ಶಿವಮೊಗ್ಗ | ಬಿಜೆಪಿ ಇನ್ನಾದರೂ ಕುಟುಂಬ ರಾಜಕಾರಣದ ಕುರಿತು ಮಾತನಾಡುವುದನ್ನು ನಿಲ್ಲಿಸಬೇಕು: ಆಯನೂರ್‌ ಮಂಜುನಾಥ್

Date:

ಬಿಜೆಪಿಯಲ್ಲಿ ಬಹಳ ತಡವಾಗಿದ್ದರೂ ಕೂಡ ಗಜ ಪ್ರಸವ ರೀತಿಯಲ್ಲಿ ಅಂತೂ ರಾಜ್ಯಾಧ್ಯಕ್ಷರ ಆಯ್ಕೆಯಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ,ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಬಿ ವೈ ವಿಜಯೇಂದ್ರ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವುದು ಬಹಳ ಸಂತೋಷದ ವಿಚಾರ. ಶಿವಮೊಗ್ಗಕ್ಕೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಾರೆ. ಬಿಜೆಪಿಯಲ್ಲಿ ಇದೇ ಮೊದಲ ಬಾರಿ ಅತ್ಯಂತ ಸಣ್ಣ ವಯಸ್ಸಿನ ರಾಜ್ಯಾಧ್ಯಕ್ಷರ ನೇಮಕವಾಗಿದೆ. ಯಶಸ್ವಿಯಾಗಿ ಬಹಳ ಎಚ್ಚರದಿಂದ ಕೆಲಸ ಮಾಡಲಿ” ಎಂದು ಹೇಳಿದರು.

“ವಿಜಯೇಂದ್ರ ಇಡುವಂತಹ ಪ್ರತಿಯೊಂದು ಹೆಜ್ಜೆ ಯಡಿಯೂರಪ್ಪ ಅವರ ಮೇಲೆ ಪ್ರಭಾವ ಬೀರುತ್ತದೆ. ವಿಜಯೇಂದ್ರ ಅವರ ಹಿಂದೆ ಯಡಿಯೂರಪ್ಪ ಅವರ ಪ್ರಭಾವವಿದೆ. ಹಾಗಾಗಿ ಅವರ ಸಫಲತೆ ಹಾಗೂ ವಿಫಲತೆ ಎರಡೂ ಕೂಡ ಯಡಿಯೂರಪ್ಪರ ಮೇಲೆ ಪ್ರಭಾವ ಬೀರುತ್ತವೆ. ಯಡಿಯೂರಪ್ಪ ಅವರ ಘನತೆಗೂ ಕೂಡ ಪ್ರಭಾವ ಬೀರುವ ರೀತಿ ಇರುವುದರಿಂದ ಬಹಳ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜಕೀಯ ನಿರ್ಣಯಗಳನ್ನು ಬಹಳ ಮುತುವರ್ಜಿಯಿಂದ ತೆಗೆದುಕೊಳ್ಳಬೇಕು. ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂಬುದನ್ನು ನಾನು ಸದ್ಯಕ್ಕೆ ಹೇಳುವುದಿಲ್ಲ. ಅದನ್ನು ಕಾಲವೇ ನಿರ್ಣಯ ಮಾಡುತ್ತದೆ. ಯಡಿಯೂರಪ್ಪನವರ ಸಂಪೂರ್ಣ ಶಕ್ತಿಯನ್ನು ಬಳಸಿಕೊಳ್ಳುವುದಕ್ಕೆ ಈ ರೀತಿ ಮಾಡಿದ್ದಾರೆ” ಎಂದರು.

“ಪಾರ್ಲಿಮೆಂಟ್ ಚುನಾವಣೆಗೆ ಯಡಿಯೂರಪ್ಪನವರ ಅವಶ್ಯಕತೆ ಬಿಜೆಪಿಗೆ ತುಂಬಾನೇ ಇದೆ. ಮಗನನ್ನು ಆಯ್ಕೆ ಮಾಡುವ ಮೂಲಕ ಪರೋಕ್ಷವಾಗಿ ಯಡಿಯೂರಪ್ಪ ಅವರಿಗೆ ಜವಾಬ್ದಾರಿ ನೀಡಿದ್ದಾರೆ. ಲೋಕಸಭೆಯಲ್ಲಿ ಬಿಜೆಪಿಯನ್ನು ಹೆಚ್ಚು ಸ್ಥಾನದಿಂದ ಗೆಲ್ಲಿಸುವ ಜವಾಬ್ದಾರಿ ವಿಜಯೇಂದ್ರ ಅವರಿಗಿಂತಲೂ ಯಡಿಯೂರಪ್ಪನವರಿಗೆ ಹೆಚ್ಚಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕುಟುಂಬ ರಾಜಕಾರಣಕ್ಕೆ ಬಿಜೆಪಿ ವಿರೋಧವಾಗಿಯೇ ಇದೆ: ಈಶ್ವರಪ್ಪ

“ವಿಜಯೇಂದ್ರ ಆಯ್ಕೆಯಿಂದ ಕಾಂಗ್ರೆಸ್‌ಗೆ ಯಾವುದೇ ರೀತಿಯ ತೊಂದರೆಗಳಿಲ್ಲ. ಈಗಾಗಲೇ ಕಾಂಗ್ರೆಸ್ ತನ್ನ ಸಾಮರ್ಥ್ಯವನ್ನು ಪ್ರದರ್ಶನ ಮಾಡಿದೆ. ಬಿಜೆಪಿ ಈ ಆಯ್ಕೆಯಿಂದ ಅವರ ಆಂತರಿಕ ಕಲಹ, ಭ್ರಷ್ಟಾಚಾರ ಯಾವುದೂ ಕೂಡ ಮಾಯವಾಗುವುದಿಲ್ಲ. ಅವರ ಕೆಲಸಕ್ಕಾಗಿ ಒಬ್ಬ ನಾಯಕನನ್ನು ಆಯ್ಕೆ ಮಾಡಿಕೊಂಡಿದ್ದಾರೆಯೇ ಹೊರತು ಇದರಿಂದ ಕಾಂಗ್ರೆಸ್ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವುದಿಲ್ಲ” ಎಂದರು.

“ಬಿಜೆಪಿ ಇನ್ನು ಮುಂದೆಯಾದರೂ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವುದನ್ನು ಬಿಡಬೇಕು. ಬಿ ವೈ ವಿಜಯೇಂದ್ರ ಅವರು ತಮ್ಮ ಸಾಮರ್ಥ್ಯವನ್ನು ಸಾಬೀತು ಪಡಿಸಿಕೊಳ್ಳಬೇಕು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...