ಶಿವಮೊಗ್ಗ | ದೆವ್ವ ಬಿಡಿಸುವ ನೆಪದಲ್ಲಿ ಅಮಾಯಕ ತಾಯಿಯ ಕೊಲೆ: ಮಗ ಸೇರಿ ಮೂವರ ಬಂಧನ

Date:

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಜಂಬರಘಟ್ಟೆ ಗ್ರಾಮದಲ್ಲಿ ದೆವ್ವ ಬಿಡಿಸುವ ನೆಪದಲ್ಲಿ ಗೀತ ಎಂಬ ಮಹಿಳೆಯನ್ನು ಆಶಾ ಎಂಬ ಮಹಿಳೆ ಥಳಿಸಿ ಕೊಂದ ಪ್ರಕರಣದಲ್ಲಿ ಪೊಲೀಸರು ಆರೋಪಿಗಳಾದ ಆಶಾ, ಅವರ ಪತಿ ಸಂತೋಷ್ ಹಾಗೂ ಮೃತಳ ಮಗ ಸಂಜಯ್ ಎಂಬುವರನ್ನು ಬಂಧಿಸಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿದ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರು, ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಕೊಲೆ ಪ್ರಕರಣ ದಾಖಲಾಗಿದೆ. ದೆವ್ವ ಬಿಡಿಸುವ ನೆಪದಲ್ಲಿ ಮೌಢ್ಯವನ್ನು ನಂಬಿ ಈ ಕೃತ್ಯ ಎಸಗಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಹಿನ್ನೆಲೆಯಲ್ಲಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿ, ಮೂವರನ್ನು ಬಂಧಿಸಿದ್ದೇವೆ. ತನಿಖೆ ಮುಂದುವರಿಸಲಾಗಿದೆ” ಎಂದು ತಿಳಿಸಿದ್ದಾರೆ.

ಗೀತಮ್ಮ (55) ಎಂಬ ಮಹಿಳೆ ಮೃತರು. ಗೀತಮ್ಮನಿಗೆ ಮೂರು ಜನ ಮಕ್ಕಳು. ಇಬ್ಬರು ಗಂಡುಮಕ್ಕಳು ಹಾಗೂ ಓರ್ವ ಹೆಣ್ಣು ಮಗಳು ಇದ್ದಾಳೆ. ಓರ್ವ ಮಗ ಜಂಬರಘಟ್ಟ ಗ್ರಾಮದಲ್ಲಿ ಗೀತಮ್ಮನ ಜೊತೆ ವಾಸವಾಗಿದ್ದಾರೆ. ಗೀತಮ್ಮಗೆ ಯಾರೋ ತೀರಿಕೊಂಡವರು ಮೈ ಮೇಲೆ ಬಂದಿದ್ದಾರೆ ಎಂದು ಗ್ರಾಮದವರು ಮಾತನಾಡಿಕೊಳ್ಳುತ್ತಿದ್ದರು ಎಂದು ಅವರ ಮಗ ಹೇಳಿದ್ದಾರೆ. ಅದೇ ಗ್ರಾಮದಲ್ಲಿ ಆಶಾ (45) ಅವರಿಗೆ ತನ್ನ ತಾಯಿ ಮೇಲೆ ದೆವ್ವ ಬಂದಿದೆ ಎಂದು ಮೃತಳ ಮಗ ಸಂಜಯ ತಿಳಿಸಿದ್ದ. ಆಗ ಆಶಾ ಹಾಗೂ ಆಕೆಯ ಗಂಡ ಸಂತೋಷ್​ ಭಾನುವಾರ ರಾತ್ರಿ ಗೀತಮ್ಮನನ್ನು ಕರೆದುಕೊಂಡು ಹೋಗಿ ಹೊಡೆದಿದ್ದಾರೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಸಂಬಂಧಿಸಿದ ವಿಡಿಯೋ ಸಹ ಸಿಕ್ಕಿದೆ. ನೀರು ಕೊಡಿ ಎಂದ್ರು ಬಿಟ್ಟಿಲ್ಲ.‌ ಸುಮಾರು ನಾಲ್ಕು ತಾಸು ಹೊಡೆದಿದ್ದಾರೆ‌. ಗೀತಮ್ಮ ಪ್ರಜ್ಞೆ ತಪ್ಪಿ ಬಿದ್ದಿದ್ದು, ಅದಾದ ಬಳಿಕ ಅರ್ಧ ಗಂಟೆಗೆ ಆಕೆ ಪ್ರಾಣ ಬಿಟ್ಟಿದ್ದಾರೆ. ಈ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಗುಜರಾತ್‌ | ವಡೋದರದಲ್ಲಿ ಕುಸಿದ ಸೇತುವೆ; ಮೂವರ ಸಾವು, ನದಿಗೆ ಉರುಳಿದ 5 ವಾಹನಗಳು

ಮೂರು ಜನ ಆರೋಪಿತರಾದ ಎ-1 ಆಶಾ, ಎ-2 ಆಶಾ ಪತಿ ಸಂತೋಷ್ ಹಾಗೂ ಎ-3 ಮೃತಳ ಮಗ ಸಂಜಯ್ ಅವರನ್ನು ಬಂಧಿಸಲಾಗಿದೆ. ಮೃತಳು ನೀರು ಕೇಳಿದ್ದರೂ ಕೂಡ, ಕೊಡದೆ ಥಳಿಸಿದ್ದಾರೆ. ಆಶಾಳ ಹಿನ್ನೆಲೆಯನ್ನು ಪರಿಶೀಲನೆ ನಡೆಸಲಾಗುತ್ತಿದೆ. ಈ ಹಿಂದೆ ಕೂಡ ಈ ರೀತಿಯಲ್ಲಿ ಏನಾದರೂ ನಡೆಸಿರುವ ಬಗ್ಗೆಯೂ ತನಿಖೆ ನಡೆಸುತ್ತಿದ್ದೇವೆ. ಇಂದಿನ ಆಧುನಿಕ ಕಾಲಘಟ್ಟದಲ್ಲೂ ಈ ರೀತಿ ನಡೆದುಕೊಳ್ಳುವುದನ್ನು ನೋಡಿ ನಮಗೆ ಆಶ್ಚರ್ಯ ಆಗುತ್ತದೆ. ಈ ರೀತಿಯ ಘಟನೆ ಕಂಡುಬಂದರೆ ನಮಗೆ ತಿಳಿಸಬೇಕೆಂದು ಗ್ರಾಮಸ್ಥರಿಗೆ ತಿಳಿಸಲಾಗಿದೆ.ಯಾವುದೇ ಪ್ರದೇಶದಲ್ಲಿ ಈ ರೀತಿಯ ಮೌಢ್ಯ ಕಂಡು ಬಂದರೆ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮನವಿ ಮಾಡಿದ್ದಾರೆ.

ಮೌಢ್ಯಗಳಿಗೆ ಕಿವಿಗೊಡಬಾರದು ಎಂದು ತಾಕೀತು ಮಾಡಲಾಗಿದೆ. ದೇವರು, ದೆವ್ವ ಬಂದಿದೆ ಎಂದು ಹಲ್ಲೆ ನಡೆಸಬಾರದು. ಅವರವರ ನಂಬಿಕೆ ಅವರ ಮನೆಯಲ್ಲಿ ಇರಬೇಕು. ಈ ರೀತಿ ಮಾಡಬಾರದು ಎಂದು ಹೇಳಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...