ಶಿವಮೊಗ್ಗ | ವೃದ್ಧನಿಗೆ ಸಹಾಯ ಮಾಡಲು ತೆರಳಿ ದಾಖಲಾತಿಗಳಿದ್ದ ಕವರ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಗ್ರಾಮಸ್ಥ!

Date:

ಕೈಗಾಡಿ ತಳ್ಳಲು ಸಾಧ್ಯವಾಗದೆ ಪರಿತಪಿಸುತ್ತಿದ್ದ ವಯೋವೃದ್ದರೋರ್ವರಿಗೆ ಸಹಾಯ ಮಾಡಲು ತೆರಳಿದ್ದ ಗ್ರಾಮಸ್ಥನೋರ್ವ, ದಾಖಲಾತಿಗಳಿದ್ದ ಪ್ಲಾಸ್ಟಿಕ್ ಕವರ್ ವೊಂದನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಘಟನೆ, ಆಗಸ್ಟ್ 18 ರ ಮಧ್ಯಾಹ್ನ ಶಿವಮೊಗ್ಗ ನಗರದ ಎ ಎ ಸರ್ಕಲ್ ನಲ್ಲಿ ನಡೆದಿದೆ.

ಗುಡಮಗಟ್ಟೆ ಗ್ರಾಮದ ನಿವಾಸಿ ಮಧು ಎಂಬುವರೆ ದಾಖಲಾತಿ ಕಳೆದುಕೊಂಡವರಾಗಿದ್ದಾರೆ. ಕಳೆದುಹೋದ ಕವರ್ ಪತ್ತೆ ಹಚ್ಚಲು ಹರಸಾಹಸ ನಡೆಸುತ್ತಿದ್ದಾರೆ. ಸರ್ಕಲ್ ನಲ್ಲಿ ಅಳವಡಿಸಿರುವ ಸಿ ಸಿ ಕ್ಯಾಮರಾ ಪರಿಶೀಲಿಸುವಂತೆ ಟ್ರಾಫಿಕ್ ಪೊಲೀಸರಿಗೆ ಮೊರೆಯಿಟ್ಟಿದ್ದಾರೆ.

ಏನಾಯ್ತು? ಮಕ್ಕಳ ದಾಖಲಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಮಧು ಅವರು ಶಿವಮೊಗ್ಗಕ್ಕೆ ಆಗಮಿಸಿದ್ದರು. ವೋಟರ್ ಐಡಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಮಕ್ಕಳ ಜನನ ಪ್ರಮಾಣ ಪತ್ರದ ದಾಖಲಾತಿಗಳನ್ನು ಕವರ್ ವೊಂದರಲ್ಲಿಟ್ಟುಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎ ಎ ಸರ್ಕಲ್ ನಲ್ಲಿ ಅವರು ನಿಂತಿದ್ದ ವೇಳೆ, ವಯೋವೃದ್ದರೋರ್ವರು ಸರಕು ಸಾಗಾಣೆಯ ಕೈ ಗಾಡಿ ತಳ್ಳಿಕೊಂಡು ಬಂದಿದ್ದಾರೆ. ಗಾಡಿ ತಳ್ಳಲು ಸಾಧ್ಯವಾಗದೆ ನೆರವಿನಹಸ್ತ ಕೋರಿದ್ದಾರೆ. ವೃದ್ಧನ ಕೋರಿಕೆಯಂತೆ ಮಧು ಹಾಗೂ ಇತರರು ಎ ಎ ಸರ್ಕಲ್ ನಿಂದ ಶಿವಪ್ಪನಾಯಕ ವೃತ್ತದವರೆಗೆ ಗಾಡಿ ತಳ್ಳಿ ನೆರವಾಗಿದ್ದಾರೆ.

ಈ ವೇಳೆ ಎ ಎ ಸರ್ಕಲ್ ನ ಟ್ರಾಫಿಕ್ ಪೊಲೀಸ್ ಬ್ಯಾರಿಕೇಡ್ ಬಳಿಯಿಟ್ಟಿದ್ದ ದಾಖಲಾತಿಗಳಿದ್ದ ಪ್ಲಾಸ್ಟಿಕ್ ಕವರ್ ನಾಪತ್ತೆಯಾಗಿದೆ. ಸುತ್ತಮುತ್ತ ಹುಡುಕಿದರೂ ಪತ್ತೆಯಾಗಿಲ್ಲ.

ಈ ವೇಳೆ ಸರ್ಕಲ್ ಗೆ ಆಗಮಿಸಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಗಿರೀಶ್ ಎಂಬುವರ ಬಳಿ ಮಧು ಅವರು ತಮ್ಮ ಅಹವಾಲು ತೋಡಿಕೊಂಡಿದ್ದಾರೆ. ಸರ್ಕಲ್ ನಲ್ಲಿರುವ ಸಿ ಸಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿ ನೆರವಾಗುವ ಭರವಸೆಯನ್ನು ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಗಿರೀಶ್ ಅವರು ನೀಡಿದ್ದಾರೆ.

ಕೋರಿಕೆ : ‘ಸದರಿ ಪ್ಲಾಸ್ಟಿಕ್ ಕವರ್ ನಲ್ಲಿ ತಮ್ಮ ಕುಟುಂಬದವರ ಪ್ರಮುಖ ದಾಖಲಾತಿಗಳಿವೆ. ಸರ್ಕಲ್ ನಲ್ಲಿರುವ ಸಿ ಸಿ ಕ್ಯಾಮರಾ ಪರಿಶೀಲಿಸಿದರೆ ಸ್ಪಷ್ಟ ಮಾಹಿತಿ ಸಿಗಲಿದೆ. ವೃದ್ದನಿಗೆ ಸಹಾಯ ಮಾಡಲು ತೆರಳಿದ ವೇಳೆ, ಸದರಿ ಕವರ್ ನ್ನು ಬ್ಯಾರಿಕೇಡ್ ಮೇಲಿಟ್ಟು ತೆರಳಿದ್ದೆ. ಯಾರು ಕೊಂಡೊಯ್ದರು ಎಂಬುವುದು ಗೊತ್ತಾಗುತ್ತಿಲ್ಲ. ಸದರಿ ದಾಖಲಾತಿ ಸಿಕ್ಕವರು ತಮ್ಮ ಮೊಬೈಲ್ ಸಂಖ್ಯೆ : 87921-03984hi ಗೆ ಸಂಪರ್ಕಿಸುವಂತೆ’ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...