ಶಿವಮೊಗ್ಗ | ಸಮಸ್ಯೆಗಳ ಆಗರವಾಗಿದೆ ತೇವರೇಚಟ್ನಳ್ಳಿ ವಾರ್ಡ್‌; ಅಳಲು ಕೇಳುವವರೇ ಇಲ್ಲ

Date:

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ತೇವರೇಚಟ್ನಳ್ಳಿಯ ಸೇತುವೆ ನಿರ್ಮಾಣವಾಗಿ ನಾಲ್ಕೇ ವರ್ಷಕ್ಕೆ ಶಿಥಿಲಗೊಂಡಿದೆ. ಸೇತುವೆಯ  ತಡೆಗೋಡೆಗಳು ಬಿರುಕು ಬಿಟ್ಟಿವೆ. ಸೇತುವೆ ಯಾವಾಗ ಕುಸಿಯಾತ್ತದೋ ಎಂಬ ಆತಂಕದಲ್ಲೇ ಸಾರ್ವಜನಿಕರು ಸೇತುವೆಯನ್ನು ಬಳಸುತ್ತಿದ್ದಾರೆ.

ಸೇತುವೆಯು ತೇವರೇಚಟ್ನಳ್ಳಿಯಿಂದ ರಾಗಿಗುಡ್ಡ, ನವುಲೇ ಹಾಗೂ ಮುತ್ತೋಡ ಗ್ರಾಮಗಳಿಗೆ ಸಂಪರ್ಕಕೊಂಡಿಯಾಗಿದೆ. ಸೇತುವೆಗೆ ತೀಕ್ಷ್ಣ ತಿರುವಿದ್ದು, ಗುಂಡಿಗಳೂ ಬಿದ್ದಿವೆ. ರಾತ್ರಿ ವೇಳೆಯಲ್ಲಿ ಸೇತುವೆಯ ರಸ್ತೆ ಸರಿಯಾಗಿ ಕಾಣಿಸುವುದೇ ಕಷ್ಟವಾಗಿದೆ. ಸೇತುವೆ ಬದಿಗಳಲ್ಲಿ ವಿದ್ಯುತ್ ದೀಪಗಳಾಗಲೀ, ಸೂಚನಾ ಫಲಕಗಳಾಗಲಿ ಹಾಕಲಾಗಿಲ್ಲ. ರಾತ್ರಿ ವೇಳೆ ಸೇತುವೆ ಮೇಲೆ ಅಪಘಾತವಾಗುವ ಭಯ ಜನರಲ್ಲಿ ಕಾಡುತ್ತಿದೆ.

ತೇವರೇಚಟ್ನಳ್ಳಿಯಲ್ಲಿರುವ ಪದವಿ ಪೂರ್ವ ಕಾಲೇಜಿಗೆ ದಿನನಿತ್ಯ ಕಾಲೇಜು ಬಸ್‌ಗಳು ಓಡಾಡುತ್ತವೆ. ಒಂದು ಬದಿಯಿಂದ 4 ಚಕ್ರದ ವಾಹನ ಸೇತುವೆ ಮೇಲೆ ಬಂದರೆ, ಮತ್ತೊಂದು ಬದಿಯಿಂದ ಬರುವ ವಾಹನಕ್ಕೆ ಜಾಗವಿರುವುದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೆರೆ 1

ಸೇತುವೆ ಕೆಳಗಿರುವ ನಾಲೆಯೂ ಗೆಬ್ಬೆದ್ದು ನಾರುತ್ತಿದೆ. ಶೌಚಾಲಯದ ಕೊಳಕು ನೀರು, ಕಸ ಕಡ್ಡಿ ತ್ಯಾಜ್ಯಗಳಿಂದ ತುಂಬಿ ಕೊಳಚೆ ಗುಂಡಿಯಂತಾಗಿದೆ. ಆದರೂ, ಪಾಲಿಕೆ ಅಧಿಕಾರಿಗಳು ಅದನ್ನು ಸ್ವಚ್ಛಗೊಳಿಸಲು ಮುಂದಾಗಿಲ್ಲವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೇವರೇಚಟ್ನಳ್ಳಿ ವಾರ್ಡ್‌ನಲ್ಲಿನ ಚರಂಡಿ ನೀರು ನಿಂತಲ್ಲೇ ನಿಂತಿದೆ. ಚರಂಡಿಗಳು ಸ್ವಚ್ಛಗೊಳಿಸಿಲ್ಲ. ರಾಜಕಾಲುವೆಗೆ ಕಲುಷಿತ ನೀರು ಸೇರುವ ಹಾಗೆ ವ್ಯವಸ್ಥೆ ಮಾಡಿಲ್ಲ. ನಾಲೆ ಕೊಳಚೆಯಾಗಿರುವ ಕಾರಣ, ಇಲ್ಲಿನ ನಿವಾಸಿಗಳಿಗೆ ಸಾಂಕ್ರಾಮಿಕ ಕಾಯಿಲೆಗಳು ಹರಡುವ ಭೀತಿಯಲ್ಲಿ ಎದುರಾಗಿದೆ. ಮಹಾನಗರ ಪಾಲಿಕೆ ಸದಸ್ಯರು ವಾರ್ಡ್‌ಗೆ ಬರುವುದೇ ಇಲ್ಲ. ಸಮಸ್ಯೆಗಳ ಬಗ್ಗೆ ಗಮನ ಕೊಡುತ್ತಿಲ್ಲ.  ಏನು ನೋಡುತ್ತಿಲ್ಲ, ಸರಿಪಡಿಸುತ್ತಿಲ್ಲ ಎಂದು ದೂರುತ್ತಿದ್ದಾರೆ.

ಸತತವಾಗಿ 3 ಬಾರಿ ಕಾರ್ಪೊರೇಟರ್‌ ಆಗಿರವು ಎಚ್.ಸಿ ಯೋಗೇಶ್ ಅವರು ಕೂಡ ಸಮಸ್ಯೆ ಬಗ್ಗೆ ಗಮನ ಹರಿಸಿಲ್ಲ ಎಂದು ಕಿಡಿಕಾರಿದ್ದಾರೆ.

ಈದಿನ.ಕಾಮ್‌ ಜೊತೆ ಮಾತನಾಡಿದ ಕಾರ್ಪೊರೇಟರ್ ಎಚ್.ಸಿ ಯೋಗೇಶ್ ಅವರು ವಿಷಯದ ಬಗ್ಗೆ ಮಾಹಿತಿ ಪಡೆದುಕೊಂಡು ತಿಳಿಸುತ್ತೇನೆ ಎಂದಿರುತ್ತಾರೆ.

ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಈ.ದಿನ.ಕಾಮ್ ಜೊತೆ ಮಾತನಾಡಿ, ಸೇತುವೆ ಪಾಲಿಕೆ ವ್ಯಾಪ್ತಿಯಲ್ಲಿ ಬರುವುದಿಲ್ಲ. ಕಾಲುವೆಗಳಿಗೆ ಶೌಚಾಲಯದ ನೀರು ಹಾಗೂ ಕಸ ಕಡ್ಡಿ ತ್ಯಾಜ್ಯ ಸೇರದಂತೆ ತಡೆಗಟ್ಟಲು ಒಳಚರಂಡಿ ಮತ್ತು ನೀರಾವರಿ ಇಲಾಖೆ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇವೆ” ಎಂದು ತಿಳಿಸಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...