ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ.ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ. ಮತ್ತು ಬಿಸಲ್ ತರಬೇತಿದಾರರ ಕಂಪನಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟ ಭದ್ರಾವತಿ ಘಟಕದ ಸಂಯುಕ್ತ ಆಶ್ರಯದಲ್ಲಿ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಷೀನ್ ಹಾಗೂ ಮಷಿನ್ ಹೆಲ್ಪರ್ ರವರಿಗೆ ತರಬೇತಿ ಶಿಬಿರ. ಹಾಗೂ ಅಭಿನಂದನಾ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟ ಕೇಂದ್ರ ಕಾರ್ಯಾಲಯದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕೆ ಆರ್ ಐ ಡಿ ಎಲ್ ಅಧ್ಯಕ್ಷ, ಶಾಸಕ ಬಿ ಕೆ ಸಂಗಮೇಶ್ವರ “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಆರ್ಥಿಕವಾಗಿ ಅನುಕೂಲವಾಗಲು ಕಾರ್ಮಿಕ ಸಚಿವರ ಜೊತೆ ಮಾತನಾಡಿ ವಿಶೇಷವಾಗಿ ವೃತ್ತಿಪರ ಕಿಟ್ ಗಳು ಹಾಗೂ ವಿವಿಧ ಸೌಲಭ್ಯಗಳನ್ನು ಕೊಡಿಸಲಾಗಿದೆ. ಹಾಗೂ ಕಾರ್ಮಿಕರು ತಮ್ಮ ನೊಂದಾಯಿತ ಕಾರ್ಮಿಕರ ಗುರುತಿನ ಚೀಟಿಯನ್ನು ಸಮಯಕ್ಕೆ ಸರಿಯಾಗಿ ನವೀಕರಣಗೊಳಿಸಿ ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಕಾರ್ಮಿಕರ ಪರವಾಗಿ ಕಾನೂನಾತ್ಮಕ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ತಾವು ಕೂಡ ಸಕ್ರಿಯರಾಗಬೇಕು. ಯಾವುದೇ ಕುಂದುಕೊರತೆ ಹಾಗೂ ನಿಮ್ಮ ಕಷ್ಟಕಾಲಗಳಲ್ಲಿ ನಾವು ಜೊತೆಗಿರುತ್ತೇವೆ” ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ವಿನೋದ್ “ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಈಗಾಗಲೇ ನೊಂದಾಯಿತ ಕಾರ್ಮಿಕರಿಗೆ ವಿಶೇಷ ಯೋಜನೆಗಳು ವೃತ್ತಿಪರ ವೃತ್ತಿಗೆ ಅನುಗುಣವಾಗಿ ಕಾರ್ಮಿಕರ ಪರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಹಾಗೂ ನಮ್ಮ ಒಕ್ಕೂಟದ ಹೋರಾಟಗಳಿಗೆ ಸ್ಪಂದಿಸಿ ಅಪಘಾತ ಪರಿಹಾರ ಮೊತ್ತವನ್ನು 5 ಲಕ್ಷದಿಂದ 8 ಲಕ್ಷಕ್ಕೆ ಹೆಚ್ಚಿಸಿ ಹಾಗೂ ಅನುಗ್ರಹ ರಾಶಿ ಅಂತ್ಯಕ್ರಿಯೆ ವೆಚ್ಚ ವನ್ನು 75ಸಾವಿರ ರೂಗಳಿಂದ ಒಂದು ಲಕ್ಷ ಐವತ್ತು ಸಾವಿರವರೆಗೆ ಕರ್ನಾಟಕ ಸರ್ಕಾರ ಏರಿಕೆ ಮಾಡಿದೆ” ಎಂದು ಅಭಿನಂದನೆ ಸಲ್ಲಿಸಿದರು.
ತರಬೇತಿಯಲ್ಲಿ ಪೂರ್ವ ಕಲಿಕೆಯ ಮಾನ್ಯತೆ ಮತ್ತು ಸೇತುಬಂಧ ತರಬೇತಿ ಶಿಬಿರವನ್ನು ಹತ್ತು ದಿನಗಳ ಕಾಲ ಹಮ್ಮಿಕೊಂಡಿದ್ದು ಈ ದಿವಸ ಈ ಶಿಬಿರವು ಯಶಸ್ವಿಯಾಗಿ ಪೂರ್ಣಗೊಂಡಿದ್ದು ಇದರ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಮಿಕರ ಸೌಲಭ್ಯಗಳ ಮಾಹಿತಿ ತಿಳಿಸಿಕೊಡಲಾಯಿತು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಸ ಬೇರ್ಪಡಿಸಿ ಎಂದಿದ್ದಕ್ಕೆ ಪೌರಕಾರ್ಮಿಕರ ಮೇಲೆ ಹಲ್ಲೆ; ಬಂಧನಕ್ಕೆ ಆಗ್ರಹ
ಕಾರ್ಮಿಕ ಇಲಾಖೆಯ ಭದ್ರಾವತಿ ಕಾರ್ಮಿಕ ನಿರೀಕ್ಷಕ ರಕ್ಷಿತ್ ತರಬೇತಿಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಉಪಾಧ್ಯಕ್ಷ ಸುರೇಶ್ ಹಾಗೂ ನಿರ್ದೇಶಕ ಭಾಷಾ. ಶ್ರೀಮತಿ ನೇತ್ರಾವತಿ ಹಾಗೂ ಸದಸ್ಯ ಕೆ ಮುರುಗನ್. ಶಬರೀಶ್, ಕುಮಾರಿ ಸುಪ್ರೀತಾ, ಬಿಸಲ್ ತರಬೇತಿದಾರ ಸಮರ್ಥ್ ಸೇರಿ ಹಲವು ಕಾರ್ಮಿಕರು ಉಪಸ್ಥಿತರಿದ್ದರು





