ಶಿವಮೊಗ್ಗ | ವ್ಯಾಪಕವಾಗಿದೆ ಕಡಿಮೆ ಕೂಲಿಗೆ ಕಾರ್ಮಿಕರನ್ನು ದುಡಿಸುವ ದಂಧೆ

Date:

ಕೆಲಸ ಹುಡುಕಿ ಬರುವ ಕೂಲಿ ಕಾರ್ಮಿಕರನ್ನು ಕಡಿಮೆ ಕೂಲಿಗೆ ದುಡಿಸಿಕೊಳ್ಳುವ ದಂಧೆ ಮಲೆನಾಡಿನಲ್ಲಿ ವ್ಯಾಪಕವಾಗಿದೆ. ಕೂಲಿಯಾಳುಗಳ ಅಸಹಾಯಕತೆಯನ್ನು ಬಂಡವಾಳವಾಗಿಸಿಕೊಂಡು ಅವರನ್ನು ವಂಚಿಸಲಾಗುತ್ತಿದೆ.

ಮನೆ, ಜಮೀನು, ಹೋಟೆಲ್‌ ಹಾಗೂ ಇತರೆ ಉದ್ಯಮಗಳಲ್ಲಿ ಬೇಕಾಬಿಟ್ಟಿಯಾಗಿ ಕಾರ್ಮಿಕರಿಂದ ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ. ಜಮೀನ್ದಾರರ ಮನೆಗಳಲ್ಲಿ ಹೀಗೆ ಬೆವರು ಹರಿಸಿ ದುಡಿಯುತ್ತಿರುವವರಿಗೆ ಅವರ ಶ್ರಮಕ್ಕೆ ತಕ್ಕ ಕೂಲಿ ಸಿಗುತ್ತಿಲ್ಲ ಎಂದು ತಿಳಿದುಬಂದಿದೆ.

ಬಸ್‌, ರೈಲು ನಿಲ್ದಾಣ ಸೇರಿದಂತೆ ಇತರೆ ಸ್ಥಳಗಳಲ್ಲಿ ಅಸಹಾಯಕ ಸ್ಥಿತಿಯಲ್ಲಿರುವ ವ್ಯಕ್ತಿಗಳನ್ನು ಕರೆಯೊಯ್ದು ಸ್ಥಳೀಯ ಮೇಸ್ತ್ರಿ ಬಳಿ ವ್ಯವಹಾರ ಕುದುರಿಸಿ, ಬಿಟ್ಟು ಹೋಗಲಾಗುತ್ತದೆ. ಈಚೆಗೆ ಗುತ್ತಿ ಎಡೇಹಳ್ಳಿ ಗ್ರಾಮದಲ್ಲಿ 19 ಕೂಲಿ ಕಾರ್ಮಿಕರನ್ನು ಬಂಧಮುಕ್ತಗೊಳಿಸಿದ ಪ್ರಕರಣ ಇದಕ್ಕೆ ತಾಜಾ ಉದಾಹರಣೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಟ್ಟೆ ತುಂಬ ಊಟ, ಹೆಂಡ ನೀಡಿ ಕಾರ್ಮಿಕರನ್ನು ಕೆಲಸಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಗುತ್ತಿಎಡೇಹಳ್ಳಿ ಗ್ರಾಮದಲ್ಲಿದ್ದ 19 ಕೂಲಿ ಕಾರ್ಮಿಕರೂ 40 ವರ್ಷ ಮೇಲ್ಪಟ್ಟ ಪುರುಷರಾಗಿದ್ದಾರೆ. ಅವರಲ್ಲಿ, ಹೆಚ್ಚಿನವರು ದಾವಣಗೆರೆ, ಚಿಕ್ಕಮಗಳೂರು, ಶಿಕಾರಿಪುರ, ಹಾವೇರಿ, ಭದ್ರಾವತಿ, ಹೊನ್ನಾಳಿಯವಾಗಿದ್ದಾರೆ. ಅಲ್ಲದೆ, ಅವರೊಂದಿಗೆ ಬಿಹಾರ, ಛತ್ತೀಸಗಢ, ಉತ್ತರಪ್ರದೇಶ, ಜಾರ್ಖಂಡ್ ರಾಜ್ಯದವರೂ ಇದ್ದಾರೆ.

