ಶಿವಮೊಗ್ಗ | ದೆವ್ವ ಬಿಡಿಸುತ್ತೇನೆ ಎಂದು ಮಹಿಳೆಯ ಪ್ರಾಣವನ್ನೇ ತೆಗೆದಳು ; ಮೌಢ್ಯಕ್ಕೆ ಅಮಾಯಕಿ ಬಲಿ

Date:

ರಾಜ್ಯದಲ್ಲಿ ಮೂಢ ನಂಬಿಕೆಗೆ ಮತ್ತೊಬ್ಬ ಮಹಿಳೆ ಬಲಿ ಆಗಿದ್ದಾರೆ. ‘ದೆವ್ವ ಬಿಡಿಸುವ’ ಪ್ರಯತ್ನದ ನಡುವೆ 45 ವರ್ಷದ ಮಹಿಳೆ, ಕೋಲುಗಳಿಂದ ಬೀಳುತ್ತಿದ್ದ ನಿರಂತರ ಏಟುಗಳನ್ನು ತಾಳಲಾಗದೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸ ಜಂಬರಘಟ್ಟದಲ್ಲಿ ನಡೆದಿದೆ.

ಶಿವಮೊಗ್ಗ ಗ್ರಾಮಾಂತರದ ಹೊಳೆಹೊನ್ನೂರುನಲ್ಲಿ ಮಹಿಳೆಯೊಬ್ಬರಿಗೆ ಮೈ ಮೇಲೆ ದೆವ್ವ ಬಂದಿದ್ದು, ಅದನ್ನು ಬಿಡಿಸುವುದಾಗಿ ಹೇಳಿ ಮಹಿಳೆಯ ಪ್ರಾಣವನ್ನೇ ತೆಗೆದ ಘಟನೆ ನಡೆದಿದ್ದು, ಈ ಸಂಬಂಧ ಹೊಳೆ ಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

1001862784

ಗೀತಮ್ಮ(55) ಎಂಬ ಮಹಿಳೆಗೆ ಕಳೆದ 15 ದಿನಗಳಿಂದ ಅನಾರೋಗ್ಯವಾಗಿತ್ತು. ಇದನ್ನು ಗಮನಿಸಿದ ಮಗ ಸಂಜಯ್ ತಾಯಿಯನ್ನ ಹಳೆ ಜಂಬರಕಟ್ಟೆಯ ಆಶಾ ಯಾನೆ ಶಾಂತಮ್ಮ (45) ವಯಸ್ಸಿನ ಮಹಿಳೆ ಬಳಿ ಕರೆದುಕೊಂಡು ಹೋಗಿದ್ದಾರೆ. ತಾಯಿಯನ್ನ ಪರಿಶೀಲಿಸಿದ ಆಶಾ ತಾಯಿಗೆ ಆತ್ಮ ಬಂದಿದೆ ಎಂದು ಹೇಳಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಹಿತಿಯ ಪ್ರಕಾರ, ಶಾಂತಮ್ಮ ಎಂಬ ಮಹಿಳೆ ಗೀತಾಳ ಮೈ ಮೇಲೆ ‘ದೆವ್ವ ಬರುತ್ತದೆ. ಅವಳಿಗೆ ದೆವ್ವ ಹಿಡಿದಿದೆ’ ಎಂಬ ಮೂಢ ನಂಬಿಕೆಯನ್ನು ಹೊಂದಿದ್ದಳು. ಹೀಗಾಗಿ ದೆವ್ವ ಬಿಡಿಸುವ ನಿಟ್ಟಿನಲ್ಲಿ ಹೊಸ ಜಂಬರಘಟ್ಟಕ್ಕೆ ಕರೆದುಕೊಂಡು ಹೋಗಿದ್ದರು. ಆದರೆ ದೆವ್ವ ಬಿಡಿಸುವ ಪ್ರಹಸನದ ವೇಳೆ ಗೀತಾಳಿಗೆ ನಿರಂತರವಾಗಿ ಕೋಲಿನಿಂದ ಹೊಡೆಯಲಾಗಿದೆ. ಗೀತಾ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದ ಕಾರಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಆಶಾರಿಗೂ ಕಳೆದ 15 ದಿವಸಗಳಿಂದ ಮೈಮೇಲೆ ದೇವರು ಬರುತ್ತಿದ್ದು, ದೆವ್ವ ಬಿಡಿಸುವ ಮಹಿಳೆ ಎಂದು ಊರಿನಲ್ಲಿ ಕುಖ್ಯಾತಿ ಗಳಿಸಿದ್ದಳು. ಇದರಿಂದ ಈಕೆಯ ಬಳಿ ಗೀತಮ್ಮರನ್ನ ಮಗ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ನಿನ್ನೆ ಗೀತಮ್ಮರ ಮೈಮೇಲೆ ಆತ್ಮ ಬಂದಿದ್ದು ಆಶಾ ಪೂಜೆ ಆರಂಭಿಸೋಣ ಎಂದು ಗೀತಮ್ಮಳನ್ನ ಮೆರವಣಿಗೆಯ ಮೂಲಕ ಊರ ಹೊರಗೆ ಕರೆದುಕೊಂಡು ಬಂದು ಕೋಲಿನಿಂದ ಹೊಡೆಯುವ ಪೂಜೆ ಆರಂಭಿಸಿದ್ದಾರೆ. ಗೀತಮ್ಮ ಈ ಘಟನೆಯಿಂದ ಜರ್ಜರಿತಳಾಗಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಆಕೆಯ ಶವವನ್ನ ಹೊಳೆಹೊನ್ನೂರು ಸಮುದಾಯ ಭವನದಲ್ಲಿರಿಸಲಾಗಿದೆ. ಗೀತಮ್ಮಳಿಗೆ ಆರೋಪಿ ಶಾಂತಮ್ಮ ಕೋಲಿನಿಂದ ಹೊಡೆಯುವ ದೃಶ್ಯದ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುದ್ದು, ಸೂಕ್ತ ಕ್ರಮಕ್ಕೆ ಸಾರ್ವಜನಿಕ ವಲಯದಿಂದ ಆಗ್ರಹ ಕೇಳಿಬಂದಿದೆ.

ಘಟನೆಯ ಸಂಬಂಧ ದೂರು ದಾಖಲಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಆಶಾ‌ ಮತ್ತು ಅವರ ಗಂಡನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂತಹ ಅಂಧ ಶ್ರದ್ಧೆಗಿಂತ ವೈದ್ಯಕೀಯ ಚಿಕಿತ್ಸೆ ಮತ್ತು ವೈಜ್ಞಾನಿಕ ದೃಷ್ಟಿಕೋನ ಸಮಾಜ ಬೆಳೆಯಬೇಕು ಎಂಬ ಮಾತು ಜನಜನಿತವಾಗಿ ಕೇಳಿ ಬರುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...