ಶಿವಮೊಗ್ಗ | ಆಗುಂಬೆ ಸುರಂಗ ಯೋಜನೆ ವಿರೋಧಿಸಿಬ್ಯಾನರ್: ಸಾಮಾಜಿಕ ಜಾಲತಾಣದಲ್ಲಿ ಚರ್ಚೆ

Date:

“ಆಗುಂಬೆ ನರಕವಾಗಿಸುವ ಸುರಂಗ ಯೋಜನೆಗೆ ನಮ್ಮ ಧಿಕ್ಕಾರ, ಸಮಸ್ತ ಆಗುಂಬೆ ಗ್ರಾಮಸ್ಥರು” ಎನ್ನುವ ಬ್ಯಾನರ್ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಕಾಣಸಿಗುತ್ತವೆ. ಪಶ್ಚಿಮ ಘಟ್ಟದ ಆಗುಂಬೆಯಲ್ಲಿ ಸುರಂಗ ಮಾರ್ಗ ಮಾಡಬೇಕು ಎಂದು ಒತ್ತಾಯಿಸುತ್ತಿರುವ ಬಗ್ಗೆ ಪರಿಸರ ಪ್ರೇಮಿಗಳು ಹಾಗೂ ಗ್ರಾಮಸ್ಥರು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚಿಸುವ ಮೂಲಕ ಸುರಂಗದ ಕಾವು ಹೆಚ್ಚಾಗುತ್ತಿದೆ.

ಬ್ಯಾನರ್ ಪೋಟೋ ಹಾಕಿ ಪ್ರತಿಕ್ರಿಯಿಸಿರುವವರೊಬ್ಬರು “ಹೀಗೊಂದು ಬ್ಯಾನರ್ ಅನ್ನು ಆಗುಂಬೆ ಗ್ರಾಮಸ್ಥರು ಹಾಕಿದ್ದಾರೆ ಎಂಬ ಮಾಹಿತಿ ಲಭಿಸಿದೆ.‌ ಆಗುಂಬೆಯನ್ನು ಉಳಿಸುವುದು ಒಂದು ಪ್ರದೇಶದ ವಿಚಾರವಲ್ಲ ನಮ್ಮ ಮುಂದಿನ ಪೀಳಿಗೆಯ ಭವಿಷ್ಯದ ಪ್ರಶ್ನೆ” ಎಂಬ ಆಗುಂಬೆ ಜನರ ಪ್ರಬುದ್ಧತೆಯನ್ನು ನಾವೆಲ್ಲರೂ ಮೆಚ್ಚಬೇಕು ಮತ್ತು ಅಭಿನಂದಿಸಬೇಕು ಎಂದು ಮೆಚ್ಚುಗೆ ಸೂಚಿಸಿದ್ದಾರೆ.‌ ಇಂತಥ ವಿವೇಕ ನಮ್ಮ ಜನಪ್ರತಿನಿಧಿಗಳಿಗೆ ಬರಲಿ” ಎಂದು ಆಶಿಸಿದ್ದಾರೆ.

ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ #SaveAgumbe, #StopAgumbeTunnelProject ಎನ್ನುವ ಹ್ಯಾಶ್ ಟ್ಯಾಗ್ ಬಳಸಿ ಅಭಿಯಾನ ಕೂಡ ಆರಂಭಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಪ್ರಶ್ನಿಸಿರುವ ಕೆಲವರು ಆಗುಂಬೆ ಸುತ್ತಮುತ್ತ ಬೋರ್ ವೆಲ್ ಮತ್ತು ತೋಟ ಮಾಡೋದಕ್ಕೆ ಗುಡ್ಡ ಅಗೆದರೆ ಗುಡ್ಡ ಕುಸಿಯುತ್ತೆ. ಸುರಂಗ ಬೇಡವೆಂದರೆ 24 ಗಂಟೆ ಬಸ್ಸಿನ ವ್ಯವಸ್ಥೆ ಮಾಡಿ. ಅದು ಆಗಲ್ಲ ಅಂದ ಮೇಲೆ ಗುಡ್ಡ ಕುಸಿತ ಅರಣ್ಯ ನಾಶ, ಪ್ರಾಣಿಗಳಿಗೆ ತೊಂದರೆ ಇಂಥ ಕಥೆಗಳನ್ನು ಹೇಳ್ಬೇಡಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಾಜೀವ್ ಗಾಂಧಿ ವಸತಿ ಪ್ರೌಢಶಾಲೆ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

“ಉಡುಪಿಯಿಂದ ಸಂಜೆ 6.50 ರ ನಂತರ ಆಗುಂಬೆ ತೀರ್ಥಹಳ್ಳಿ ಬರುವುದಾದರೆ 130 ರೂಪಾಯಿ ಜಾಸ್ತಿ ಕೊಟ್ಟು, ನಾಲ್ಕ್ ಗಂಟೆ ಜಾಸ್ತಿ ಪ್ರಯಾಣ ಮಾಡಿ ಬರಬೇಕು. ಈ ಸಮಸ್ಯೆಯಿಂದ ಅಪರೂಪಕ್ಕೆ ಪ್ರಯಾಣ ಮಾಡೋ ನಮಗೆ ಸಮಸ್ಯೆಯಾಗುತ್ತೆ ಎಂದರೆ, ಆಗುಂಬೆ ಸುತ್ತ ಮುತ್ತ ವಾಸಿಸುವ ಜನಗಳ ಸಮಸ್ಯೆ ಸ್ವಲ್ಪ ಗಮನಿಸಬೇಕು, ಅದಕ್ಕೆ ಪರಿಹಾರ ದೊರಕಿಸಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...