ಷಣದ ಕನಸಿಗೆ ಒಂದು ಸಣ್ಣ ಬೆಂಬಲವಾಗಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರು ಪೂರ್ಣಿಮೆಯ ಇಂದು ಇದಕ್ಕೆ ಚಾಲನೆ ನೀಡಲಾಗುತ್ತಿದೆ. ಈ ಬಗ್ಗೆ ಅರ್ಜಿಯನ್ನು ನಾಳೆಯಿಂದ ಕೊಡಲಾಗುತ್ತಿದೆ. ಆ.15 ರ ಒಳಗೆ ಶಾಸಕರ ಕರ್ತವ್ಯ ಭವನದಲ್ಲಿ ಅರ್ಜಿಯನ್ನು ಪಡೆದು ತುಂಬಿವಾಪಾಸ್ ನೀಡಬಹುದಾಗಿದೆ ಎಂದರು.

ಅರ್ಹರಿಗೆ ಎ 5 ಸಾವಿರ ರೂ. ನೆರವು ಹಣ ನೀಡಲಾಗುವುದು . ಬಡವರಲ್ಲಿ 80-90 ಅಂಕ ಪಡೆದವರ ಬಗ್ಗೆಯೂ ಕೊಡಲು ಚಿಂತಿಸಲಾಗುವುದು. 9 ನೇ ತರಗತಿ ಮುಗಿಸಿ ಎಸ್ ಎಸ್ ಎಲ್ ಸಿ ಗೆ ಬಂದವರು ಮತ್ತು ಮೊದಲನೇ ಪಿಯುಸಿಯಿಂದ ಎರಡನೇ ಪಿಯುಸಿಗೆ ಹೋದವರಿಗೂ ಅನುಕೂಲವಾಗಲಿದೆ.ಒಂದು ಸಾವಿರ ಕೊಡುಗೈ ದಾನಿಗಳನ್ನು ಇದಕ್ಕಾಗಿ ಹುಡುಕಲಾಗುತ್ತಿದೆ ಎಂದರು.

ಅರ್ಜಿಗೆ 10 ರೂ. ನಿಗದಿ ಮಾಡಲಾಗಿದೆ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಿಂದಿನ ವರ್ಷದ ಮಾರ್ಕ್ಸ್ ಕಾರ್ಡ್ ನೀಡಬೇಕಿದೆ. ಪೋಷಕರ ಓಟರ್ ಐಡಿ ಬೇಕಿದೆ. ನಗರ ವಿಧಾನ ಸಭಾ ಕ್ಷೇತ್ರಕ್ಕೆ ಈ ಯೋಜನೆ ಸೀಮಿತವಾಗಿದ್ದು SSLC ಯಲ್ಲಿ 7355 ಜನ ವಿದ್ಯಾರ್ಥಿಗಳು, ಪಿಯು ನಲ್ಲಿ 6574 ವಿದ್ಯಾರ್ಥಿಗಳಿದ್ದಾರೆ. ಎರಡೂ ಸೇರಿ ಒಟ್ಟು 13875 ಜನ ವಿದ್ಯಾರ್ಥಿಗಳಿದ್ದಾರೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...