ಶಿವಮೊಗ್ಗ | ಡಿ.6ರಿಂದ 10ರವರೆಗೆ ದೇಶಿ ಮೇಳ ಆಯೋಜಿಸಿದ ಸ್ವದೇಶಿ ಜಾಗರಣ ಮಂಚ್

Date:

ಶಿವಮೊಗ್ಗ ನಗರದಲ್ಲಿರುವ ಫ್ರೀಡಂ ಪಾರ್ಕ್‌ನಲ್ಲಿ ಇದೆ ಮೊದಲ ಬಾರಿಗೆ ಬೃಹತ್‌ ಸ್ವದೇಶಿ ಮೇಳ ಆಯೋಜಿಸಲಾಗಿದೆ. ಡಿ.6ರಿಂದ 10ರವರೆಗೆ ಈ ಮೇಳ ನಡೆಯಲಿದೆ. ಸ್ವದೇಶಿ ಜಾಗರಣ ಮಂಚ್‌ ದೇಶೀಯ ವಸ್ತುಗಳ ಪರಿಚಯ ಮತು ಸ್ವದೇಶಿ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸಲು ಈ ಮೇಳ ಹಮ್ಮಿಕೊಂಡಿದ್ದು, ಸಾರ್ವಜನಿಕರಿಗೆ ಉಚಿತ ಪ್ರವೇಶ ಇರಲಿದೆ.

ಡಿಸೆಂಬರ್‌ 6ರಂದು ಸಂಜೆ, 6.30ಕ್ಕೆ ಬೃಹತ್‌ ಮೇಳದ ಉದ್ಘಾಟನೆಯನ್ನು ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ನೆರವೇರಿಸಲಿದ್ದಾರೆ. ತರಳಬಾಳು ಜಗದ್ಗುರು ಶ್ರೀ 1108 ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲಾಧಿಕಾರಿ ಡಾ. ಆರ್‌. ಸೆಲ್ವಮಣಿ ಭಾಗವಹಿಸುವರು. ಅರ್ಥಶಾಸ್ತ್ರಜ್ಞ ಪ್ರೊ. ಬಿ.ಎಂ. ಕುಮಾರಸ್ವಾಮಿ ಮುಖ್ಯ ಭಾಷಣ ಮಾಡಲಿದ್ದಾರೆ.

ಈ ಮೇಳದಲ್ಲಿ 250ಕ್ಕೂ ಹೆಚ್ಚು ಸ್ವದೇಶಿ ಮಳಿಗೆಗಳು ಭಾಗವಹಿಸಲಿವೆ. ವೈವಿಧ್ಯಮಯ ದೇಶೀಯ ಆಹಾರಗಳು, ದೇಶೀಯ ಕ್ರೀಡೆಗಳು, ಜಾನಪದ ಕಲಾ ವೈಭವ, ಯಕ್ಷಗಾನ, ಬಾನ್ಸುರಿ ವಾದನ, ನೃತ್ಯ ರೂಪಕ, ಜಾದೂ ಪ್ರದರ್ಶನ ಸೇರಿದಂತೆ 16 ಕ್ಕೂ ಹೆಚ್ಚು ಶಿಬಿರ ಹಾಗೂ ತರಬೇತಿ ಕಾರ್ಯಾಗಾರಗಳು ನಡೆಯಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಸೆಂಬರ್‌ 6ರ ರಾತ್ರಿ 8.30ಕ್ಕೆ ಜಾನಪದ ಕಲಾ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಭದ್ರಾವತಿ ತಾಲೂಕು ಎಮ್ಮೆಹಟ್ಟಿಯ ಶ್ರೀ ಗಜಾನನ ಡೊಳ್ಳು ಮತ್ತು ಸಾಂಸ್ಕೃತಿಕ ಕಲಾ ತಂಡ ಹಾಗೂ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾನಪದ ಕಲಾ ತಂಡ, ವೀರಭದ್ರ ಕುಣಿತ ಮತ್ತು ವೀರಗಾಸೆ ಪ್ರದರ್ಶನ ಮಾಡಲಿದೆ.

ಆಹಾರ ಪ್ರಿಯರಿಗಾಗಿ ವಿವಿಧ ಖಾದ್ಯ ಸವಿಯಲು ಅವಕಾಶವಿದೆ. ಮೇಲುಕೋಟೆ ಪುಳಿಯೋಗರೆ, ಮುಳುಬಾಗಿಲು ದೋಸೆ, ದಾವಣಗೆರೆ ಬೆಣ್ಣೆದೋಸೆ, ಸಾವಯವ ಕಬ್ಬಿನಹಾಲು, ಅಡಕೆ ಐಸ್‌ ಕ್ರೀಂ, ಬಂಗಾರಪೇಟೆ ಚಾಟ್ಸ್, ಹುಬ್ಬಳ್ಳಿಯ ಗಿರಮಿಟ್‌, ಸಿರಿಧಾನ್ಯಗಳ ರೊಟ್ಟಿ (ನವಣೆ, ಸಜ್ಜೆ, ರಾಗಿ, ಜೋಳ ,ಅಕ್ಕಿ ರೊಟ್ಟಿ) ಸೇರಿದಂತೆ ಕವಳಿ, ಕಂಚಿ, ಮಾವು, ನಿಂಬೆ, ಮೆಣಸಿನ ಹಿಂಡಿ, ಮೆಂತ್ಯ ಹಿಂಡಿ, ಅಗಸಿ, ಶೇಂಗಾ, ಗುರೆಳ್ಳು ಚಟ್ನಿ ಪುಡಿ ಹೀಗೆ ನೂರಾರು ರೀತಿಯ ತರೇವಾರಿ ಆಹಾರ ಪದಾರ್ಥ, ತಿಂಡಿ, ತಿನಿಸು ಲಭ್ಯವಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...