ಶಿವಮೊಗ್ಗ | ಸರ್ಕಾರದ ವಿರುದ್ಧ ಜೆಡಿಎಸ್ ಮುಖಂಡ ಕೆಬಿಪಿ ವಾಗ್ದಾಳಿ

Date:

ಸರ್ಕಾರದಲ್ಲಿ ತನ್ನ ಭಾಗ್ಯಗಳನ್ನ ಪೂರ್ತಿ ಮಾಡಲು ಹಣವಿಲ್ಲದ ಕಾರಣ ಪೊಲೀಸರಿಗೆ ಟಾರ್ಗೆಟ್ ನೀಡಿದೆ. ಜನರಿಂದ ಹಣ ವಸೂಲಿ ಮಾಡಲು ಪೊಲೀಸರನ್ನು ಬಿಟ್ಟಿದ್ದಾರೆಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಕೆ ಬಿ ಪ್ರಸನ್ನ ಕುಮಾರ್ ಆರೋಪಿಸಿದ್ದಾರೆ. ಸರ್ಕಾರದ ವಿರುದಧ ನವೆಂಬರ್‌ 22ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸೋಮವಾರ ಮಾಜಿ ಶಾಸಕ ಕಡಿದಾಲ್ ಗೋಪಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. “ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಹಿಂದೆ ಸೌಲತ್ತುಗಳನ್ನು ನೀಡಿದ್ದು, ಇದೀಗ ಸರ್ಕಾರ ಇದನ್ನೂ ದಂಧೆಯನ್ನಾಗಿ ಮಾಡಿಕೊಂಡಿದೆ” ಎಂದು ಟೀಕಿಸಿದರು.

“ಸಾರ್ವಜನಿಕರನ್ನು ಬದಕಲು ಬಿಡಿ, ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳಬೇಡಿ. ಸರ್ಕಾರಕ್ಕೆ ಎಲ್ಲೋ ಒಂದು ಭಯ ಕಾಡುತ್ತಿರುವ ಕಾರಣ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದಾರೆ. ಪ್ರಮುಖವಾಗಿ ತೀವ್ರ ಬರಗಾಲ ರೈತರು ಮತ್ತು ಜನರನ್ನು ಕಿತ್ತು ತಿನ್ನುತ್ತಿದ್ದು, ಇಂತಹ ಸಮಯದಲ್ಲಿ ಸರ್ಕಾರದ ಕೆಲಸಗಳು ಕೇವಲ ಪ್ರೆಸ್ ನೋಟ್‌ನಲ್ಲಿ ಮಾತ್ರ ಕಾಣ ಸಿಗುತ್ತಿವೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಮೊದಲು ರೈತರಿಗೆ ವಿದ್ಯುತ್ ಸಂಪರ್ಕ ಉಚಿತವಾಗಿತ್ತು. ಆದರೆ ಈಗ ರೈತರು ಇದಕ್ಕಾಗಿ ₹3.5 ರಿಂದ ₹4 ಲಕ್ಷದವರೆಗೂ ಖರ್ಚು ಮಾಡಬೇಕಾಗಿದೆ. ಇದು ಬರಗಾಲದ ಸಮಯದಲ್ಲಿ ರೈತರಿಗೆ ಸರ್ಕಾರ ಕೊಟ್ಟಿರುವ ಕೊಡುಗೆ ಆಗಿದೆ” ಎಂದು ವ್ಯಂಗ್ಯವಾಡಿದ್ದು, ಇದಕ್ಕೆ ಸರ್ಕಾರ ನೀಡುತ್ತಿರುವ ಸಬೂಬು ಏನೆಂದರೆ ʼಮುಂದಿನ ದಿನಗಳಲ್ಲಿ ಸೋಲಾರ್ ವ್ಯವಸ್ಥೆ ಮಾಡುವವರೆಗೆ ಇದು ಇರತ್ತೆʼ ಎನ್ನುತ್ತಿದೆ” ಎಂದರು.

ಈ ಸಂದರ್ಭದಲ್ಲಿ ದೀಪಕ್ ಸಿಂಗ್, ಗೋವಿಂದಪ್ಪ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...