ಶಿವಮೊಗ್ಗ | ಬರ ಪರಿಹಾರ ಹೆಚ್ಚಳಕ್ಕೆ ಎಎಪಿ ಆಗ್ರಹ

Date:

ಕರ್ನಾಟಕ ರಾಜ್ಯದ ಹಲವು ಜಿಲ್ಲೆ ಹಾಗೂ ತಾಲೂಕುಗಳಲ್ಲಿ 2023ನೇ ಸಾಲಿನ ಬರಗಾಲದಿಂದ ರಾಜ್ಯದ ಜನತೆ, ರೈತ ಹಾಗೂ ದಿನನಿತ್ಯ ಕೂಲಿ ಮಾಡುವಂತಹ ಕಾರ್ಮಿಕರ ಪರಿಸ್ಥಿತಿಯು ತೀವ್ರ ದುಃಸ್ಥಿತಿಗೆ ತಲುಪಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಬರ ಪರಿಹಾರ ನೀಡಬೇಕು ಎಂದು ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಸರ್ಕಾರಕ್ಕೆ ಮನವಿ ಮಾಡಿದರು.

ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಎಎಪಿ ಮುಖಂಡರು, “ಜಾನುವಾರುಗಳಿಗೆ ಮೇಯಲು ಹುಲ್ಲು ಸಿಗುತ್ತಿಲ್ಲ. ಕೆರೆಕಟ್ಟೆಗಳಲ್ಲಿ ಸಂಗ್ರಹವಾಗದ ನೀರಿನ ಅಭಾವದ ಪರಿಣಾಮ ಸರಿಯಾದ ರೀತಿಯಲ್ಲಿ ಕೃಷಿ ಕೆಲಸ ಕಾರ್ಯಗಳನ್ನು ಮಾಡಲು ಆಗುತ್ತಿಲ್ಲ. ಹಲವೆಡೆ ಜನರು ಒಂದೆಡೆಯಿಂದ ಮತ್ತೊಂದೆಡೆಗೆ ವಲಸೆ ಬರುತ್ತಿದ್ದಾರೆ” ಎಂದರು.

“ಜಾನುವಾರುಗಳನ್ನು ನಂಬಿಕೊಂಡು ಬದುಕುತ್ತಿರುವ ರೈತ, ಜಾನುವಾರುಗಳನ್ನು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವುದು ಹಾಗೂ ಮಳೆಯ ಅಭಾವದಿಂದ ತನ್ನ ಹೊಲಗದ್ದೆಗಳಲ್ಲಿ ಬಿತ್ತನೆ ಕೆಲಸ ಮಾಡದೆ ಒಣಗಿರುವ ಬಂಜರು ಭೂಮಿಯನ್ನು ಬಿಟ್ಟು ಉದ್ಯೋಗ ಹರಸಿ ನಗರದತ್ತ ಹೋಗುತ್ತಿರುವುದು ವಿಷಾದನೀಯ ಸಂಗತಿಯಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತುತ ಸರ್ಕಾರ ಬರ ಪರಿಹಾರಕ್ಕೆ ₹800 ಕೋಟಿ ಪರಿಹಾರ ಘೋಷಣೆ ಮಾಡಿದ್ದರೂ ರಾಜ್ಯದ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವ ಸಂಪುಟವು ಇನ್ನೂ ಹೆಚ್ಚಿನ ಹಣ ಬಿಡುಗಡೆ ಮಾಡುವುದರಿಂದ ಬರ ಪರಿಹಾರಕ್ಕೆ ಒಂದಲ್ಲ ಒಂದು ರೀತಿಯಲ್ಲಿ ರಾಜ್ಯದ ಜನತೆಗೆ ನೆರವಾಗಬಹುದಿತ್ತು” ಎಂದು ಹೇಳಿದರು.

