ಶಿವಮೊಗ್ಗ | ನ್ಯಾ. ಎ ಜೆ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹ

Date:

ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿಯನ್ನು ಬಿಡುಗಡೆ ಮಾಡಿ, ಕೇಂದ್ರ ಸರ್ಕಾರದ ಅನುಮೋದನೆ ಪಡೆದು ಜಾರಿಗೊಳಿಸುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಶಿವಮೊಗ್ಗ ಜಿಲ್ಲಾ ಹೊಲೆಯ-ಮಾದಿಗ ಜಾತಿಗಳ ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ.

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಒತ್ತಾಯಿಸಿದರು.

“ಪರಿಶಿಷ್ಟ ಜಾತಿ ಅನ್ಯ ಸಮುದಾಯದವರಿಗೆ ಕೈಗಾರಿಕೋದ್ಯಮಕ್ಕೆ ಹೆಚ್ಚು ಪ್ರೋತ್ಸಾಹ ನೀಡಿ ಸಾಲ
ಸೌಲಭ್ಯದಲ್ಲಿ ಶೇ. 80ರಷ್ಟು ಸಹಾಯಧನ ನೀಡಬೇಕು. ಸ್ಥಾಪನೆಗೆ ಇರುವ ಕಠಿಣ ನಿರ್ಬಂಧ ಕೈಬಿಡಬೇಕು. ಪರಿಶಿಷ್ಟ ಜಾತಿ ಉಪಯೋಜನೆ ಅನುದಾನ ಪ್ರಸ್ತುತ ಸಾಲಿನಲ್ಲಿ ಖರ್ಚಾಗದೆ ಉಳಿದರೆ ಮುಂದಿನ ಸಾಲಿನ ಆಯ-ವ್ಯಯದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಗೆ ಸೇರಿಸಲು ಕಾಯ್ದೆ ರೂಪಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪರಿಶಿಷ್ಟ ಜಾತಿ, ಅಸ್ಪೃಶ್ಯ ಜಾತಿಗಳಿಗೆ ಸೇರಿದ ಸಮುದಾಯಗಳು, ಮಲ ಹೊರುವುದು, ಶೌಚಾಲಯ ಶುಚಿಗೊಳಿಸುವುದು, ಸತ್ತ ಜಾನುವಾರುಗಳನ್ನು ಊರ ಹೊರಗೆ ಸಾಗಿಸುವುದು, ಚಪ್ಪಲಿ ಹೊಲಿಯುವುದು ಮುಂತಾದ ಹೀನ ಕಸುಬುಗಳನ್ನು ಮಾಡಿಕೊಂಡು ಬಂದಿರುವ ನೈಜ ಅಸ್ಪೃಶ್ಯ ಜಾತಿಗಳಾಗಿವೆ” ಎಂದರು.

“ಹೊಲಯ, ಛಲವಾದಿ, ಮಾದಿಗ, ಸಮಗಾರ, ಮಚ್ಚಿಗಾರ, ದೋಹರ, ದಕ್ಕಲ ಮುಂತಾದ ಜನಾಂಗಗಳಿಗೆ ಸಂವಿಧಾನಾತ್ಮಕವಾಗಿ ಸಿಗಬೇಕಾದ ರಾಜಕೀಯ, ಶಿಕ್ಷಣ, ಉದ್ಯೋಗ ಮುಂತಾದ ಸೌಲಭ್ಯಗಳನ್ನು ಇತ್ತೀಚಿನ ದಿನಗಳಲ್ಲಿ ಇದರ ಪಾಲನ್ನು ಪರಿಶಿಷ್ಟರಲ್ಲೇ ಸ್ಪೃಶ್ಯರಾಗಿರುವ ಸಮುದಾಯಗಳು ಕಸಿಯತೊಡಗಿವೆ. ಇದರಿಂದ ನಮ್ಮ ಜೀವನ ಹಾಳಾಗುತ್ತಿದೆ. ಹಾಗಾಗಿ ಒಳಮೀಸಲಾತಿಗೆ ಎ ಜೆ ಸದಾಶಿವ ವರದಿ ಜಾರಿ ಮಾಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ತುಂಗಾ ನದಿ ಮಲಿನಗೊಳ್ಳುತ್ತಿದ್ದರೂ ಪಾಲಿಕೆ ನಿರ್ಲಕ್ಷ್ಯ; ಎಎಪಿ ಆರೋಪ

ಈ ಸಂದರ್ಭದಲ್ಲಿ ಅಧ್ಯಕ್ಷ ಸಾವಕ್ಕನವರ್, ಉಪಾಧ್ಯಕ್ಷ ಚಂದ್ರಪ್ಪ ಎಚ್ ಎ, ಪ್ರಧಾನ ಕಾರ್ಯದರ್ಶಿ ಭಾನುಪ್ರಸಾದ್ ಬಿ ಎ, ಕಾರ್ಯದರ್ಶಿ ನಾಗಪ್ಪ ಎಂ ಕೆ, ಸಂಘಟನಾ ಕಾರ್ಯದರ್ಶಿ ಶಿವಕುಮಾರ್ ಮತ್ತು ಕೆ ಎನ್ ಅಶೋಕ್ ಕುಮಾರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...