ಬೆಂ.ಗ್ರಾಮಾಂತರ | ರಾಜ್ಯೋತ್ಸವ ಪ್ರಶಸ್ತಿಗೆ ಸಾವಯವ ಕೃಷಿಕ ಶಿವನಾಪುರ ರಮೇಶ್‌ ಆಯ್ಕೆ

Date:

‘ನಾಡಿನೆಲ್ಲಡೆ ಹಸಿರು ಹಬ್ಬಬೇಕು, ಮಣ್ಣು ಫಲವತ್ತಾಗಿರಬೇಕು’ ಎನ್ನುವ ಆಶಯದೊಂದಿಗೆ ಸಾವಯವ ನರ್ಸರಿಯಲ್ಲಿ ತೊಡಗಿಸಿಕೊಂಡಿರುವ ಬೆಂ.ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಶಿವನಾಪುರ ರಮೇಶ್ ಅವರು ‘ತೇಜ ನರ್ಸರಿ’ ಮೂಲಕ ನಮ್ಮ ರಾಜ್ಯದಲ್ಲಷ್ಟೇ ಅಲ್ಲದೆ ಹೊರ ರಾಜ್ಯಗಳಲ್ಲೂ ಹೆಸರು ಮಾಡಿರುವ ಸಾವಯವ ಕೃಷಿಕ.

ತನ್ನ ಅಜ್ಜಿಯಿಂದ ಬಳುವಳಿಯಾಗಿ ಪಡೆದ ಕೃಷಿ ಜ್ಞಾನದಿಂದ ದೊಡ್ಡ ಸಾಧನೆ ಮಾಡಿದ್ದಾರೆ. ಸಾವಯವ ಪದ್ಧತಿಯಲ್ಲಿ ಹಣ್ಣಿನ ಗಿಡಗಳನ್ನು ಬೆಳೆಸಿ ಮಾರಾಟ ಮಾಡುವ ಹಾಗೂ ಅದೇ ಮಾದರಿಯಲ್ಲಿ ಬೆಳೆಸುವ ವಿಧಾನ ಕುರಿತು ಕೃಷಿಕರಿಗೆ ಮಾರ್ಗದರ್ಶನವನ್ನು ನೀಡುತ್ತ ಬಂದಿದ್ದಾರೆ.

ಮೂಲೆಗುಂಪಾಗುತ್ತಿದ್ದ ದೇವನಹಳ್ಳಿ ಚಕ್ಕೋತ ಹಣ್ಣನ್ನು ಮೂಲ ಸ್ವಾಧದಲ್ಲೇ ಅಭಿವೃದ್ಧಿಗೊಳಿಸಿ ವ್ಯಾಪಕ ಪ್ರಚಾರ ನೀಡಿ, ಬೆಳೆಯ ವಿಸ್ತೀರ್ಣಕ್ಕೆ ಕಾರಣರಾಗಿದ್ದಾರೆ. ರಮೇಶ್ ಅವರ ಪರಿಶ್ರಮ ಹಾಗೂ ಹೆಸರಘಟ್ಟ ಜಿಕೆವಿಕೆ ಸಂಸ್ಥೆಯ ಕೃಷಿ ವಿಜ್ಞಾನಿಗಳಿಂದ ದೇವನಹಳ್ಳಿಯ ಚಕ್ಕೋತ ಹಣ್ಣು ಭೌಗೋಳಿಕ ಸೂಚ್ಯಂಕ (ಜಿಐ) ಟ್ಯಾಗ್ ಪಡೆದಿದ್ದು ರಾಜ್ಯ ತೋಟಗಾರಿಕಾ ಕ್ಷೇತ್ರಕ್ಕೆ ಸಂದ ದೊಡ್ಡ ಗೌರವವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೇಜ ನರ್ಸರಿ ಹಣ್ಣಿನ ಗಿಡಗಳನ್ನು ಮಾರಾಟ ಮಾಡುವುದಕ್ಕೆ ಮಾತ್ರ ಸೀಮಿತವಾಗದೆ, ಬೆಂ.ಗ್ರಾಮಾಂತರ ಭಾಗದ ರೈತರು ಖರೀದಿಸುವ ಹಣ್ಣಿನ ಗಿಡವನ್ನು ಬೆಳೆಸುವ, ಮಣ್ಣಿನ ಫಲವತ್ತತೆ ಹೆಚ್ಚಿಸುವ, ಜೈವಿಕ ವಿಧಾನಗಳ ಮೂಲಕ ಕೀಟಗಳ ನಿರ್ವಹಣೆ ಸೇರಿದಂತೆ ಸಮಗ್ರ ಮಾಹಿತಿಯನ್ನು ತಿಳಿಸಿಕೊಡುವ ಮೂಲಕ ಸಾವಯವ ತೋಟಗಾರಿಕ ಕೃಷಿ ಉತ್ತೇಜಕರಾಗಿ ಕೆಲಸ ಮಾಡುತ್ತಿದ್ದಾರೆ.

ಕೃಷಿಯಿಂದ ವಿಮುಕರಾಗುತ್ತಿರುವ ಯುವ ಸಮುದಾಯವನ್ನು ಮರಳಿ ಮಣ್ಣಿನ ಕಡೆಗೆ ಬರುವಂತೆ ಮಾರ್ಗದರ್ಶನ ಮಾಡುವ ಕಾಯಕದಲ್ಲಿ ಸದಾ ನಿರತರಾಗಿರುವ ಶಿವನಾಪುರ ರಮೇಶ್‌ ಅವರು, ನಮ್ಮ ಮಣ್ಣಿನ ಫಲವತ್ತತೆ ಉಳಿದರೆ ಮಾತ್ರ ನಾಡಿನ ಪ್ರಾಣಿ, ಪಕ್ಷಿ, ಜನರ ಉಳಿವು ಎನ್ನುವ ಕಾಳಜಿಯೊಂದಿಗೆ ನಾಡಿನಲ್ಲಿ ತೋಟಗಾರಿಕೆ ಬೆಳೆ ವಿಸ್ತೀರ್ಣವಾಗಲು ಶ್ರಮಿಸುತ್ತಿದ್ದಾರೆ.

ದೇವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಸಹಜ ಸಮೃದ್ಧ ರೈತ ಉತ್ಪಾದಕ ಸಂಸ್ಥೆಯ ಸಂಸ್ಥಾಪಕ ಟ್ರಸ್ಟಿಯಾಗಿ, ಅಧ್ಯಕ್ಷರಾಗಿ, ಜೈವಿಕ ಕೃಷಿಕ್ ಸೊಸೈಟಿ ಸಂಸ್ಥಾಪಕ ಖಜಾಂಚಿ ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ : 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಬೆಂಗಳೂರಿನ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಚಕ್ಕೋತ ಸೇರಿದಂತೆ ವಿವಿಧ ಫಲೋತ್ಪನ್ನಗಳನ್ನು ಪ್ರದರ್ಶಿಸಿ‌, 6 ಬಾರಿ ಬಹುಮಾನ ಗಳಿಸಿದ್ದಾರೆ. ಎಂ.ಎಚ್.ಮರಿಗೌಡ ರಾಜ್ಯ ಪ್ರಶಸ್ತಿ, ಡಾ.ಜಿ.ಮಾದೇಗೌಡ ಪ್ರತಿಷ್ಠಾನದ ಸಾವಯವ ಕೃಷಿಕ ರಾಜ್ಯ ಪ್ರಶಸ್ತಿ, ರಾಜ್ಯ ಸರ್ಕಾರದ ಕೃಷಿ ಪಂಡಿತ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...