“ಕೇವಲ 18 ಜಿಲ್ಲೆಗಳಿಗೆ ಮಾತ್ರ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಿದ್ದು, ಇನ್ನೂ ಹಲವು ಜಿಲ್ಲೆಗಳಲ್ಲಿ ಗ್ರಾಮಗಳಿಗೆ ಬರ ಪರಿಹಾರದ ಹಣ ಬಿಡುಗಡೆಯಾಗದಿರುವುದು ಯೋಚನೆ ಮಾಡುವಂತಹ ಪ್ರಸಂಗವಾಗಿದೆ. ಆಯಾ ಜಿಲ್ಲಾಧಿಕಾರಿಗಳು ಇನ್ನೂ ಹೆಚ್ಚಿನ ಸಮೀಕ್ಷೆ ನಡೆಸಿ ತಾಲೂಕು, ಹೋಬಳಿ ಹಾಗೂ ಹಲವು ಗ್ರಾಮಗಳ ಸಂಪೂರ್ಣ ವೀಕ್ಷಣೆಯ ಮಾಹಿತಿಯನ್ನು ಸರ್ಕಾರಕ್ಕೆ ಒಪ್ಪಿಸಬೇಕಿದೆ” ಎಂದು ಕೋರಿದರು.

“ಈಗಿನ ನಾಗರಿಕನ ದಿನನಿತ್ಯದ ಬಳಕೆ ವಸ್ತುಗಳಾದ ತರಕಾರಿ, ಅಡುಗೆ ಸಾಮಗ್ರಿಗಳ ಬೆಲೆಗಳು ಗಗನಕ್ಕೇರುತ್ತಿದ್ದು, ಮಧ್ಯಮ ವರ್ಗದವರು ಹಾಗೂ ಬಡತನ ರೇಖೆಗಿಂತ ಕೆಳವರ್ಗದವರು ಜೀವನ ನಡೆಸಲು ಹಣವಿಲ್ಲದೆ, ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಸಾಧ್ಯವಾಗದೆ ಪರದಾಡುವಂತಾಗಿದೆ” ಎಂದರು.

“ಸರ್ಕಾರ ನಿರ್ಲಕ್ಷ್ಯ ಮಾಡದೆ ಕೂಡಲೇ ಹೆಚ್ಚಿನ ಹಣವನ್ನು ಜಿಲ್ಲೆಗಳಿಗೆ ಬಿಡುಗಡೆ ಮಾಡುವುದರ ಮೂಲಕ ರೈತರಿಗೆ, ನಾಗರಿಕರಿಗೆ ಮತ್ತು ಇಲ್ಲಿ ದಿನನಿತ್ಯ ಅವಲಂಬಿತವಾದ ಜಾನುವಾರುಗಳಿಗೆ ಅವುಗಳ ರಕ್ಷಣೆಗಾಗಿ ಹಾಗೂ ಕೃಷಿಗಳ ರಕ್ಷಣೆಗಾಗಿ ಕೂಡಲೇ ಕ್ರಮ ಕೈಗೊಳ್ಳಬೇಕಾಗಿದೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಜಿಲ್ಲಾ ಆಸ್ಪತ್ರೆ ಡಿ ದರ್ಜೆ ಗುತ್ತಿಗೆ ನೌಕರರ ವಜಾ; ಮರುನೇಮಕಕ್ಕೆ ಆಗ್ರಹ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರ ಪರಿಹಾರದ ಹಣವನ್ನು ಹೆಚ್ಚಿಸಿ ಇನ್ನೂ ಹಲವಾರು ಜಿಲ್ಲೆಗಳಿಗೆ ಸರಿಯಾದ ಬರ ಪರಿಹಾರವನ್ನು ಘೋಷಿಸಬೇಕು” ಆಮ್ ಆದಿ ಪಾರ್ಟಿ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಎಎಪಿಯ ನಜೀರ್ ಅಹಮದ್, ಮಾಧ್ಯಮ ವಕ್ತಾರ ಸುರೇಶ್ ಕೌಟೆಕಾರ್,
ಪ್ರಚಾರ ಸಮಿತಿಯ ಮಂಜುನಾಥ್ ಪೂಜಾರಿ, ಯೂಸುಫ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...