ಹಿಂದಿ ಹೊರತಾಗಿ ಬೇರೆ ಭಾಷೆ ತಿಳಿಯದ ಹೊರ ರಾಜ್ಯದವರು ತಮ್ಮ ಕುಟುಂಬ ವರ್ಗದವರನ್ನು ಸಂಪರ್ಕಿಸದಂತೆ ಮೊಬೈಲ್‌ ಫೋನ್‌ ಕೂಡ ಕಿತ್ತುಕೊಳ್ಳಲಾಗುತ್ತದೆ ಎಂದು ನೊಂದವರು ಮಾದ್ಯಮದವರಿಗೆ ಮಾಹಿತಿ ನೀಡಿದ್ದಾರೆ.

ತೀರ್ಥಹಳ್ಳಿ ತಾಲೂಕಿನ ಅನೇಕ ಭಾಗಗಳಲ್ಲಿ ಜಮೀನುಗಳಲ್ಲಿ ದುಡಿಯುವ ಹೊರ ಜಿಲ್ಲೆ, ರಾಜ್ಯಗಳ ದೊಡ್ಡ ಶ್ರಮಿಕ ವರ್ಗವೇ ಇದೆ. ಮನೆ ಕೆಲಸದಿಂದ ಹಿಡಿದು ತೋಟದ ಬೇಸಾಯ, ಗದ್ದೆನಾಟಿ, ಕೊಯ್ಲು, ಗಾರೆ ಕೆಲಸ, ಹೋಟೆಲ್‌, ಲಾಡ್ಜ್‌, ಲೈಟಿಂಗ್‌, ಸೌಂಡ್ಸ್‌, ಜಾನುವಾರು ಸಾಕಾಣಿಕೆ, ತೋಟದ ನಿರ್ವಹಣೆ, ಬೇಕರಿ, ಇಂಡಸ್ಟ್ರೀ, ಕಬ್ಬಿಣ, ಸಿಮೆಂಟ್‌ ಅಂಗಡಿಗಳಲ್ಲಿ ದಿನಗೂಲಿಗೆ ಕೆಲಸ ಮಾಡುತ್ತಿದ್ದಾರೆ. ಕಡಿಮೆ ಕೂಲಿಗೆ ಸಿಗುತ್ತಾರೆ ಎಂಬ ಕಾರಣಕ್ಕೆ ಕಾರ್ಮಿಕರ ಹಿನ್ನೆಲೆ, ದಾಖಲೆಗಳನ್ನು ಕೂಡಾ ಪರಿಶೀಲನೆ ಮಾಡದೇ ಕೆಲಸ ಮಾಡಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಾರೆ.

ಗ್ರಾಮೀಣ ಹಾಗೂ ಪಟ್ಟಣದಲ್ಲಿ ದಿನಗೂಲಿಗೆ ಬರುವ ಅನ್ಯ ರಾಜ್ಯ, ಜಿಲ್ಲೆಗಳ ಕಾರ್ಮಿಕರಿಗೆ ಗುರುತಿನ ಚೀಟಿ ನೀಡುವುದಿಲ್ಲ. ಅನೇಕ ಕಡೆಗಳಲ್ಲಿ ಕಾರ್ಮಿಕರ ಮೂಲವನ್ನು ಬಚ್ಚಿಡಲಾಗುತ್ತದೆ. ಗ್ರಾಮೀಣ ಭಾಗದಲ್ಲಿ ಕೂಲಿಯಾಳುಗಳಿಗೆ ಹೆಂಡದ ಆಮಿಷ ತೋರಿಸಿ ಹೆಚ್ಚು ಕೆಲಸ ಮಾಡಿಸಿಕೊಳ್ಳಲಾಗುತ್ತದೆ ಎನ್ನುತ್ತಿದ್ದಾರೆ ಜಿಲ್ಲೆಯ ಸಾರ್ವಜನಿಕರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...