ಶಿವಮೊಗ್ಗ | ಈದ್ಗಾ ಮೈದಾನದ ತುರ್ತು ಎಸ್ ಪಿ ಸಭೆಗೆ ಗೈರು ಹಿನ್ನಲೆ ವಿನೋಬನಗರ ಪಿ ಐ ಅಮಾನತು

Date:

ಶಿವಮೊಗ್ಗ ವಿನೋಬ ನಗರದ ಪೊಲೀಸ್ ಠಾಣೆಯ ಪಿಐ ಚಂದ್ರಕಲಾ ಅವರನ್ನ ಅಮಾನತ್ತುಗೊಳಿಸಿ ದಾವಣಗೆರೆ ಐಜಿಪಿ ರವಿಕಾಂತೇ ಗೌಡ ಆದೇಶಿಸಿದ್ದಾರೆ.

ಕರ್ತವ್ಯದಲ್ಲಿ‌ ದುರ್ವರ್ತನೆ ಹಾಗೂ ಅಶಿಸ್ತು ಹಿನ್ನೆಲೆಯಲ್ಲಿ ‌ಸಸ್ಪೆಂಡ್ ಆಗಿರುವುದಾಗಿ ತಿಳಿದು ಬಂದಿದೆ. ಈದ್ಗಾ ಮೈದಾನದ ಮಾಲೀಕತ್ವ ವಿವಾದ ಸಂಬಂಧ ಎಸ್ಪಿಯವರು ಕರೆದಿದ್ದ ಸಭೆಗೆ ಚಂದ್ರಕಲಾ ಅವರು ಗೈರು ಆಗಿರುವ ಆರೋಪವೂ ಕೇಳಿ ಬಂದಿದೆ. ನಾಲ್ಕು ದಿನದ ಹಿಂದೆ ನಗರದ ಎಲ್ಲಾ ಪಿಐ ಹಾಗೂ ಪಿ ಎಸ್ ಐ ಸಭೆಯನ್ನ ಎಸ್ಪಿ ಅವರು ಕರೆದಿದ್ದರು. ಚಂದ್ರಕಲಾ ಹೊರತು ಪಡಿಸಿ ಸಭೆಗೆ ಉಳಿದೆಲ್ಲಾ ಪಿಐ ಹಾಗೂ ಪಿಎಸ್ಐ ಗಳು ಹಾಜರಾಗಿದ್ದರು‌. ಚಂದ್ರಕಲಾರ ಗೈರನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಅವರು ಮೇಡಂಗೆ ಡಿಎಸ್ಬಿ ಬ್ರಾಂಚ್ ಗೆ ವರದಿ ಮಾಡಿಕೊಳ್ಳುವಂತೆ ಸೂಚಿಸಿದ್ದರು.

ಇದೇ ವೇಳೆ ಸೂಕ್ತ ಶಿಸ್ತು ಕ್ರಮಕ್ಕೂ ಸಹ ಐಜಿಪಿಗೆ ಶಿಫಾರಸು ಮಾಡಿದ್ದರು ಎಂದು ತಿಳಿದು ಬಂದಿದೆ. ಎಸ್ಪಿ ಶಿಫಾರಸಿನ ಹಿನ್ನೆಲೆಯಲ್ಲಿ ಚಂದ್ರಕಲಾರನ್ನು ಸೇವೆಯಿಂದ ಅಮಾನತುಗೊಳಿಸಿ ಐಜಿಪಿ‌ ಆದೇಶಿಸಿರುವುದಾಗಿ ತಿಳಿದು ಬಂದಿದೆ. ಈ ಮೊದಲು ಹಲವು ವಿಷಯದಲ್ಲಿ ಸಾಕಷ್ಟು ಚರ್ಚೆಗೆ ಚಂದ್ರಕಲಾರ ನಡವಳಿಕೆ ಎಡೆಮಾಡಿಕೊಟ್ಟಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001436065

ಇದಲ್ಲದೆ ಮೂರು ದಿನಗಳ ಹಿಂದೆ ಪೊಲೀಸ್ ಇನ್ಸ್ ಪೆಕ್ಟ‌ರ್ ಚಂದ್ರಕಲಾ ರವರ ಅಧಿಕಾರವಿದ್ದ ವಿನೋಬನಗರ ಪೊಲೀಸ್‌ ಠಾಣೆಗೆ ಅಡಿಷನಲ್ ಎಸ್ ಪಿ ಅನಿಲ್ ಕುಮಾ‌ರ್ ಭೂಮರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದರು.

ಇಲಾಖಾ ತನಿಖೆಯ ವೇಳೆ ಪಿ ಐ ಚಂದ್ರಕಲಾ ಸೂಕ್ತ ರೀತಿಯಲ್ಲಿ ಸ್ಪಂದಿಸಲಿಲ್ಲ ಎಂಬುದು ಆರೋಪವಾಗಿದೆ. ಕೇಸ್ ಫೈಲ್ ಗಳ ಮೈಂಟೆನೆನ್ಸ್, ದಾಖಲೆಗಳ ಮೈಂಟೆನೆನ್ಸ್ ಗಳಲ್ಲಿ ಆಸಕ್ತಿ ತೋರದೇ ನಿರ್ಲಕ್ಷ್ಯ ವಹಿಸುತ್ತಿದ್ದರು ಎನ್ನಲಾಗಿದೆ. ಅಲ್ಲದೇ, ಹಿರಿಯ ಅಧಿಕಾರಿಗಳು ಬಂದಾಗ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿರಲಿಲ್ಲ ಎಂದು ಆರೋಪದಿಂದ ಸಸ್ಪೆಂಡ್ ಮಾಡಲಾಗಿದೆ ಎಂಬುದು ಇಲಾಖೆಯ ಮೂಲಗಳಾಗಿದೆ. ಒಂದು ತಿಂಗಳ ಮಟ್ಟಿಗೆ ಸಸ್ಪೆಂಡ್ ಆಗಿರುವ ಪಿ ಐ ಚಂದ್ರಕಲಾ ರವರನ್ನು ರೂಲ್ ನಂ. 7 ಪ್ರಕಾರ ತನಿಖೆಗೊಳಪಡಿಸಲಾಗಲಿದೆ ಎಂದು ತಿಳಿದುಬಂದಿದೆ.

ಸದ್ಯಕ್ಕೆ ವಿನೋಬನಗರ ಪ್ರಭಾರ ಪಿಐ ಆಗಿ ಜಯನಗರ ಪಿಐ ಸಿದ್ದೇಗೌಡರು ಕಾರ್ಯನಿರ್ವಹಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...