ಶಿವಮೊಗ್ಗ | ಶೇ.60ರಷ್ಟು ಕನ್ನಡ ಫಲಕ ಅಳವಡಿಸಲು ಕರವೇ ಆಗ್ರಹ

Date:

ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಇಂದು (ಡಿ.29) ಶಿವಮೊಗ್ಗದಲ್ಲಿ ಪ್ರತಿಭಟನೆನಡೆಸಿ ಒಂದು ವಾರದೊಳಗೆ ಕನ್ನಡ ನಾಮ ಫಲಕ ಶೇಕಡಾ 60% ಹಾಕಿಲ್ಲವಾದಲ್ಲಿ ತಾವೇ ತೆರವು ಗೊಳಿಸುವುದಾಗಿ ಜಿಲ್ಲಾಧಿಕಾರಿಗಳಿಗೆ ಮೌನ ಪ್ರತಿಭಟನೆ ಮೂಲಕ ಮನವಿ ಸಲ್ಲಿಸಿದೆ.

ಒಂದು ವಾರದೊಳಗೆ ಕನ್ನಡ ನಾಮ ಫಲಕ ಶೇಕಡಾ 60% ಹಾಕಿಲ್ಲವಾದಲ್ಲಿ ನಾವೇ ತೆರುವುಗೊಳಿಸುತ್ತೇವೆ ಮತ್ತು ಯಾವದೇ ಕಾನೂನು ಕ್ರಮ ತೆಗೆದುಕೊಂಡರೂ ಎಲ್ಲದಕ್ಕೂ ನಾವು ತಯಾರಿದ್ದಿವೆ ಎಂದು ಕರವೇ ಜಿಲ್ಲಾ ಅಧ್ಯಕ್ಷ ಕಿರಣ್ ಕುಮಾರ್ ಎಚ್.ಎಸ್ ಎಚ್ಚರಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಜನೇವರಿ 05ರ ಒಳಗಾಗಿ ಎಲ್ಲಾ ಅಂಗಡಿ ಮುಂಗಟ್ಟುಗಳ ಮುಂಭಾಗ ಹಾಗೂ ಸಾರ್ವಜನಿಕ ಸ್ಥಳದಲ್ಲಿ ನಾಮಫಲಕಗಳು ಶೇ.60% ರಷ್ಟು ಕನ್ನಡ ಭಾಷೆಯಲ್ಲಿ ಇರತಕ್ಕದ್ದು. ಒಂದು ಪಕ್ಷ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದೆ ಇದ್ದಲ್ಲಿ ಅಂತಹ ನಾಮಫಲಕವನ್ನು ತೆರವುಗೊಳಿಸುತ್ತೇವೆ. ಇದಕ್ಕೆ ತಾವುಗಳು ಅವಕಾಶ ಕೊಡದೆ, ಈ ಕೂಡಲೇ ಅನ್ಯ ಭಾಷೆಯಲ್ಲಿ ಇರುವ ನಾಮಫಲಕಗಳನ್ನು ತೆರವುಗೊಳಿಸುವಂತೆ ವೇದಿಕೆ ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ಕನ್ನಡ ನಾಡಿನಲ್ಲಿ ಎಲ್ಲಾ ಧರ್ಮದ, ಎಲ್ಲಾ ಜಾತಿಯ, ಎಲ್ಲಾ ಪಂಗಡಗಳ ವಿವಿಧ ಸಂಸ್ಕೃತಿಯ ಜನರಿದ್ದು ನಾವೆಲ್ಲರೂ ಕೂಡ ಅಣ್ಣ-ತಮ್ಮಂದಿರ ಹಾಗೆ ಬದುಕುತ್ತಿದ್ದು, ಹೊರಗಿನಿಂದ ಬಂದಂತಹವರಿಗೆ ನಮ್ಮ ನೆಲ, ಶಾಂತಿಯ ನೆಲೆ ಕಲ್ಪಿಸಿದ್ದು ಅವರ ವ್ಯಾಪಾರ ವಹಿವಾಟುಗಳಿಗೆ ನಮ್ಮ ಅಭ್ಯಂತರವಿರುವುದಿಲ್ಲ. ಅವರವರ ಭಾಷೆ, ಅವರವರ ಸಂಸ್ಕೃತಿ, ಅವರವರ ಮನೆಯಲ್ಲೇ ಇದ್ದರೆ ಚಂದ.

ಈ ನೆಲದಲ್ಲಿ ಬದುಕುತ್ತಿರುವವರೆಲ್ಲರೂ ತಮ್ಮ ವ್ಯಾಪಾರ ವಹಿವಾಟುಗಳನ್ನು ಕನ್ನಡ ಭಾಷೆಯಲ್ಲೇ ಮಾಡಬೇಕೆಂಬುದು ನಮ್ಮ ಆಗ್ರಹವೆಂದರು.

ನೀವು ಇಲ್ಲಿ ಬದುಕಲು, ವ್ಯಾಪಾರ ಮಾಡಲು ನಮ್ಮ ಅಭ್ಯಂತರವೇನಿಲ್ಲ. ಆದರೆ, ತಾವುಗಳು ಕಡ್ಡಾಯವಾಗಿ ತಮ್ಮ ಅಂಗಡಿಗಳಿಗೆ, ಕಛೇರಿಗಳಿಗೆ ಕನ್ನಡ ನಾಮಫಲಕಗಳನ್ನು ಅಳವಡಿಸುವುದಲ್ಲದೆ ಕನ್ನಡದಲ್ಲೇ ಮಾತನಾಡುವುದು, ವ್ಯವಹಾರ ಮಾಡುವುದು ಮಾಡಬೇಕೆಂಬುದು ನಮ್ಮ ಸಂಘಟನೆಯ ಧ್ವನಿಯಾಗಿದೆ ಎಂದರು.

ಈ ನೆಲದಲ್ಲಿ ಕನ್ನಡ ಭಾಷೆಯ ಉಳಿವಿಗಾಗಿ ಕನ್ನಡವನ್ನು ನಾಮಫಲಕಗಳಲ್ಲಿ ಶೇ.60% ರಷ್ಟು ಬಳಸಬೇಕೆಂಬ ಕಾನೂನು ಇದ್ದರೂ ಸಹ ಈ ಕಾನೂನನ್ನು ಗಾಳಿಗೆ ತೂರಿ ಇಂಗ್ಲಿಷ್, ಇತರೆ ಭಾಷೆಗಳನ್ನು ಬಹಿರಂಗವಾಗಿ ನಾಮಫಲಕಗಳಲ್ಲಿ ಹಾಕಿರುತ್ತಾರೆ. ಆದರೂ ಸಹ ಯಾವುದೇ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕಾನೂನು ಕೈಗೊಳ್ಳದೇ ಇರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದರು.

ಅನ್ಯ ಭಾಷೆಯಿಂದ ಆಕ್ರಮಣ, ದುರ್ಬಲ ಕಾನೂನು, ಆಂಗ್ಲ ಭಾಷೆಯ ವ್ಯಾಮೋಹದಿಂದ ನಮ್ಮ ನಾಡು, ನೆಲ, ಭಾಷೆ, ಸಂಸ್ಕೃತಿ ಎಲ್ಲವೂ ಅಧೋಗತಿಗೆ ಹೋಗುತ್ತಿದ್ದು ಇದರ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ನಗರಾಧ್ಯಕ್ಷ ಪ್ರಫುಲ್ಚಂದ್ರ  ಎಚ್, ಮಹಿಳಾ ನಗರಾಧ್ಯಕ್ಷರಾದ ಕವಿತಾ ಮತ್ತಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...