ಶಿವಮೊಗ್ಗ | ಭಾರತ್‌ ಜೋಡೊ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ ಖಂಡಿಸಿ ಪ್ರತಿಭಟನೆ

Date:

ಅಸ್ಸಾಂನಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್‌ ಜೋಡೊ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಿಂದ ಮಹಾವೀರ ವೃತ್ತವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದೆ.

ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಅಸ್ಸಾಂ ರಾಜ್ಯದಲ್ಲಿ ಸಾಗುತ್ತಿದ್ದ ಸಂದರ್ಭದಲ್ಲಿ ಬಿಜೆಪಿಯ ಕಾರ್ಯಕರ್ತರು ರಾಹುಲ್ ಗಾಂಧಿಯವರು ಕುಳಿತಿದ್ದ ಬಸ್ಸನ್ನು ಅಡ್ಡಗಟ್ಟಿ ರಾಹುಲ್ ಗಾಂಧಿ ಅವರ ಮೇಲೆ ದಾಳಿ ಮಾಡಲು ಯತ್ನಿಸಿದ್ದನ್ನು ಪ್ರತಿಭಟನಾಕಾರರು ಖಂಡಿಸಿ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು.

ಈ ಸಂದರ್ಭದಲ್ಲಿ ಶಿವಮೊಗ್ಗ ವಿಧಾನಸಭಾ ಅಭ್ಯರ್ಥಿಯಾಗಿದ್ದ ಎಚ್.ಸಿ. ಯೋಗೇಶ್ ಮಾತನಾಡಿ, 2014ರ ನಂತರ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ನಾವೆಲ್ಲರೂ ಹೋರಾಟ ಮಾಡಬೇಕಾಗಿದೆ. ಮಾತನಾಡವ ಸ್ವಾತಂತ್ರ್ಯಕ್ಕೆ, ನಮ್ಮ ಕಾಲ ಮೇಲೆ ನಾವು ನಿಂತುಕೊಳ್ಳುವುದಕ್ಕೆ ಸ್ವಾತಂತ್ರ್ಯ, ಉದ್ಯೋಗಕ್ಕಾಗಿ ಸ್ವಾತಂತ್ರ್ಯ, ಹೋರಾಟ ಮಾಡುವುದಕ್ಕೆ ಸ್ವಾತಂತ್ರ್ಯ ಹೋರಾಟ ಮಾಡಬೇಕಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾಕೆಂದರೆ, ಮೊನ್ನೆ ನಡೆದ ರಾಹುಲ್ ಗಾಂಧಿ ನ್ಯಾಯ ಯಾತ್ರೆಯಲ್ಲಿ ಅಸ್ಸಾಂನಲ್ಲಿ ನಡೆದಿರುವಂತ ಘಟನೆ. ಅಸ್ಸಾಂ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಕೆಲವು ಕಿಡಿಗೇಡಿಗಳು ರಾಹುಲ್ ಗಾಂಧಿ ಯಾತ್ರೆಗೆ ಅಡ್ಡಿಪಡಿಸಿದಲ್ಲದೆ, ಮೋದಿ… ಮೋದಿ… ಎಂದು ಕೂಗಿದಲ್ಲದೆ, ರಾಹುಲ್ ಗಾಂಧಿ ಅವರಿಗೆ ದೇವಸ್ಥಾನಗಳಲ್ಲಿ ನಿಬಂದನೇ ವಿಧಿಸಿದ್ದು ಯಾಕೆ? ರಾಹುಲ್ ಗಾಂಧಿ ದೇವಸ್ಥಾನಕ್ಕೆ ಹೋಗಬಾರದಾ? ಅಸ್ಸಾಂ ಅಲ್ಲಿ ತಿರುಗಾಡಬಾರದ? ಎಂದು ಪ್ರಶ್ನಿಸಿದರು. ಹಾಗಾಗಿ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮ ಮಾಡಬೇಕೇನೋ ಎಂದು ಈ ಸಂದರ್ಭದಲ್ಲಿ ಅನಿಸುತ್ತಿದೆ ಎಂದರು.

ಹಾಗೆ ಅಸ್ಸಾಂ ಮುಖ್ಯಮಂತ್ರಿಗಳು ಜವಾಬ್ದಾರಿ ಸ್ಥಾನದಲ್ಲಿ ಇರುವುದರಿಂದ, ಆ ಪೋಲಿ ಪಟಿಂಗರಿಗೆ ಹಾಗೂ ಆ ಕಿಡಿಗೇಡಿಗಳಿಗೆ ಯಾವ ರೀತಿ ಒಬ್ಬ ನಾಯಕ ಬಂದಾಗ ವರ್ತಿಸಬೇಕು ಎನ್ನುವ ಸ್ವಲ್ಪ ವಿದ್ಯೆ ಹೇಳಿಕೊಡಬೇಕು ಎಂದರು.

ಶಿವಮೊಗ್ಗ ಗ್ರಾಮಾಂತರ ನಿಕಟಪೂರ್ವ ಅಭ್ಯರ್ಥಿಯಾದ ಶ್ರೀನಿವಾಸ್ ಕರಿಯಣ್ಣ ಮಾತನಾಡಿ, ನಮಗೆ ಸ್ವಾತಂತ್ರ್ಯ ಇಲ್ಲವೇ ಅನಿಸುತ್ತಿದೆ. ಯಾಕೆಂದರೆ, ರಾಹುಲ್ ಗಾಂಧಿ ಅವರನ್ನು ತಡೆದು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಮೇಲೆ ಹಲ್ಲೆ ಮಾಡಿರುವದು ಖಂಡನೀಯ ಎಂದರು.

ರಾಹುಲ್ ಗಾಂಧಿ ಹಿಂದೂ ಅಲ್ಲವಾ ಅವರು ದೇವಸ್ಥಾನಕ್ಕೆ ಹೋಗಬಾರದು. ನಾವು ಕೂಡ ರಾಮನ ಭಕ್ತರು ಅಲ್ಲವಾ? ನೆನ್ನೆ ಸಿದ್ದರಾಮಯ್ಯ ಅವರೇ ಜೈ ಶ್ರೀರಾಮ್ ಎಂದಿದ್ದಾರೆ. ಹಾಗಾಗಿ ಎಮೋಷನಲ್ ಬ್ಲಾಕ್ಮೇಲೆ ಹಾಗೂ ವಿಷ ಬೀಜವನ್ನು ಮೋದಿ ಬಿತ್ತುತ್ತಿದ್ದಾರೆ. ನಾವೆಲ್ಲರೂ ಒಂದಾಗಿ ಬದುಕಿ ಬಾಳಬೇಕು ಎಂದರು.

ಈ ಸಂದರ್ಭದಲ್ಲಿ ಶಿವಮೊಗ್ಗ  ಕಾಂಗ್ರೆಸ್ ವಕ್ತಾರ ರಮೇಶ್ ಹೆಗ್ಡೆ, ಚೇತನ್, ಮಧುಸೂದನ್, ಸುಡೂರ್ ಶಿವಣ್ಣ, ಸಯೇದ್ ಜಮೀಲ್, ಪುಷ್ಪಲತಾ, ಸೌಗಾಂಧಿಕ, ಸುವರ್ಣ ನಾಗರಾಜ್, ವಿಶ್ವನಾಥ್ ಕಾಶಿ ಇನ್ನು ಹಲವಾರು ಮುಖಂಡರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...